Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಷ್ಟ ಲಿಂಗದಲ್ಲಿ ಮಾತೆ ಮಹಾದೇವಿ ಲೀನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಇಷ್ಟ ಲಿಂಗದಲ್ಲಿ ಮಾತೆ ಮಹಾದೇವಿ ಲೀನ

Bagalkot

ಇಷ್ಟ ಲಿಂಗದಲ್ಲಿ ಮಾತೆ ಮಹಾದೇವಿ ಲೀನ

Public TV
Last updated: March 16, 2019 7:10 pm
Public TV
Share
3 Min Read
BGK mate mahadevi
SHARE

ಬಾಗಲಕೋಟೆ: ಬಸವ ತತ್ವ, ಲಿಂಗಾಯತ ಧರ್ಮದಂತೆ ಮಾತೆ ಮಹಾದೇವಿ ಅವರ ಕ್ರಿಯಾ ವಿಧಿವಿಧಾನವು ಕೂಡಲ ಸಂಗಮದಲ್ಲಿ ಇಂದು ನೆರವೇರಿತು.

ಜಗತ್ತಿನ ಪ್ರಥಮ ಮಹಿಳಾ ಜಗದ್ಗುರು ಡಾ.ಮಾತೆ ಮಹಾದೇವಿ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ಲಿಂಗೈಕ್ಯರಾಗಿದ್ದರು. ಈ ಮೂಲಕ ಲಿಂಗಾಯತ ಧರ್ಮದ ಮತ್ತೊಂದು ಕೊಂಡಿ ಕಳಚಿದಂತಾಯಿತು.

ಮಾತೆ ಮಹಾದೇವಿ ಶರೀರಕ್ಕೆ ಹೊಸ ವಸ್ತ್ರ ಧಾರಣೆ ಮಾಡಿ, ನೂತನ ಪೀಠಾಧಿಕಾರಿ ಮಾತೆ ಗಂಗಾದೇವಿ ಅವರು ಪೂಜೆ ಸಲ್ಲಿಸಿದರು. ಕ್ರಿಯಾ ಸಮಾಧಿ ನಿರ್ಮಾಣದ ವೇಳೆ ವಿಭೂತಿ ಗಟ್ಟಿ, ಬಿಲ್ವಪತ್ರೆ, ತುಳಸಿ, ರುದ್ರಾಕ್ಷಿ ಮಾಲೆ ಬಳಕೆ ಮಾಡಲಾಗಿತ್ತು. ಈ ವೇಳೆ ಹಲವು ಮಠಾಧೀಶರು, ಶರಣ ಶರಣಿಯರು, ಭಕ್ತರು ಭಾಗಿಯಾಗಿದ್ದರು.

BGK mate mahadevi 1

ಇದಕ್ಕೂ ಮುನ್ನ ರಾಜ್ಯ ಸರ್ಕಾರದಿಂದ ಗೌರವ ವಂದನೆ ಸಲ್ಲಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸ್ ಪಡೆ ಗೌರವ ಸಲ್ಲಿಸಿತ್ತು. ಗೃಹಸಚಿವ ಎಂ.ಬಿ.ಪಾಟೀಲ್, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್, ಪಂಚಮಸಾಲಿ ಪೀಠಾಧಿಪತಿ ಬಸವಜಯಮೃತ್ಯುಂಜಯ ಸ್ವಾಮೀಜಿ, ನಿಜಗುಣಾನಂದ ಸ್ವಾಮೀಜಿ, ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ.ಜಾಮದಾರ್ ಅವರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ಮಾತಾಜಿ ಪಾರ್ಥಿವ ಶರೀರವನ್ನು ನಿನ್ನೆ ರಾತ್ರಿ ಕೂಡಲಸಂಗಮ ಕ್ರಾಸ್ ಬಳಿ ಬರಮಾಡಿಕೊಂಡ ಭಕ್ತರು, ಬಸವಣ್ಣನವರ ವಚನಗಳ ಮೂಲಕ ಭಕ್ತಿಯ ಶ್ರದ್ಧಾಂಜಲಿ ಅರ್ಪಿಸಿದರು. ಸಂಗಮ ಕ್ರಾಸ್‍ನಿಂದ ಬಸವಣ್ಣನ ವೃತ್ತ ಮೂಲಕ ಬಸವ ಧರ್ಮಪೀಠದವರೆಗೆ ಮೆರವಣಿಗೆ ಮಾಡಲಾಯಿತು. ದಾರಿಯೂದ್ದಕ್ಕೂ ಅಪಾರ ಭಕ್ತರು ಮಾತಾಜಿ ಲಿಂಗೈಕ್ಯ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಬಸವಧರ್ಮ ಪೀಠ ವೇದಿಕೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಯಿತು.

