Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್‌ ತರಬೇತಿಗೆ ತಡೆ – ಅಕಾಡೆಮಿಗೆ ಬುಲಾವ್‌!

Public TV
Last updated: July 16, 2024 10:15 pm
Public TV
Share
2 Min Read
Puja Khedkar
SHARE

ಮುಂಬೈ: ವಿಶೇಷಚೇತನ ಹಾಗೂ ಒಬಿಸಿ ಕೋಟಾವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪ ಎದುರಿಸುತ್ತಿರುವ ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ (Puja Khedkar) ಅವರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ. ಈ ನಡುವೆಯೇ ಮಹಾರಾಷ್ಟ್ರ ಸರ್ಕಾರ (Maharashtra Government) ಅವರ ತರಬೇತಿಯನ್ನು ತಡೆಹಿಡಿದಿದ್ದು, ಜುಲೈ 23ರ ಒಳಗೆ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ಗೆ ಬರುವಂತೆ ಸೂಚಿಸಿದೆ.

image 1

ನಕಲಿ ಜಾತಿ ಪ್ರಮಾಣಪತ್ರ, ವಿಶೇಷಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ನಕಲಿ ದಾಖಲೆ ಮಾಡಿಸಿರುವ ಆರೋಪ ಎದುರಿಸುತ್ತಿರುವ ಪೂಜಾ ಖೇಡ್ಕರ್‌ ಮಹಾರಾಷ್ಟ್ರದ ವಾಶೀಂ ಜಿಲ್ಲೆಯಲ್ಲಿ ಪ್ರೊಬೇಷನರಿ ಐಎಎಸ್‌ ಅಧಿಕಾರಿಯಾಗಿ (IAS Officer) ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ (ಜು.16) ಅವರ ಜಿಲ್ಲಾ ತರಬೇತಿಯನ್ನು ತಡೆಹಿಡಿಯಲಾಗಿದೆ. ಪೂಜಾ ಖೇಡ್ಕರ್‌ ಅವರ ಪ್ರಕರಣದಲ್ಲಿ ಸರ್ಕಾರದ ಮೊದಲ ಮಹತ್ವದ ಕ್ರಮ ಇದು ಎಂದು ಹೇಳಲಾಗಿದೆ. ಮುಂದಿನ ಕ್ರಮಕ್ಕಾಗಿ ಅವರನ್ನು ತರಬೇತಿ ಅಕಾಡೆಮಿಗೆ ಬರುವಂತೆ ಆದೇಶ ಪ್ರತಿಯಲ್ಲಿ ಸೂಚಿಸಿದೆ. ಇದನ್ನೂ ಓದಿ: NEET: ಪರೀಕ್ಷಾ ಮಂಡಳಿ ಟ್ರಂಕ್‌ನಿಂದ ಪ್ರಶ್ನೆಪತ್ರಿಕೆ ಕದ್ದಿದ್ದ ಎಂಜಿನಿಯರ್‌ ಬಂಧನ

Puja Khedkar 3

ಕಳೆದ ವಾರವಷ್ಟೇ ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಏಕಸದಸ್ಯ ಸಮಿತಿ ರಚಿಸಿತ್ತು. ಸೋಮವಾರ (ಜು.15) ಸಹ ಪೊಲೀಸರು ತಡರಾತ್ರಿವರೆಗೆ ಮೇಲ್ವಿಚಾರಣೆ ನಡೆಸಿದ್ದರು. ರಾತ್ರಿ 11 ಗಂಟೆಯಿಂದ 1 ಗಂಟೆವರೆಗೆ ಮೂವರು ಮಹಿಳಾ ಅಧಿಕಾರಿಗಳು ವಿಚಾರಣೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Jammu Terrorist Attack: ಜಮ್ಮುವಿನಲ್ಲಿ ದಿಢೀರ್‌ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವುದು ಏಕೆ?

