Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲವರಿಗೆ ತುಳಿಯುವ ಚಟ, ನಮಗೆ ಬೆಳೆಯುವ ಹಠ – ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಲವರಿಗೆ ತುಳಿಯುವ ಚಟ, ನಮಗೆ ಬೆಳೆಯುವ ಹಠ – ಸಿ.ಟಿ.ರವಿ

Bengaluru City

ಕೆಲವರಿಗೆ ತುಳಿಯುವ ಚಟ, ನಮಗೆ ಬೆಳೆಯುವ ಹಠ – ಸಿ.ಟಿ.ರವಿ

Public TV
Last updated: August 28, 2019 8:58 pm
Public TV
Share
3 Min Read
ct ravi
SHARE

ಬೆಂಗಳೂರು: ಕೆಲವರಿಗೆ ನಮ್ಮನ್ನು ತುಳಿಯುವ ಚಟ, ಆದರೆ ನಮಗೆ ಅವರ ಮುಂದೆ ಬೆಳೆಯುವ ಹಠ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

ಇಂದು ಸಂಜೆ 3.51ರ ವೇಳೆಗೆ ರವಿ ಅವರು, ಕೆಲವರಿಗೆ ನಮ್ಮನ್ನು ತುಳಿಯುವ ಚಟ, ಆದರೆ ನಮಗೆ ಅವರ ಮುಂದೆ ಬೆಳೆಯುವ ಹಠ ಎಂದು ಬರೆದು ನಂತರ ಇದು ವಾಟ್ಸಪ್ ನಲ್ಲಿ ಬಂದ ಸಂದೇಶ ಎಂದು ಬರೆದುಕೊಂಡಿದ್ದಾರೆ.

ರವಿ ಅವರ ಟ್ವೀಟ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯಾರು ಯಾರನ್ನು ತುಳಿಯಲು ಆಗುವುದಿಲ್ಲ. ಅತಿಯಾಗಿ ಬೆಳೆಸಲು ಆಗುವುದಿಲ್ಲ. ನಿಮ್ಮ ಕಾರ್ಯ ನಿಷ್ಠೆ, ನಿಮ್ಮ ಪ್ರಾಮಾಣಿಕತೆ, ಹಾಗೂ ನಿಮ್ಮ ಸ್ವಾಮಿ ನಿಷ್ಠೆ ಯಾವತ್ತೂ ಕಾಪಾಡಿಯೇ ಕಾಪಾಡುತ್ತೆ. ಹಠ ಎಲ್ಲ ಬಿಟ್ಟು ಜನರ ಜೊತೆ ಬೆರೆತು ಅಭಿವೃದ್ಧಿಯ ಕಡೆ ನಿಮ್ಮ ಹೆಚ್ಚಿನ ಗಮನ ಕೊಡಿ ಸರ್ ಎಂದು ಕೆಲವರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ.

"ಕೆಲವರಿಗೆ ನಮ್ಮನ್ನು ತುಳಿಯುವ ಚಟ, ಆದರೆ ನಮಗೆ ಅವರ ಮುಂದೆ ಬೆಳೆಯುವ ಹಠ".

ವಾಟ್ಸಾಪ್ ನಲ್ಲಿ ಬಂದ ಸಂದೇಶ . . .

— Ravi C T 🇮🇳 ರವಿ ಸಿ ಟಿ (@CTRavi_BJP) August 28, 2019

ಅಣ್ಣಾ ಹಾಗಾದ್ರೆ ನಿಮ್ಮನ್ನು ತುಳಿಯುವವರು ನಿಮ್ಮಲ್ಲೇ ಇದ್ದಾರೆ ಅಲ್ವೇ. ಪಾಪ ನಿಮಗೆ ಹೀಗಾಗಬಾರದಿತ್ತು, ಸೋತವ ಮಂತ್ರಿಯಾದ ಗೆದ್ದವ ಚೆಂಬು ಹಿಡ್ಕಂಡ ಎಂದು ಕೆಲವರು ಪ್ರತಿಕ್ರಿಯಿಸಿದರೆ ಮತ್ತೊಬ್ಬರು ಟ್ವಿಟ್ಟರಿನಲ್ಲಿ ವಾಟ್ಸಪ್ ಮೆಸೇಜ್ ಫಾರ್ವರ್ಡ್ ಮೆಸೇಜ್ ಹಾಕುವ ಬದಲು ಪ್ರವಾಸೋದ್ಯಮದ ಬಗ್ಗೆ ಮಾಹಿತಿ ಕೊಟ್ಟಿದ್ದರೆ ಚೆನ್ನಾಗಿರುತಿತ್ತು ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಸಂಘದ ಕಾರ್ಯಕರ್ತ ಅಧಿಕಾರಕ್ಕೆ ಆಸೆ ಪಡಬಾರದು, ಅಧಿಕಾರ ಬೇಕಾದರೆ ಸಂಘದಲ್ಲಿ ಇರಬಾರದು ಎಂದು ಹಾಗೂ ಇಂತಹ ಮೆಸೇಜ್‍ಗಳು ನಿಮ್ಮ ಘನತೆಗೆ ಧಕ್ಕೆ ತರುತ್ತವೆ. ಇಂತಹ ಮೆಸೇಜ್‍ಗಳನ್ನು ಪೋಸ್ಟ್ ಮಾಡಬೇಡಿ, ನಿಮಗೆ ಒಳ್ಳೆಯ ಖಾತೆಯನ್ನು ನೀಡಲಾಗಿದೆ. ದಯವಿಟ್ಟು ಇದನ್ನು ಸರಿಯಾಗಿ ನಿರ್ವಹಿಸಿ, ಈ ಸಂದೇಶವು ನಿಮ್ಮ ಆಂತರಿಕ ಬಿರುಕನ್ನು ಎತ್ತಿ ತೋರಿಸುತ್ತದೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

CM BSY

ಇದೇ ತರ ಪಕ್ಷ ವಿರೋಧ ಮಾಡುತ್ತಿದ್ದರೆ, ನಿಮಗೂ ಗೇಟ್ ಪಾಸ್ ಕೊಡುತ್ತಾರೆ ಹುಷಾರ್, ನಮಗೆ ನಮಗೆ ಪಕ್ಷ ಮುಖ್ಯವೇ ಹೊರತು ವ್ಯಕ್ತಿಯಲ್ಲ ಎಂದು ಇನ್ನೂ ಕೆಲವರು ಟೀಕಿಸಿದ್ದಾರೆ. ಮೋದಿಯವರ ಕನಸು ಭಾರತವನ್ನು ಅತ್ಯುನ್ನತ್ತ ಪ್ರವಾಸಿ ತಾಣ ಮಾಡಬೇಕು ಎನ್ನುವುದು, ಅದಕ್ಕೆ ಹೆಗಲು ಕೊಟ್ಟು ದುಡೀತೀರಾ ಅಂತ ನಂಬಿಕೆ ಇದೆ ಗುಡ್ ಲಕ್. ತುಳಿಯೋರು ಎಷ್ಟು ಅಂತ ತುಳೀತಾರೆ, ಒಂದ್ ದಿನ ಕೊಚ್ಚಿಕೊಂಡು ಹೋಗ್ತಾರೆ ತಲೆ ಕೆಡಿಸ್ಕೊಬೇಡಿ ಎಂದು ಪ್ರತಿಕ್ರಿಯಿಸಿದ್ದಾರೆ.

ಇರಲಿ ಸರ್, ಹೊರಗಿನ ಮಾತುಗಳ ಬಗ್ಗೆ ತಲೆಗೆ ಹಚ್ಚಿಕೊಳ್ಳಬೇಡಿ, ಜನರಿಗೆ ಏನು ಬೇಕು ಅದರ ಬಗ್ಗೆ ಚಿಂತನೆ ಮಾಡಿ ಎಂದು ಇನ್ನು ಕೆಲವರು ಕಮೆಂಟ್ ಮಾಡಿದ್ದಾರೆ. ಒಟ್ಟೆರೆಯಾಗಿ ಕೆಲವರು ಸಿ.ಟಿ.ರವಿ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಇನ್ನೂ ಕೆಲವರು ಒಳ್ಳೆಯ ಖಾತೆ ಸಿಕ್ಕಿದೆ ಕೆಲಸ ಮಾಡಿ ಎಂದು ಧೈರ್ಯ ತುಂಬಿದ್ದಾರೆ.