mate mahadevi 1

ಅಂತಿಮ ವಿಧಿ ವಿಧಾನದ ಸಮಯದಲ್ಲಿ ನಿರಂತರ ವಚನ ಪಠಣ, ಓಂಕಾರ ಪಠಣ, ಶ್ರೀ ಗುರುಬಸವ ಲಿಂಗಾಯ ನಮಃ ಎಂಬ ಘೋಷಗಳು ಮುಗಿಲು ಮುಟ್ಟಿದ್ದವು. ಮಹಾಮನೆಯ ಪಕ್ಕದ ಮೈದಾನದಲ್ಲಿ ಸಾರ್ವಜನಕರಿಗೆ ಮಾತಾಜಿ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ವೇದಿಕೆಯ ಮೇಲೆಯೇ ಬಸವ ಧರ್ಮ ಪೀಠಕ್ಕೆ ನೂತನ ಅಧ್ಯಕ್ಷೆಯರನ್ನಾಗಿ ಮಾತೆ ಗಂಗಾದೇವಿಯವರನ್ನ ನೇಮಿಸಲಾಯಿತು. ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ಕಿರೀಟ ತೊಡಿಸಿ ಪೀಠಾಧ್ಯಕ್ಷರನ್ನಾಗಿ ನೇಮಿಸಲಾಯಿತು. ನಂತರ ಬಸವ ಧ್ವಜ ಹಸ್ತಾಂತರಿಸುವ ಮೂಲಕ ಬಸವ ಧರ್ಮಪೀಠದ ಸಿದ್ಧಾಂತ ಹಾಗೂ ಮಾತೆ ಮಹಾದೇವಿಯವರ ತತ್ವಗಳನ್ನು ಮುಂದುವರಿಸಿಕೊಂಡು ಹೋಗುವಂತೆ ಗಂಗಾದೇವಿ ಅವರಿಗೆ ಆಶೀರ್ವದಿಸಲಾಯಿತು.

ಈ ವೇಳೆ ಮಹಾರಾಷ್ಟ್ರದ ಕನ್ಹೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳು, ಮುರುಘಾ ಮಠದ ಮುರುಗಾ ಶ್ರೀಗಳು, ಪಂಚಮಸಾಲಿ ಪೀಠದ ಬಸವಜಯಮೃತ್ಯಂಜಯ ಶ್ರೀಗಳು, ಗದುಗಿನ ತೋಂಟದಾರ್ಯ ಶ್ರೀಗಳು, ಬೆಳಗಾವಿಯ ನಾಗನೂರು ಮಠದ ಶ್ರೀಗಳು, ನಿಜಗುಣಾನಂದ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಮಠಾಧೀಶರು ಮಾತಾಜಿಯವರ ಅಂತಿಮ ದರ್ಶನ ಪಡೆದರು. ಇದೇ ವೇಳೆ ಬೀದರ ಸಂಸದ ಭಗವಂತರಾವ ಖೂಬಾ, ಸಚಿವ ಎಂ.ಬಿ.ಪಾಟೀಲ್, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ನಿವೃತ್ತ ಐ.ಎ.ಎಸ್ ಅಧಿಕಾರಿ, ಮಾಜಿ ಸಚಿವ ವಿನಯ ಕುಲಕರ್ಣಿ ಜಾಮದಾರ್, ಬಾಗಲಕೋಟೆ ಸಂಸದ ಗದ್ದಿಗೌಡರ್, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ನಾಡಿನ ವಿವಿಧ ಭಾಗಗಳ ರಾಜಕೀಯ ಮುಖಂಡರು ಮಾತಾಜಿಯವರ ಅಂತಿಮ ದರ್ಶನ ಪಡೆದು ಕ್ರಿಯಾ ವಿಧಿವಿಧಾನದಲ್ಲಿ ಭಾಗಿಯಾದ್ದರು.

BGK mate mahadevi 2

ಗದಗ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ನಮ್ಮನ್ನು ಅಗಲಿದ ಮಾತೆಯ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ನಾವು ಪ್ರತ್ಯೇಕ ಧರ್ಮ ಮಾಡಿಯೇ ತೀರಬೇಕು. ಮುಂದೊಂದು ದಿನ ಪ್ರತ್ಯೇಕತೆಗೆ ಪ್ರತಿಫಲ ಸಿಗುತ್ತೆ ಎಂದರು.

ಮಾತಾಜಿ ದರ್ಶನ ಪಡೆದು ಮಾತನಾಡಿದ ಗೃಹ ಸಚಿವ ಎಂ.ಬಿ.ಪಾಟೀಲ್, ಹನ್ನೆರಡನೇ ಶತಮಾನದಲ್ಲಿ ಆಗಿದ್ದು ಕ್ರಾಂತಿಯಲ್ಲ ದುರಂತ. ಯಾರು ಮಾನ್ಯತೆ ಕೊಡಲಿ ಬಿಡಲಿ ಎಷ್ಟೇ ಅವಮಾನಗಳು ಬಂದರೂ ಬಸವ ಧರ್ಮ ಜಾಗತಿಕ ಧರ್ಮವಾಗುತ್ತೆ ಎಂದರು.

TAGGED:bagalakoteMata MahadeviPublic TVಪಬ್ಲಿಕ್ ಟಿವಿಬಾಗಲಕೋಟೆಮಾತೆ ಮಾತೆ ಮಹಾದೇವಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
12 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
33 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
56 minutes ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
1 hour ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
2 hours ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?