ಬೆಂಗಳೂರು: ಹಳೆಯ ಮೈಸೂರು (Mysuru) ರಸ್ತೆ ಕಿರಿದಾಯ್ತು ಎಂದು 8 ಪಥಗಳ ಹೊಸ ಹೆದ್ದಾರಿ (Bengaluru-Mysuru Expressway) ನಿರ್ಮಾಣವಾಗಿದೆ. ಹಿಂದೆ ಹಳೆ ಹೆದ್ದಾರಿಯಲ್ಲಿ ವೀಕೆಂಡ್ ಬಂತು ಎಂದರೆ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಉಂಟಾಗುತ್ತಿತ್ತು. ಇದೀಗ ಹಳೆ ಹೆದ್ದಾರಿಯಂತೆ ಹೊಸ ಹೆದ್ದಾರಿಯಲ್ಲೂ ಟ್ರಾಫಿಕ್ ಜಾಮ್ ಆಗಿದೆ.
ಹೌದು, ಭಾನುವಾರ ಸಂಜೆ 6 ಗಂಟೆ ವೇಳೆಗೆ ಶ್ರೀರಂಗಪಟ್ಟಣದಿಂದ ಮಂಡ್ಯ ನಡುವಿನ ಹೆದ್ದಾರಿಯಲ್ಲಿ ಕಿಮೀ ಗಟ್ಟಲೆ ಟ್ರಾಫಿಕ್ ಬಿಸಿ ಉಂಟಾಗಿದೆ. ಭಾನುವಾರ ಸಂಜೆ ವೇಳೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ತಮ್ಮ ವಾಹನಗಳಲ್ಲೇ ಕಾಲ ಕಳೆದಿದ್ದಾರೆ. ಇದನ್ನೂ ಓದಿ: ಕ್ಷತ್ರಿಯ ಸಮುದಾಯದ ಬೇಡಿಕೆಗಳನ್ನು ಈಡೇರಿಸುತ್ತೇವೆ: ಸಿಎಂ ಭರವಸೆ
- Advertisement 2
- Advertisement 3
2 ಕಿಮೀ ಗೂ ಹೆಚ್ಚು ಉದ್ದದ ಟ್ರಾಫಿಕ್ ನಿಂದ ಪ್ರಯಾಣಿಕರು ಕಿರಿಕಿರಿ ಅನುಭವಿಸಿದ್ದಾರೆ. ಹೊಸ ಹೆದ್ದಾರಿಯಲ್ಲಿ ಟ್ರಾಫಿಕ್ಗೆ ಸಿಲುಕಿ ಜನರು ಹೈರಾಣಾಗಿದ್ದಾರೆ. ಭಾನುವಾರ ಆಗಿರುವುದರಿಂದ ಮೈಸೂರು ಕಡೆ ಹೋದವರು ವಾಪಸ್ ಬೆಂಗಳೂರಿಗೆ ಮರಳಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ಗೆ ಸಿಲುಕಿ ನಿಂತಲ್ಲೇ ಗಂಟೆಗಟ್ಟಲೆ ಕಾರುಗಳಲ್ಲಿಯೇ ಪ್ರಯಾಣಿಕರು ಕಾದಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣ, ಹನುಮಂತ ಇಬ್ಬರೂ ಶ್ರೇಷ್ಠ ರಾಜತಾಂತ್ರಿಕರು: ಜೈಶಂಕರ್
- Advertisement 4
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k