ನವದೆಹಲಿ: ನೂತನ ಸಂಸತ್ ಭವನ (New Parliament Building) ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಟ್ಟಾಭಿಷೇಕದಂತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಟೀಕಿಸಿದ್ದಾರೆ.
संसद लोगों की आवाज़ है!
प्रधानमंत्री संसद भवन के उद्घाटन को राज्याभिषेक समझ रहे हैं।
— Rahul Gandhi (@RahulGandhi) May 28, 2023
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಸಂಸತ್ ಜನರ ಧ್ವನಿ. ಸಂಸತ್ ಭವನದ ಉದ್ಘಾಟನೆಯನ್ನು ಪ್ರಧಾನಿ ಮಹಾಮಸ್ತಕಾಭಿಷೇಕ ಎಂದು ಪರಿಗಣಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಉದ್ಘಾಟನೆಯ ಸವಿನೆನಪಿಗೆ ವಿಶೇಷ ಅಂಚೆ ಚೀಟಿ, 75 ರೂ. ನಾಣ್ಯ ಬಿಡುಗಡೆ
ಹೊಸ ಸಂಸತ್ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾದ ಕುಸ್ತಿಪಟುಗಳ ಬಂಧನ ಖಂಡಿಸಿ ಟ್ವೀಟ್ ಮಾಡಿರುವ ಅವರು, ಪಟ್ಟಾಭಿಷೇಕ ಮುಗಿಯಿತು. ಬೀದಿಗಿಳಿದು ಸಾರ್ವಜನಿಕರ ದನಿಯನ್ನು ತುಳಿಯುತ್ತಿರುವ ‘ಅಹಂಕಾರಿ ರಾಜ’ ಎಂದು ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
राज्याभिषेक पूरा हुआ – ‘अहंकारी राजा’ सड़कों पर कुचल रहा जनता की आवाज़! pic.twitter.com/9hbEoKZeZs
— Rahul Gandhi (@RahulGandhi) May 28, 2023
ವಿರೋಧ ಪಕ್ಷಗಳ ಬಹಿಷ್ಕಾರದ ಕರೆ ನಡುವೆ ಭಾನುವಾರ ಹೊಸ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಂಸತ್ ಭವನದಲ್ಲಿ ಪೂಜೆ, ಹೋಮ-ಹವನ ಸೇರಿದಂತೆ ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ: ದೇಶವೇ ಮೊದಲು ಎಂಬ ಧ್ಯೇಯದೊಂದಿಗೆ ಮುನ್ನುಗ್ಗಿ: ನರೇಂದ್ರ ಮೋದಿ ಕರೆ
ಹೊಸ ಸಂಸತ್ ಭವನ ಉದ್ಘಾಟನೆಗೂ ಮುನ್ನ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಪ್ರಧಾನಿ ಮೋದಿ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಗಣಪತಿ ಹೋಮ ನೆರವೇರಿಸಿದರು. ತಮಿಳುನಾಡಿನ ವಿವಿಧ ಅಧೀನಮ್ಗಳ ಪ್ರಧಾನ ಅರ್ಚಕರಿಂದ ಪ್ರಧಾನಿ ಆಶೀರ್ವಾದ ಪಡೆದರು. ನಂತರ ಹೊಸ ಸಂಸತ್ತಿನ ಕಟ್ಟಡದಲ್ಲಿ ಲೋಕಸಭಾ ಸ್ಪೀಕರ್ ಕುರ್ಚಿಯ ಬಳಿ ಸೆಂಗೋಲ್ ಸ್ಥಾಪಿಸಿದರು.