ಫೆ. 20 ಸಾರಿಗೆ ಸಿಬ್ಬಂದಿ ಹೋರಾಟ!

Public TV
1 Min Read
bus

ಬೆಂಗಳೂರು: ಫೆಬ್ರವರಿ 20 ರಂದು ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಅಂತ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಫೆಬ್ರವರಿ 20 ರಂದು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ರಜೆ ಇದ್ದವರು, ವಾರದ ರಜೆ ಇದ್ದವರು ಮಾತ್ರ ಈ ಹೋರಾಟದಲ್ಲಿ ಭಾಗಿಯಾಗಲಿದ್ದು, ಬಸ್ ಸಂಚಾರಕ್ಕೆ ತೊಂದರೆಯಾಗಲ್ಲ ಅಂತ ಸಿಐಟಿಯು ಜಂಟಿ ಕಾರ್ಯದರ್ಶಿ ಹೇಳಿದ್ದಾರೆ. ಆದರೆ ಬಹುಸಂಖ್ಯೆಯಲ್ಲಿ ಸಿಬ್ಬಂದಿಗಳು ಶಕ್ತಿ ಪ್ರದರ್ಶನಕ್ಕೆ ಮುಂದಾದರೆ ಬಸ್ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದೆ.

protest

ಫೆಬ್ರವರಿ 20 ರಂದು ಫ್ರೀಡಂ ಪಾರ್ಕ್ ನಲ್ಲಿ ಸುಮಾರು ಇಪ್ಪತ್ತು ಸಾರಿಗೆ ಸಿಬ್ಬಂದಿ ಕುಟುಂಬ ಸಮೇತರಾಗಿ ಉಪವಾಸ ಸತ್ಯಾಗ್ರಹವನ್ನು ನಡೆಸಲಿದ್ದಾರೆ. ಈ ಹೋರಾಟಕ್ಕೆ ಮಠಾದೀಶರು, ಚಿಂತಕರು ಕೂಡ ಸಾಥ್ ಕೊಡಲಿದ್ದಾರೆ. ಮುಂದಿನ ಬಜೆಟ್‍ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಅಂತ ಘೋಷಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ಸಾರಿಗೆ ಸಿಬ್ಬಂದಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *