ನವದೆಹಲಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ (RCB) ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
The loss of lives in the tragic happening at a stadium in Bengaluru is shocking and heartbreaking. My condolences to the bereaved families and prayers for the speedy recovery of the injured.
— President of India (@rashtrapatibhvn) June 4, 2025
ಕಾಲ್ತುಳಿತದಿಂದ 11 ಜನರು ಮೃತಪಟ್ಟಿದ್ದಾರೆ. ಘಟನೆಗೆ ವಿಷಾದ ವ್ಯಕ್ತಪಡಿಸಿದ ದ್ರೌಪದಿ ಮುರ್ಮು, ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತ ಘಟನೆಯಲ್ಲಿ ಸಂಭವಿಸಿದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ
The tragic stampede near Bengaluru’s Chinnaswamy Stadium during RCB’s IPL victory celebrations is heartbreaking.
My condolences to the families who lost their loved ones. Wishing a swift and full recovery to all those injured.
In this hour of grief, I stand with the people of…
— Rahul Gandhi (@RahulGandhi) June 4, 2025
ಆರ್ಸಿಬಿಯ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ದುರಂತ ಹೃದಯವಿದ್ರಾವಕ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುಃಖದ ಸಮಯದಲ್ಲಿ, ನಾನು ಬೆಂಗಳೂರಿನ ಜನರೊಂದಿಗೆ ನಿಲ್ಲುತ್ತೇನೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಪರಿಹಾರವನ್ನು ಒದಗಿಸಬೇಕು. ಈ ದುರಂತವು ನೋವಿನ ಜ್ಞಾಪನೆಯಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರತಿಯೊಂದು ಸುರಕ್ಷತಾ ಪ್ರೋಟೋಕಾಲ್ ಅನ್ನು ಪರಿಶೀಲಿಸಬೇಕು ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಜನರ ಸುರಕ್ಷತೆ ಮೊದಲ ಆದ್ಯತೆಯಾಗಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಅಭಿಮಾನಿಗಳು ಬಲಿಯಾಗಿದ್ದಾರೆ. ದುರಂತಕ್ಕೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