Puja Khedkar 2

ಪ್ರಕರಣದ ಬಗ್ಗೆ ಪೂಜಾ ಖೇಡ್ಕರ್‌ ಹೇಳಿದ್ದೇನು?
ನಕಲಿ ದಾಖಲೆ, ಅಧಿಕಾರ ದುರುಪಯೋಗ ಸೇರಿ ಹಲವು ಆರೋಪಗಳ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಮೊದಲ ಬಾರಿಗೆ ಅವರು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು. ಯಾರೇ ಆಗಲಿ, ಆರೋಪ ಸಾಬೀತಾಗುವವರೆಗೆ ಅವರು ಆರೋಪಿಯೇ, ಮಾಧ್ಯಮಗಳ ವರದಿಗಳು, ತೀರ್ಪುಗಳು ನಾನು ಏನೆಂಬುದನ್ನು ತೀರ್ಮಾನಿಸುವುದಿಲ್ಲ. ತನಿಖೆಗೆ ರಚನೆಯಾಗಿರುವ ಸಮಿತಿಯ ತೀರ್ಮಾನದ ಬಳಿಕವೇ ಸತ್ಯ ಏನೆಂಬುದು ಗೊತ್ತಾಗುತ್ತದೆ. ಮಾಧ್ಯಮಗಳು ಅಥವಾ ಜನರು ನನ್ನನ್ನು ತೀರ್ಮಾನಿಸಲಾಗುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ವಿವಾದಿತ ಭೋಜಶಾಲಾ ಮಸೀದಿಯಲ್ಲಿ ಮಂದಿರದ ಕುರುಹು – ಪುರಾತತ್ವ ಇಲಾಖೆಯ 2,000 ಪುಟಗಳ ವರದಿಯಲ್ಲಿ ಏನಿದೆ?

2023ನೇ ಸಾಲಿನ ಐಎಎಸ್‌ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್‌ ಅವರು ವಾಶೀಂ ಜಿಲ್ಲೆಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿದ್ದರು. ಅವರು ಕೇಂದ್ರ ಲೋಕಸೇವಾ ಆಯೋಗಕ್ಕೆ ಸಲ್ಲಿಸಿದ್ದ ವೈದ್ಯಕೀಯ ಪ್ರಮಾಣ ಪತ್ರದಲ್ಲಿ ತಾವು ಭಾಗಶಃ ಅಂಗವಿಕಲತೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ಅಂಗವೈಕಲ್ಯ ಕೋಟಾ ಬಳಸಿಕೊಂಡಿದ್ದರು. ಅಲ್ಲದೇ ಹಿಂದುಳಿದ ವರ್ಗಗಳ ಅಡಿಯಲ್ಲಿ ಮೀಸಲಾತಿಯನ್ನೂ ತಪ್ಪಾಗಿ ಪಡೆದುಕೊಂಡಿರುವ ಆರೋಪ ಅವರ ವಿರುದ್ಧ ಇದೆ ಎಂದು ಸಂಬಂಧಪಟ್ಟ ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್‌ – ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮ

TAGGED:IAS officerIAS TrainingMaharashtra governmentOBC CertificatesPuja KhedkarUPSCಒಬಿಸಿ ಕೋಟಾಪೂಜಾ ಖೇಡ್ಕರ್‌ಪ್ರೊಬೇಷನರಿ ಜಿಲ್ಲಾಧಿಕಾರಿಮೀಸಲಾತಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
10 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
10 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
11 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
12 hours ago

You Might Also Like

Nganthoi Sharma
Latest

ವಿಮಾನ ಪತನ – ಗಗನ ಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
59 minutes ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
18 minutes ago
rabindranath tagore
Crime

ಸೇಡಿಗಾಗಿ ಠಾಗೂರ್ ಮನೆ ಮೇಲೆ ದಾಳಿ – 50ಕ್ಕೂ ಹೆಚ್ಚು ಜನರ ಮೇಲೆ ಕೇಸ್ 

Public TV
By Public TV
33 minutes ago
Air India crash in Ahmedabad Former Gujarat CM Vijay Rupanis first vehicle number was 1206. He always used to pick the same number plate for his vehicles Today is 12 06
Latest

ತಮ್ಮ ಫೇವರೇಟ್‌ ನಂಬರ್‌ ದಿನವೇ ಮೃತಪಟ್ಟ ಗುಜರಾತ್‌ ಮಾಜಿ ಸಿಎಂ ರೂಪಾನಿ

Public TV
By Public TV
2 hours ago
Rajasthan Married girl died plane crash
Latest

Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು

Public TV
By Public TV
2 hours ago
Air India Flight Crash
Latest

ಪತನಗೊಂಡ ವಿಮಾನದಲ್ಲಿ ಮಗಳು, ಮೊಮ್ಮಗ ಇದ್ರು; ಬೆಳಿಗ್ಗೆಯಷ್ಟೇ ಅವಳ ಜೊತೆ ಮಾತಾಡಿದ್ದೆ – ಕಣ್ಣೀರಿಟ್ಟ ತಂದೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?