ಟ್ರಕ್, ಸಾರಿಗೆ ಬಸ್ ಡಿಕ್ಕಿ – 8 ಜನರು ರ್ದುಮರಣ, 30ಕ್ಕೂ ಹೆಚ್ಚು ಜನರಿಗೆ ಗಾಯ

Public TV
1 Min Read
Kolar Andrapradesh accident

-ಕೋಲಾರ ಜಿಲ್ಲೆ ಗಡಿ ಭಾಗದಲ್ಲಿ ಭೀಕರ ಅಪಘಾತ

ಕೋಲಾರ: ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕೋಲಾರ (Kolar) ಜಿಲ್ಲೆಯ ಗಡಿ ಆಂಧ್ರಪ್ರದೇಶದ (Andrapradesh) ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

ಕಂಟೈನರ್ ಹೊಂದಿದ್ದ ಟ್ರಕ್ ಮತ್ತು ಆಂಧ್ರ ಸಾರಿಗೆ ಬಸ್ ಡಿಕ್ಕಿಯಾಗಿ ಬಸ್ ನಜ್ಜುಗುಜ್ಜಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಗಾಯಾಳುಗಳನ್ನು ಚಿತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನೂ ಓದಿ: ನಾನಿನ್ನೂ ವೆಬ್‌ಸೀರಿಸ್‌ ನೋಡಿಲ್ಲ, ಮಾಡುವವರು ಸರ್ಕಾರವನ್ನು ಒಳ್ಳೆಯ ರೀತಿಯಲ್ಲಿ ತೋರಿಸಲ್ಲ: ಎಸ್.ಜೈಶಂಕರ್

Kokar Andrapradesh accident

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು (Palamaner) ಬಳಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರು ಹಾಗೂ ಚಿತ್ತೂರು ರಾಷ್ಟೀಯ ಹೆದ್ದಾರಿಯ ಮೋಗಲಿ ಘಾಟ್‌ನಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಆಂಧ್ರ ಪೊಲೀಸರು ಭೇಟಿ ನೀಡಿದ್ದಾರೆ. ಸ್ಥಳೀಯರು ಮತ್ತು ಪೊಲೀಸರು ರಕ್ಷಣಾಕಾರ್ಯವನ್ನು ಕೈಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ಕೇಜ್ರಿವಾಲ್‌ಗೆ ಜಾಮೀನು – 6 ತಿಂಗಳ ಬಳಿಕ ಜೈಲಿನಿಂದ ಹೊರಬಂದ ದೆಹಲಿ ಸಿಎಂ

Share This Article