ರೈಲು ವಿಳಂಬ – ಅಭ್ಯರ್ಥಿಗಳಿಗೆ ಟ್ರಾಫಿಕ್ ರಹಿತ ಸಾರಿಗೆ ವ್ಯವಸ್ಥೆ

Public TV
1 Min Read
Solapur Yeshwantpur Railway Examination kalaburagi 1

ಕಲಬುರಗಿ: ರೈಲು ಸಂಚಾರದಲ್ಲಿ ಬಾರಿ ವಿಳಂಬವಾದ ಹಿನ್ನೆಲೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಆಗಮಿಸಿದ ಅಭ್ಯರ್ಥಿಗಳು ಪರದಾಡಿದ್ದು, ಅವರಿಗಾಗಿ ಟ್ರಾಫಿಕ್ ರಹಿತ ಸಾರಿಗೆ ವ್ಯವಸ್ಥೆಯನ್ನು ಕಲಬುರ್ಗಿ ಪೊಲೀಸರು ಮಾಡಿದ್ದರು.

Solapur Yeshwantpur Railway Examination kalaburagi 3

ಕೆಪಿಎಸ್‍ಸಿ ಪರೀಕ್ಷೆಗೆ ಹಾಜರಾಗಲು ಹಾಸನ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 2400 ಅಭ್ಯರ್ಥಿಗಳು ಕಲಬುರಗಿ ರೈಲು ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ, ಆಯಾ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಟ್ರಾಫಿಕ್ ರಹಿತ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ವ್ಯವಸ್ಥೆಗಾಗಿ 18 ಸಿಟಿ ಬಸ್, 100 ಆಟೋಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಕುರಿಗಳಂತೆ ಕರೆತಂದು ಮತ ಹಾಕಿಸಿಕೊಂಡು ಗೆಲುವು ಸಾಧಿಸಿದ್ದಾರೆ: ಮಂಥರ್ ಗೌಡ ವಾಗ್ದಾಳಿ

ಆಟೋ ಚಾಲಕರ ಸಂಘದವರು ವಿದ್ಯಾರ್ಥಿಗಳನ್ನು ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಕಾರ್ಯ ಮಾಡಿದರು. ಆತಂಕದಲ್ಲಿದ್ದ ವಿದ್ಯಾರ್ಥಿಗಳು ರೈಲು ನಿಲ್ಲುತ್ತಿದ್ದಂತೆ ಓಡೋಡಿ ಆಟೋ ಹಾಗೂ ಬಸ್ ಗಳತ್ತ ಆಗಮಿಸಿದರು. ಸಾರ್ವಜನಿಕರು, ಪೆÇಲೀಸರು, ಇಲಾಖೆ ಸಿಬ್ಬಂದಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ವಯ ಬಸ್ ಹಾಗೂ ಆಟೋದಲ್ಲಿ ಹೋಗಲು ಸಹಾಯ ಮಾಡಿದರು.

Solapur Yeshwantpur Railway Examination kalaburagi 2

ಹಾಸನ-ಸೋಲಾಪುರ ಸೂಪರ್ ಫಾಸ್ಟ್, ಉದ್ಯಾನ್ ರೈಲು ಬೆಳಗ್ಗೆ 6 ಗಂಟೆಗೆ ಕಲಬುರಗಿ ನಗರಕ್ಕೆ ಬರಬೇಕಿತ್ತು. ಆದ್ರೆ ತಾಂತ್ರಿಕ ತೊಂದರೆಯಿಂದ ರೈಲುಗಳು ಬೆಳಗ್ಗೆ 6 ಗಂಟೆ ಬದಲಾಗಿ ಮಧ್ಯಾಹ್ನ 1-30ಕ್ಕೆ ಕಲಬುರಗಿ ತಲುಪಿವೆ. ಹೀಗಾಗಿ ಪಿಡಬ್ಲ್ಯೂಡಿ, ಎಹಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳು ಪರದಾಡಿದರು. ಇದರಿಂದ ಎಚ್ಚೆತ್ತ ಪರೀಕ್ಷೆ ಕೇಂದ್ರ ಕೆಪಿಎಸ್‍ಸಿ ರೈಲು ವಿಳಂಬವಾದ ಅಭ್ಯರ್ಥಿಗಳಿಗೆ ಪರೀಕ್ಷೆ ಸಮಯ ಬದಲಾವಣೆ ಮಾಡಿದೆ. ಇದನ್ನೂ ಓದಿ: ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್

ಬೆಳಗ್ಗೆ 11 ಗಂಟೆಯ ಪತ್ರಿಕೆ ಹಾಜರಾಗಲು ಅಭ್ಯರ್ಥಿಗಳಿಗೆ ಸಾಧ್ಯವಾಗಿಲ್ಲದ ಕಾರಣ ಮಧ್ಯಾಹ್ನ 2 ಗಂಟೆಗೆ ಎರಡನೇ ಪರೀಕ್ಷೆ ಹಾಜರಾಗಲು ಅಭ್ಯರ್ಥಿಗಳಿಗೆ ಕಲಬುರಗಿ ಪೆÇಲೀಸರು ವ್ಯವಸ್ಥೆ ಮಾಡಿಕೊಟ್ಟರು.

Share This Article
9 Comments

Leave a Reply

Your email address will not be published. Required fields are marked *