ಉನ್ನತ ಶಿಕ್ಷಣ ಖಾತೆಯ ನಿರೀಕ್ಷೆಯಲ್ಲಿದ್ದ ಸಿ.ಟಿ.ರವಿ ಅವರಿಗೆ ಪ್ರವಾಸೋದ್ಯಮ ಖಾತೆ ನೀಡಲಾಗಿದ್ದು, ಖಾತೆ ಹಂಚಿಕೆ ನಂತರ ಸಿ.ಟಿ.ರವಿ ಅವರು ಅಸಮಾಧಾನಗೊಂಡು ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಹಬ್ಬಿತ್ತು. ನಂತರ ಸಿ.ಟಿ.ರವಿ ಅವರೇ ಸರಣಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದರು.

ನಾನು ಯಾರ ಮುಂದೆಯೂ ಮಂತ್ರಿಸ್ಥಾನವನ್ನೇ ಕೇಳಿರಲಿಲ್ಲ. ಇನ್ನು ಖಾತೆಯ ಬಗ್ಗೆ ಯಾಕೆ ಕೇಳಲಿ ? ? ?

— Ravi C T 🇮🇳 ರವಿ ಸಿ ಟಿ (@CTRavi_BJP) August 26, 2019

ನಾನು ಯಾರ ಮುಂದೆಯೂ ಮಂತ್ರಿಸ್ಥಾನವನ್ನೇ ಕೇಳಿರಲಿಲ್ಲ. ಇನ್ನು ಖಾತೆಯ ಬಗ್ಗೆ ಯಾಕೆ ಕೇಳಲಿ? ನನ್ನ ಕಡೆ ಸಂಶಯದ ಬೆಟ್ಟು ತೋರಿಸುವವರೇ, ನಾನು ಎಂದೂ ಅವಕಾಶವಾದ ರಾಜಕಾರಣ ಮಾಡಿಲ್ಲ ಮತ್ತು ಅಧಿಕಾರದಲ್ಲಿ ಇರುವವರನ್ನು ಓಲೈಸಿಕೊಂಡು ಲಾಭಗಳಿಸುವ ರಾಜಕಾರಣವನ್ನು ಮಾಡಿಲ್ಲ. ನಾನು ಅಸಾಮಾಧಾನಿತನು ಅಲ್ಲ ಬಂಡಾಯಗಾರನೂ ಅಲ್ಲ. ನನ್ನ ನಿಷ್ಠೆ ಕೇವಲ ಬಿಜೆಪಿಗೆ. ಆದರೆ ನಾನು ಸಿದ್ದಾಂತ ನಿಷ್ಠ ಸ್ವಾಭಿಮಾನಿ. ಸ್ವಾಭಿಮಾನಕ್ಕೆ ಧಕ್ಕೆ ಆದಾಗ ನನ್ನೊಳಗಿನ ಹೋರಾಟಗಾರ ಎದ್ದು ನಿಲ್ಲುತ್ತಾನೆ. ನಾನೇನು ಮಾಡಲಿ, ನಾನು ಜನರ ನಡುವಿನಿಂದ ಬೆಳೆದು ಬಂದ ಹೋರಾಟಗಾರ ಎಂದು ತಿಳಿಸಿದ್ದರು.

TAGGED:Account Sharingbs yeddyurappaCT RaviministerPublic TVಖಾತೆ ಹಂಚಿಕೆಪಬ್ಲಿಕ್ ಟಿವಿಸಚಿವರುಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
5 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
5 hours ago
01 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-1

Public TV
By Public TV
5 hours ago
03 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-2

Public TV
By Public TV
6 hours ago
02 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-3

Public TV
By Public TV
6 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?