ರಾಯಚೂರು: ಜಿಲ್ಲೆಯ ಶಕ್ತಿನಗರದಲ್ಲಿರುವ ಆರ್ಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ರೈಲು ಹಳಿ ತಪ್ಪಿ ವ್ಯಾಗನ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ವಿದ್ಯುತ್ ಉತ್ಪಾದನಾ ಕೇಂದ್ರದ ಕ್ರಾಸಿಂಗ್ ಪಾಂಯಿಟ್ ಬಳಿ ಘಟನೆ ನಡೆದಿದ್ದು, ಹಳಿಯಿಂದ 50 ಮೀಟರ್ ದೂರಕ್ಕೆ ವ್ಯಾಗನ್ ಗಳು ಬಿದ್ದಿವೆ. ಕಲ್ಲಿದ್ದಲು ಖಾಲಿ ಮಾಡಿಕೊಂಡು ಮರಳಿ ಹೋಗುತ್ತಿದ್ದ ವೇಳೆ ಘಟನೆಯಾಗಿದ್ದು, ಚಾಲಕ ಹಾಗೂ ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯವೇ ರೈಲು ಹಳಿ ತಪ್ಪಲು ಕಾರಣ ಎನ್ನಲಾಗಿದೆ.
ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗುಂತಕಲ್ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಆಗಾಗ ಈ ರೀತಿ ಘಟನೆಗಳು ಆರ್ಟಿಪಿಎಸ್ನಲ್ಲಿ ಮರುಕಳಿಸುತ್ತಲೇ ಇವೆ.
ಇಲ್ಲಿನ ಕೆಲ ಸಿಬ್ಬಂದಿ ಮದ್ಯಪಾನದ ಮತ್ತಿನಲ್ಲಿ ಕೆಲಸ ಮಾಡುತ್ತಿರುವ ಆರೋಪಗಳು ಕೂಡ ಕೇಳಿ ಬಂದಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv