ಲಕ್ನೋ: ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಹೊಡೆದು ಸುಮಾರು 500 ಮೀ.ವರೆಗೆ ಎಳೆದೊಯ್ದ ಘಟನೆ ಉತ್ತರಪ್ರದೇಶದ ಮೈನ್ಪುರಿ ನಗರದಲ್ಲಿ ನಡೆದಿದೆ.
ದೇವೇಂದ್ರ ಯಾದವ್ ಅವರು ಮೈನ್ಪುರಿಯ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದು, ಪಕ್ಷದ ಕಚೇರಿಯಿಂದ ಮನೆಗೆ ಹಿಂತಿರುಗುತ್ತಿದ್ದರು. ಆ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
#WATCH A truck dragged the car of SP District President Devendra Singh Yadav for about 500 meters in UP’s Mainpuri pic.twitter.com/86qujRmENr
— ANI UP/Uttarakhand (@ANINewsUP) August 8, 2022
ಈ ಅಪಘಾತದ ವೀಡಿಯೋವು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ದೇವೇಂದ್ರ ಯಾದವ್ ಅವರ ಕಾರನ್ನು ನಿಲ್ಲಿಸುವ ಮೊದಲು ಲಾರಿಯೊಂದು ಬಂದು ಸುಮಾರು 500 ಮೀ. ದೂರದವರೆಗೆ ಎಳೆದೊಯ್ದಿದೆ. ಕಾರು ನಿಂತ ತಕ್ಷಣ ರಸ್ತೆಯಲ್ಲಿದ್ದ ಹಲವರು ಸ್ಥಳಕ್ಕೆ ಧಾವಿಸಿ ಸಮಾಜವಾದಿ ಪಕ್ಷದ ನಾಯಕನನ್ನು ರಕ್ಷಿಸಲು ಯತ್ನಿಸಿದರು. ಇದನ್ನೂ ಓದಿ: ವಿದ್ಯಾರ್ಥಿನಿಗೆ ಚುಡಾಯಿಸಿದ ವಿದ್ಯಾರ್ಥಿ – ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಮಾರಾಮಾರಿ
ಘಟನೆಗೆ ಸಂಬಂಧಿಸಿ ಆರೋಪಿ ಟ್ರಕ್ ಚಾಲಕ ಇಟಾವಾ ಮೂಲದವನಾಗಿದ್ದು, ಆತನನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ದೇವಸ್ಥಾನದಲ್ಲಿ ಕಾಲ್ತುಳಿತ- ಮೂವರು ಸಾವು