ಸಾಂದರ್ಭಿಕ ಚಿತ್ರ
ಕೋಲಾರ: ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲ್ವೇ ಟ್ರ್ಯಾಕ್ ಮ್ಯಾನ್ ಹಾಗೂ ಗ್ಯಾಂಗ್ ಮ್ಯಾನ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ವರದಾಪುರ ಬಳಿಯ ರೈಲ್ವೇ ಗೇಟ್ ಬಳಿ ನಡೆದಿದೆ.
ರಾಜಸ್ಥಾನ ಮೂಲದ ಹರೀ ಸಿಂಗ್ ಮೀನಾ (30) ಹಾಗೂ ಕುಪ್ಪಂ ತಾಲೂಕಿನ ಬಂಡಪಲ್ಲಿ ಗ್ರಾಮದ ರಾಮಸ್ವಾಮಿ(28) ಮೃತಪಟ್ಟ ರೈಲ್ವೇ ನೌಕರರು. ಬುಧವಾರ ರಾತ್ರಿ ಎಂದಿನಂತೆ ಇಬ್ಬರೂ ನೌಕರರು ರೈಲ್ವೇ ಟ್ರ್ಯಾಕ್ ಗಳನ್ನು ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ರೈಲ್ವೇ ಪೊಲೀಸರು ಹಾಗೂ ಸ್ಟೇಷನ್ ಮಾಸ್ಟರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಂಗಾರಪೇಟೆ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv