ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದು, ದಾಖಲೆಯ ದಂಡ ವಸೂಲಿ ಮಾಡಿದ್ದಾರೆ.
ಡಿವೈಎಸ್ಪಿ ರವಿ.ಡಿ.ನಾಯ್ಕ್ ಅವರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದು, ಒಟ್ಟು 24, ಸಿಪಿಐ ಶಿರಸಿ-26, ಪಿಎಸ್ಐ ನಗರ-22, ಪಿಎಸ್ಐ ನ್ಯೂ ಮಾರ್ಕೆಟ್-30, ಪಿಎಸ್ಐ ಬನವಾಸಿ-8, ಸಿದ್ದಾಪುರ ಠಾಣೆ-21, ಯಲ್ಲಾಪುರ ಠಾಣೆ-6, ಮುಂಡಗೋಡ ಠಾಣೆ-74 ಪ್ರಕರಣಗಳನ್ನು ದಾಖಲಿಸಿದ್ದು, ಶಿರಸಿ ಉಪವಿಭಾಗದಲ್ಲಿ ಒಟ್ಟು 211 ಪ್ರಕರಣಗಳನ್ನು ದಾಖಲಿಸಿ, 1,07,000 ರೂ. ದಂಡ ವಿಧಿಸಲಾಗಿದೆ. ಇದನ್ನೂ ಓದಿ: ಮದ್ಯ ಸೇವಿಸಲು ಪತ್ನಿ ಹಣ ನೀಡಿಲ್ಲವೆಂದು ಪತಿ ಆತ್ಮಹತ್ಯೆಗೆ ಶರಣು
ಶಿರಸಿ ಉಪವಿಭಾಗದ ಎಲ್ಲ 7 ಪೊಲೀಸ್ ಠಾಣೆಗಳಲ್ಲಿ ರಸ್ತೆ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಯಿತು. ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ರವಿ.ಡಿ.ನಾಯ್ಕ್ ಅವರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಸಂಚಾರ ನಿಯಮಗಳ ಉಲ್ಲಂಘನೆಯ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.