Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಟಿಪಿಎಸ್, ವೈಟಿಪಿಎಸ್‌ನಿಂದ ನದಿಗೆ ವಿಷಕಾರಿ ರಾಸಾಯನಿಕ ಬಿಡುಗಡೆ – ಕಲುಷಿತಗೊಂಡ ಕೃಷ್ಣೆಯ ಒಡಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆರ್‌ಟಿಪಿಎಸ್, ವೈಟಿಪಿಎಸ್‌ನಿಂದ ನದಿಗೆ ವಿಷಕಾರಿ ರಾಸಾಯನಿಕ ಬಿಡುಗಡೆ – ಕಲುಷಿತಗೊಂಡ ಕೃಷ್ಣೆಯ ಒಡಲು

Districts

ಆರ್‌ಟಿಪಿಎಸ್, ವೈಟಿಪಿಎಸ್‌ನಿಂದ ನದಿಗೆ ವಿಷಕಾರಿ ರಾಸಾಯನಿಕ ಬಿಡುಗಡೆ – ಕಲುಷಿತಗೊಂಡ ಕೃಷ್ಣೆಯ ಒಡಲು

Public TV
Last updated: November 12, 2024 2:55 pm
Public TV
Share
2 Min Read
Raichuru krishna river
SHARE

ರಾಯಚೂರು: ಜಿಲ್ಲೆಯ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಹಾರುವ ಬೂದಿ ನಿರ್ವಹಣೆ ಕೊರತೆಯಿಂದ ಇಲ್ಲಿನ ಜನ ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ಗಾಳಿಯಲ್ಲಿ ತೇಲಿ ಬರುವ ಬೂದಿ ಸಮಸ್ಯೆ ಒಂದೆಡೆಯಾದರೆ, ದ್ರವರೂಪದ ಬೂದಿ ಸಂಗ್ರಹಣ ಹೊಂಡಗಳಿಂದ ಈಗ ಹೊಸ ಸಮಸ್ಯೆ ಎದುರಾಗಿದೆ. ಕೃಷ್ಣಾ ನದಿಯನ್ನೇ (Krishna River) ಮಾಲಿನ್ಯ ಮಾಡಲು ಹೊರಟಿರುವ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನ ನಾನಾ ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ.

ಜಿಲ್ಲೆಯ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಂದ ರಾಜ್ಯಕ್ಕೆ ಶೇ.45 ರಷ್ಟು ಪ್ರಮಾಣದ ವಿದ್ಯುತ್ ಸರಬರಾಜಾಗುತ್ತಿದೆ. ನಿಜ, ಆದರೆ ದೀಪದ ಕೆಳಗೆ ಕತ್ತಲು ಅನ್ನುವ ಹಾಗೇ ಇಡೀ ರಾಜ್ಯಕ್ಕೆ ಬೆಳಕು ನೀಡುವ ವಿದ್ಯುತ್ ಕೇಂದ್ರಗಳಾದ ಆರ್‌ಟಿಪಿಎಸ್ ಹಾಗೂ ವೈಟಿಪಿಎಸ್‌ನಿಂದ ಜಿಲ್ಲೆಯ ಜನ ನಾನಾ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಗಾಳಿಯಲ್ಲಿ ತೇಲಿ ನೇರವಾಗಿ ಮನುಷ್ಯರ ಶ್ವಾಸಕೋಶ ಸೇರುವ ಬೂದಿ ಸಮಸ್ಯೆ ಹಾಗೂ ದ್ರವ ರೂಪದ ತಳಬೂದಿಯನ್ನ ನೇರವಾಗಿ ಕೃಷ್ಣಾನದಿಗೆ ಹರಿಸುವ ಮೂಲಕ ಆರ್‌ಟಿಪಿಎಸ್ (RTPS) ಹಾಗೂ ವೈಟಿಪಿಎಸ್ (YTPS)  ಅಧಿಕಾರಿಗಳು ಜನರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಇದನ್ನೂ ಓದಿ: ಸಂಡೂರು ಉಪ ಚುನಾವಣೆ – ಮಾಸ್ಟರಿಂಗ್ ಕಾರ್ಯ ಪೂರ್ಣ

ವಿದ್ಯುತ್ ಉತ್ಪಾದನೆಗಾಗಿ ಕಲ್ಲಿದ್ದಲು ಸುಟ್ಟಾಗ ಬೂದಿಯಾಗಿ ಬರುವ ಹಾರುವ ಬೂದಿ ನಾನಾ ರಾಸಾಯನಿಕ ಅಂಶಗಳನ್ನ ಹೊಂದಿರುತ್ತದೆ. ಇದಕ್ಕೆ ನೀರನ್ನ ಬೆರಸಿ ಹೊಂಡಕ್ಕೆ ಹರಿಸಲಾಗುತ್ತದೆ. ಈ ಹೊಂಡಗಳ ನಿರ್ವಹಣೆ ವೈಫಲ್ಯದಿಂದ ನಾನಾ ರಾಸಾಯನಿಕ ಪದಾರ್ಥಗಳ ಮಿಶ್ರಣವಾದ ಬೂದಿಯನ್ನ ನೇರವಾಗಿ ಕೃಷ್ಣಾ ನದಿಗೆ ಬಿಡಲಾಗುತ್ತಿದೆ. ಇದು ಜಲಚರಗಳಿಗೆ ಜೀವಕ್ಕೆ ಮಾರಕವಾಗಿದೆ. ಕೃಷ್ಣಾ ನದಿ ನೀರನ್ನೇ ರಾಯಚೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಕುಡಿಯಲು ಸರಬರಾಜು ಮಾಡುವುದರಿಂದ ಜನ ಈಗ ನೀರು ಕುಡಿಯಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.

ನದಿ ಪಾತ್ರದ ದೇವಸುಗೂರು ಸೇರಿದಂತೆ ಹಲವು ಹಳ್ಳಿಗಳ ಜನ ಈ ವಿದ್ಯುತ್ ಕೇಂದ್ರಗಳಿಂದ ನೇರ ದುಷ್ಪಪರಿಣಾಮಗಳಿಗೆ ಆಗಾಗ ತುತ್ತಾಗುತ್ತಲೇ ಇದ್ದಾರೆ. ಈ ಹಿಂದೆಯೂ ಬೂದಿಯನ್ನು ನೇರವಾಗಿ ಕೃಷ್ಣಾನದಿಗೆ ಬಿಡಲಾಗಿತ್ತು. ಜನ ಮೈತುರಿಕೆ ಸೇರಿದಂತೆ ಚರ್ಮರೋಗಗಳಿಗೆ ತುತ್ತಾಗಿದ್ದರು. ಆರೋಗ್ಯದ ಮೇಲೂ ನಾನಾ ಪರಿಣಾಮ ಬೀರಿತ್ತು. ಈಗ ಪುನಃ ನದಿಗೆ ಬೂದಿ ಎಗ್ಗಿಲ್ಲದೆ ಬಿಡಲಾಗುತ್ತಿದೆ. ಸಾಮಾನ್ಯವಾಗಿ ಮಳೆಗಾಲ ಹಾಗೂ ನದಿಯಲ್ಲಿ ನೀರು ತುಂಬಿ ಹರಿಯುವಾಗ ಯಾವ ಮುಲಾಜಿಲ್ಲದೆ ಬೂದಿಯನ್ನು ನದಿಗೆ ಬಿಡುತ್ತಾರೆ. ಆದರೆ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಕಡಿಮೆಯಿದ್ದಾಗ ಜನ ಹಾಗೂ ಜಲಚರಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಸಂಗ್ರಹವಾಗುವ ಬೂದಿಯನ್ನ ಸರಿಯಾಗಿ ನಿರ್ವಹಣೆ ಮಾಡದೇ ಅಧಿಕಾರಿಗಳು ನೇರವಾಗಿ ನದಿಗೆ ಹರಿಬಿಟ್ಟು ಬೇಜವಾಬ್ದಾರಿತನ ಮೆರೆಯುತ್ತಿದ್ದಾರೆ. ಬೂದಿ ಸಮಸ್ಯೆಯಿಂದ ನಿತ್ಯ ನರಕಯಾತನೆ ಅನುಭವಿಸುತ್ತಿರುವ ಜನರಿಗೆ ಈಗ ಹೊಸ ಸಮಸ್ಯೆ ತಲೆದೂರಿದಂತಾಗಿದೆ. ಜನರ ಆರೋಗ್ಯದ ಮೇಲೆ ಪರಿಣಾಮ ಕಾಣಿಸಿಕೊಳ್ಳುವ ಮೊದಲೆ ಅಧಿಕಾರಿಗಳು ಎಚ್ಚೆತ್ತು ಕ್ರಮ ಕೈಗೊಳ್ಳಬೇಕಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತ ಗಮನ ಹರಿಸಬೇಕಿದೆ.ಇದನ್ನೂ ಓದಿ: ಶಿವಮೊಗ್ಗ | ದಾನವಾಡಿ ಅರಣ್ಯದಲ್ಲಿ ಕಡವೆ ಬೇಟೆ – ಆರೋಪಿ ಅರೆಸ್ಟ್

TAGGED:Krishna riverraichuruRTPSWastage DisposeYTPSಆರ್‍ಟಿಪಿಎಸ್ರಾಯಚೂರುವೈಟಿಪಿಎಸ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
58 seconds ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
8 minutes ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
16 minutes ago
Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
45 minutes ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
47 minutes ago
hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?