Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲವರಿಗೆ ತುಳಿಯುವ ಚಟ, ನಮಗೆ ಬೆಳೆಯುವ ಹಠ – ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಲವರಿಗೆ ತುಳಿಯುವ ಚಟ, ನಮಗೆ ಬೆಳೆಯುವ ಹಠ – ಸಿ.ಟಿ.ರವಿ

Bengaluru City

ಕೆಲವರಿಗೆ ತುಳಿಯುವ ಚಟ, ನಮಗೆ ಬೆಳೆಯುವ ಹಠ – ಸಿ.ಟಿ.ರವಿ

Public TV
Last updated: August 28, 2019 8:58 pm
Public TV
Share
3 Min Read
ct ravi
SHARE

ಬೆಂಗಳೂರು: ಕೆಲವರಿಗೆ ನಮ್ಮನ್ನು ತುಳಿಯುವ ಚಟ, ಆದರೆ ನಮಗೆ ಅವರ ಮುಂದೆ ಬೆಳೆಯುವ ಹಠ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

ಇಂದು ಸಂಜೆ 3.51ರ ವೇಳೆಗೆ ರವಿ ಅವರು, ಕೆಲವರಿಗೆ ನಮ್ಮನ್ನು ತುಳಿಯುವ ಚಟ, ಆದರೆ ನಮಗೆ ಅವರ ಮುಂದೆ ಬೆಳೆಯುವ ಹಠ ಎಂದು ಬರೆದು ನಂತರ ಇದು ವಾಟ್ಸಪ್ ನಲ್ಲಿ ಬಂದ ಸಂದೇಶ ಎಂದು ಬರೆದುಕೊಂಡಿದ್ದಾರೆ.

ರವಿ ಅವರ ಟ್ವೀಟ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯಾರು ಯಾರನ್ನು ತುಳಿಯಲು ಆಗುವುದಿಲ್ಲ. ಅತಿಯಾಗಿ ಬೆಳೆಸಲು ಆಗುವುದಿಲ್ಲ. ನಿಮ್ಮ ಕಾರ್ಯ ನಿಷ್ಠೆ, ನಿಮ್ಮ ಪ್ರಾಮಾಣಿಕತೆ, ಹಾಗೂ ನಿಮ್ಮ ಸ್ವಾಮಿ ನಿಷ್ಠೆ ಯಾವತ್ತೂ ಕಾಪಾಡಿಯೇ ಕಾಪಾಡುತ್ತೆ. ಹಠ ಎಲ್ಲ ಬಿಟ್ಟು ಜನರ ಜೊತೆ ಬೆರೆತು ಅಭಿವೃದ್ಧಿಯ ಕಡೆ ನಿಮ್ಮ ಹೆಚ್ಚಿನ ಗಮನ ಕೊಡಿ ಸರ್ ಎಂದು ಕೆಲವರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ.

"ಕೆಲವರಿಗೆ ನಮ್ಮನ್ನು ತುಳಿಯುವ ಚಟ, ಆದರೆ ನಮಗೆ ಅವರ ಮುಂದೆ ಬೆಳೆಯುವ ಹಠ".

ವಾಟ್ಸಾಪ್ ನಲ್ಲಿ ಬಂದ ಸಂದೇಶ . . .

— C T Ravi ???????? ಸಿ ಟಿ ರವಿ (@CTRavi_BJP) August 28, 2019

ಅಣ್ಣಾ ಹಾಗಾದ್ರೆ ನಿಮ್ಮನ್ನು ತುಳಿಯುವವರು ನಿಮ್ಮಲ್ಲೇ ಇದ್ದಾರೆ ಅಲ್ವೇ. ಪಾಪ ನಿಮಗೆ ಹೀಗಾಗಬಾರದಿತ್ತು, ಸೋತವ ಮಂತ್ರಿಯಾದ ಗೆದ್ದವ ಚೆಂಬು ಹಿಡ್ಕಂಡ ಎಂದು ಕೆಲವರು ಪ್ರತಿಕ್ರಿಯಿಸಿದರೆ ಮತ್ತೊಬ್ಬರು ಟ್ವಿಟ್ಟರಿನಲ್ಲಿ ವಾಟ್ಸಪ್ ಮೆಸೇಜ್ ಫಾರ್ವರ್ಡ್ ಮೆಸೇಜ್ ಹಾಕುವ ಬದಲು ಪ್ರವಾಸೋದ್ಯಮದ ಬಗ್ಗೆ ಮಾಹಿತಿ ಕೊಟ್ಟಿದ್ದರೆ ಚೆನ್ನಾಗಿರುತಿತ್ತು ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಸಂಘದ ಕಾರ್ಯಕರ್ತ ಅಧಿಕಾರಕ್ಕೆ ಆಸೆ ಪಡಬಾರದು, ಅಧಿಕಾರ ಬೇಕಾದರೆ ಸಂಘದಲ್ಲಿ ಇರಬಾರದು ಎಂದು ಹಾಗೂ ಇಂತಹ ಮೆಸೇಜ್‍ಗಳು ನಿಮ್ಮ ಘನತೆಗೆ ಧಕ್ಕೆ ತರುತ್ತವೆ. ಇಂತಹ ಮೆಸೇಜ್‍ಗಳನ್ನು ಪೋಸ್ಟ್ ಮಾಡಬೇಡಿ, ನಿಮಗೆ ಒಳ್ಳೆಯ ಖಾತೆಯನ್ನು ನೀಡಲಾಗಿದೆ. ದಯವಿಟ್ಟು ಇದನ್ನು ಸರಿಯಾಗಿ ನಿರ್ವಹಿಸಿ, ಈ ಸಂದೇಶವು ನಿಮ್ಮ ಆಂತರಿಕ ಬಿರುಕನ್ನು ಎತ್ತಿ ತೋರಿಸುತ್ತದೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

CM BSY

ಇದೇ ತರ ಪಕ್ಷ ವಿರೋಧ ಮಾಡುತ್ತಿದ್ದರೆ, ನಿಮಗೂ ಗೇಟ್ ಪಾಸ್ ಕೊಡುತ್ತಾರೆ ಹುಷಾರ್, ನಮಗೆ ನಮಗೆ ಪಕ್ಷ ಮುಖ್ಯವೇ ಹೊರತು ವ್ಯಕ್ತಿಯಲ್ಲ ಎಂದು ಇನ್ನೂ ಕೆಲವರು ಟೀಕಿಸಿದ್ದಾರೆ. ಮೋದಿಯವರ ಕನಸು ಭಾರತವನ್ನು ಅತ್ಯುನ್ನತ್ತ ಪ್ರವಾಸಿ ತಾಣ ಮಾಡಬೇಕು ಎನ್ನುವುದು, ಅದಕ್ಕೆ ಹೆಗಲು ಕೊಟ್ಟು ದುಡೀತೀರಾ ಅಂತ ನಂಬಿಕೆ ಇದೆ ಗುಡ್ ಲಕ್. ತುಳಿಯೋರು ಎಷ್ಟು ಅಂತ ತುಳೀತಾರೆ, ಒಂದ್ ದಿನ ಕೊಚ್ಚಿಕೊಂಡು ಹೋಗ್ತಾರೆ ತಲೆ ಕೆಡಿಸ್ಕೊಬೇಡಿ ಎಂದು ಪ್ರತಿಕ್ರಿಯಿಸಿದ್ದಾರೆ.

ಇರಲಿ ಸರ್, ಹೊರಗಿನ ಮಾತುಗಳ ಬಗ್ಗೆ ತಲೆಗೆ ಹಚ್ಚಿಕೊಳ್ಳಬೇಡಿ, ಜನರಿಗೆ ಏನು ಬೇಕು ಅದರ ಬಗ್ಗೆ ಚಿಂತನೆ ಮಾಡಿ ಎಂದು ಇನ್ನು ಕೆಲವರು ಕಮೆಂಟ್ ಮಾಡಿದ್ದಾರೆ. ಒಟ್ಟೆರೆಯಾಗಿ ಕೆಲವರು ಸಿ.ಟಿ.ರವಿ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಇನ್ನೂ ಕೆಲವರು ಒಳ್ಳೆಯ ಖಾತೆ ಸಿಕ್ಕಿದೆ ಕೆಲಸ ಮಾಡಿ ಎಂದು ಧೈರ್ಯ ತುಂಬಿದ್ದಾರೆ.

ಉನ್ನತ ಶಿಕ್ಷಣ ಖಾತೆಯ ನಿರೀಕ್ಷೆಯಲ್ಲಿದ್ದ ಸಿ.ಟಿ.ರವಿ ಅವರಿಗೆ ಪ್ರವಾಸೋದ್ಯಮ ಖಾತೆ ನೀಡಲಾಗಿದ್ದು, ಖಾತೆ ಹಂಚಿಕೆ ನಂತರ ಸಿ.ಟಿ.ರವಿ ಅವರು ಅಸಮಾಧಾನಗೊಂಡು ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಹಬ್ಬಿತ್ತು. ನಂತರ ಸಿ.ಟಿ.ರವಿ ಅವರೇ ಸರಣಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದರು.

ನಾನು ಯಾರ ಮುಂದೆಯೂ ಮಂತ್ರಿಸ್ಥಾನವನ್ನೇ ಕೇಳಿರಲಿಲ್ಲ. ಇನ್ನು ಖಾತೆಯ ಬಗ್ಗೆ ಯಾಕೆ ಕೇಳಲಿ ? ? ?

— C T Ravi ???????? ಸಿ ಟಿ ರವಿ (@CTRavi_BJP) August 26, 2019

ನಾನು ಯಾರ ಮುಂದೆಯೂ ಮಂತ್ರಿಸ್ಥಾನವನ್ನೇ ಕೇಳಿರಲಿಲ್ಲ. ಇನ್ನು ಖಾತೆಯ ಬಗ್ಗೆ ಯಾಕೆ ಕೇಳಲಿ? ನನ್ನ ಕಡೆ ಸಂಶಯದ ಬೆಟ್ಟು ತೋರಿಸುವವರೇ, ನಾನು ಎಂದೂ ಅವಕಾಶವಾದ ರಾಜಕಾರಣ ಮಾಡಿಲ್ಲ ಮತ್ತು ಅಧಿಕಾರದಲ್ಲಿ ಇರುವವರನ್ನು ಓಲೈಸಿಕೊಂಡು ಲಾಭಗಳಿಸುವ ರಾಜಕಾರಣವನ್ನು ಮಾಡಿಲ್ಲ. ನಾನು ಅಸಾಮಾಧಾನಿತನು ಅಲ್ಲ ಬಂಡಾಯಗಾರನೂ ಅಲ್ಲ. ನನ್ನ ನಿಷ್ಠೆ ಕೇವಲ ಬಿಜೆಪಿಗೆ. ಆದರೆ ನಾನು ಸಿದ್ದಾಂತ ನಿಷ್ಠ ಸ್ವಾಭಿಮಾನಿ. ಸ್ವಾಭಿಮಾನಕ್ಕೆ ಧಕ್ಕೆ ಆದಾಗ ನನ್ನೊಳಗಿನ ಹೋರಾಟಗಾರ ಎದ್ದು ನಿಲ್ಲುತ್ತಾನೆ. ನಾನೇನು ಮಾಡಲಿ, ನಾನು ಜನರ ನಡುವಿನಿಂದ ಬೆಳೆದು ಬಂದ ಹೋರಾಟಗಾರ ಎಂದು ತಿಳಿಸಿದ್ದರು.

TAGGED:Account Sharingbs yeddyurappaCT RaviministerPublic TVಖಾತೆ ಹಂಚಿಕೆಪಬ್ಲಿಕ್ ಟಿವಿಸಚಿವರುಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Kushalnagar
Districts

ನಾಯಿಯಿಂದ ಚಿರತೆ ಬಾಯಿಗೆ ಜನ – ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

Public TV
By Public TV
19 minutes ago
Suicide Bomber
Latest

ಪಾಕ್‌ ಮದುವೆ ಸಂಭ್ರಮದಲ್ಲಿ ದುರಂತ – ಆತ್ಮಾಹುತಿ ಬಾಂಬ್‌ ದಾಳಿಗೆ 7 ಬಲಿ, 25 ಮಂದಿಗೆ ಗಾಯ

Public TV
By Public TV
46 minutes ago
Yadagiri Mudanuru
Districts

ದೇವರ ದಾಸಿಮಯ್ಯ ಪುಣ್ಯಕ್ಷೇತ್ರದಲ್ಲಿ ಅಡಗಿದೆ ಸಂಪತ್ತು – ಲಕ್ಕುಂಡಿಯಂತೆ ಯಾದಗಿರಿಯಲ್ಲೂ ಉತ್ಖನನ

Public TV
By Public TV
1 hour ago
Sheikh Hasina and Muhammad Yunus
Latest

ತಾಯ್ನಾಡಿನ ರಕ್ತ ಸೋರುತ್ತಿದೆ – ಯೂನಸ್‌ ಸರ್ಕಾರ ಕಿತ್ತೊಗೆಯಲು ಶೇಖ್ ಹಸೀನಾ ಕರೆ

Public TV
By Public TV
1 hour ago
Vijayapura Raid 1
Districts

48 ಪ್ರಕರಣದ 14 ಆರೋಪಿಗಳು ಅರೆಸ್ಟ್ – 1.17 ಕೋಟಿ ಮೌಲ್ಯದ ಸ್ವತ್ತು ಜಪ್ತಿ

Public TV
By Public TV
2 hours ago
JDS
Districts

ಜೆಡಿಎಸ್‌ಗೆ 25 ರ ಸಂಭ್ರಮ – ಭದ್ರಕೋಟೆ ಹಾಸನದಲ್ಲಿ ಇಂದು ಬೃಹತ್ ಸಮಾವೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?