ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ವಿನೂತನ ಪ್ರಯತ್ನವೊಂದನ್ನು ಮಾಡಿದ್ದಾರೆ.
ಹೆಲ್ಮೆಟ್ ಹಾಕದೆ ಬೈಕ್ ಚಾಲನೆ ಮಾಡೊರಿಗೆ ಯಮನಿಂದ ವಾರ್ನಿಂಗ್ ಎಂಬ ವಿಶೇಷ ಅಭಿಯಾನವನ್ನು ಬೆಂಗಳೂರು ಹಲಸೂರು ಗೇಟ್ ಸಂಚಾರಿ ಪೊಲೀಸರು ಕೈಗೊಂಡಿದ್ದಾರೆ.
ಪ್ರಾಣ ಉಳೀಬೇಕು ಅಂದ್ರೆ ಹೆಲ್ಮೆಟ್ ಹಾಕ್ಬೇಕು. ಹೆಲ್ಮೆಟ್ ಹಾಕಿಲ್ಲ ಅಂದ್ರೆ ಯಮನೇ ಬೆನ್ನ ಹಿಂದೆ ಕೂತಿರ್ತಾನೆ. ಆ ಮರಣ ದೇವ ರೋಡ್ನಲ್ಲಿ ಹೋಗೋರನ್ನು ತಡೆದು ಅವರ ಬೈಕ್, ಸ್ಕೂಟರ್ ಹತ್ತುತ್ತಾನೆ ಅಂತ ಹೆಲ್ಮೆಟ್ ಹಾಕದೆ ಇರೋ ಬೈಕ್ ಸವಾರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ.