ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ದಂಡದ ಬಾಕಿ ಮೊತ್ತ ಪಾವತಿಯ ಶೇ. 50 ವಿನಾಯಿತಿಯ ಕಾಲಮಿತಿಯನ್ನು 3 ತಿಂಗಳು ವಿಸ್ತರಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ (AAP) ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಒತ್ತಾಯಿಸಿದರು.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆದ ಜಗದೀಶ್ ವಿ ಸದಂ, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಶಿಫಾರಸಿನಂತೆ, ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ದಂಡವನ್ನು ಫೆ. 11ರೊಳಗೆ ಪಾವತಿಸಿದಲ್ಲಿ ಶೇ. 50% ವಿನಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗೆ ವಿನಾಯಿತಿ ನೀಡುವ ಮೂಲಕ ವಾಹನ ಸವಾರರಿಗೆ ನೆರವಾಗುವುದು ಸ್ವಾಗತಾರ್ಹ. ಆದರೆ ಅತ್ಯಲ್ಪ ಅವಧಿಯ ಕಾಲಮಿತಿ ನಿಗದಿಪಡಿಸುವ ಮೂಲಕ ಕೇವಲ ಶ್ರೀಮಂತ ವಾಹನ ಸವಾರರಿಗೆ ಮಾತ್ರ ನೆರವಾಗಲು ರಾಜ್ಯ ಸರ್ಕಾರ (State Government) ಮುಂದಾಗಿರುವುದು ಖಂಡನೀಯ ಎಂದು ಕಿಡಿಕಾರಿದರು.
ಕೇವಲ ಒಂದು ವಾರಗಳ ಸಮಯಾವಕಾಶ ನೀಡುವುದರಿಂದ ಬಡ ಮತ್ತು ಮಧ್ಯಮ ವರ್ಗದ ವಾಹನ ಸವಾರರಿಗೆ ಹಣ ಹೊಂದಿಸಲು ಕಷ್ಟವಾಗುತ್ತದೆ. ಅಲ್ಲದೇ, ಅನೇಕ ವಾಹನ ಸವಾರರು ತಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಸುವುದು ಸೇರಿದಂತೆ ನಾನಾ ರೀತಿಯ ಅಗತ್ಯ ಖರ್ಚುಗಳು ಈ ಸಮಯದಲ್ಲಿರುತ್ತದೆ. ಇದನ್ನೂ ಓದಿ: ಜನಾರ್ದನ ಪೂಜಾರಿ ಪ್ರಭಾವ ಬಳಸಿ ಟಿಕೆಟ್ಗಾಗಿ ಭಾರೀ ಕಸರತ್ತು
ವಿನಾಯಿತಿಯನ್ನು ಯೋಜನೆಯನ್ನು ದಿಢೀರ್ ಘೋಷಿಸಿರುವುದರಿಂದ ಮೊದಲೇ ಹಣವನ್ನು ಕೂಡಿಟ್ಟುಕೊಳ್ಳಲು ವಾಹನ ಸವಾರರಿಗೆ ಅವಕಾಶ ಸಿಕ್ಕಿರುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿ ಅವರು ಈ ವಿನಾಯಿತಿ ಯೋಜನೆಯ ಕಾಲಮಿತಿಯನ್ನು 3 ತಿಂಗಳ ತನಕ ವಿಸ್ತರಿಸಬೇಕು. ಈ ಮೂಲಕ ಬಡ ಹಾಗೂ ಮಧ್ಯಮ ವರ್ಗದ ವಾಹನ ಸವಾರರಿಗೂ ವಿನಾಯಿತಿಯ ಫಲಾನುಭವ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ತರೀಕೆರೆ ಶಾಸಕ ಗೋಪಿಕೃಷ್ಣ – ಬಾಳೆಹಣ್ಣಿನ ಮೇಲೆ ಬರೆದು ತೇರಿಗೆ ಎಸೆದ ಅಭಿಮಾನಿಗಳು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k