– ಕಟ್ಟಡ ಸುತ್ತುವರೆದು ಒರ್ವ ಉಗ್ರನನ್ನು ಕೊಂದ ಸೇನೆ
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಭಾಗದ ಟ್ರಾಲ್ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.
ಇಲ್ಲಿನ ಜನವಸತಿ ಕಟ್ಟಡದೊಳಗೆ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ 5 ಉಗ್ರರು ನುಗ್ಗಿದ್ದಾರೆ ಎನ್ನಲಾಗಿದ್ದು, ಈಗಾಗಲೇ ಓರ್ವ ಉಗ್ರನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಶನಿವಾರ ಸಂಜೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದು, ಕಾರ್ಯಾಚರಣೆ ವೇಳೆ ಪೊಲೀಸ್ ಪೇದೆ ಮನ್ಜೂರ್ ಅಹಮದ್ ಹುತಾತ್ಮರಾಗಿದ್ದಾರೆ. ಇನ್ನೂ ಕೆಲವು ಉಗ್ರರು ಕಟ್ಟದೊಳಗೆ ಅಡಗಿರುವ ಶಂಕೆಯಿದ್ದು ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರೆದಿದೆ.
ಘಟನಾ ಸ್ಥಳದ 10 ಕಿ.ಮೀ ದೂರದವರಗೆ ಕರ್ಫ್ಯೂ ಜಾರಿ ಮಾಡಲಾಗಿದೆ.