ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆಯ ದಿಕ್ಸೂಚಿ, ಮಿನಿ ಮಹಾಸಮರ ಅಂತಲೇ ಬಿಂಬಿತವಾಗಿರೋ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ.
ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ನಡೆಯಲಿದೆ. ಈಗಾಗಲೇ ಮತಗಟ್ಟೆ ಸಮೀಕ್ಷೆಗಳ ಪ್ರಕಾರ ರಾಜಸ್ಥಾನದಲ್ಲಿ ಕಾಂಗ್ರೆಸ್ ಏಕಚಕ್ರಾಧಿಪತ್ಯ ಸಾಧಿಸಲಿದ್ದರೆ, ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್ ಇದ್ದು, ಮಿಜೋರಾಂನಲ್ಲಿ ಮಿಜೋರಾಂ ನ್ಯಾಷನಲ್ ಫ್ರಂಟ್-ಕಾಂಗ್ರೆಸ್ ನಡುವೆ ಫೈಟ್ ಇದೆ.
ಛತ್ತೀಸ್ಗಢದಲ್ಲಿ ಕುದುರೆ ವ್ಯಾಪಾರದ ಭೀತಿಯಲ್ಲಿರೋ ಕಾಂಗ್ರೆಸ್, ತನ್ನೆಲ್ಲಾ ಶಾಸಕರು ಒಂದೆಡೆ ಇರುವಂತೆ ಆದೇಶಿಸಿದೆ. ಅಲ್ಲದೆ ತೆಲಂಗಾಣದಲ್ಲಿ ಟಿಆರ್ಎಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದ್ರೆ, ಬಹುಮತ ಸಿಗೋದು ಅನುಮಾನ ಎಂದು ಸಮೀಕ್ಷೆಗಳು ತಿಳಿಸಿವೆ
ಕರ್ನಾಟಕದಲ್ಲಿ ಬಹುಮತ ಇಲ್ಲದಿದ್ದರೂ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಮೊದಲು ಆಹ್ವಾನ ನೀಡಿದ ಘಟನೆಯಿಂದ ಕಾಂಗ್ರೆಸ್-ಟಿಡಿಪಿ ನೇತೃತ್ವದ `ಮಹಾಕೂಟಮಿ’ ಪಕ್ಷಗಳು ಎಚ್ಚೆತ್ತಿವೆ. ನಾವು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದೇವೆ. ಫಲಿತಾಂಶ ಬಂದ ಕೂಡಲೇ ಸರ್ಕಾರ ರಚನೆಗೆ ನಮ್ಮನ್ನು ಆಹ್ವಾನಿಸಬೇಕು ಅಂತ ರಾಜ್ಯಪಾಲ ಇಎಸ್ಎಲ್ ನರಸಿಂಹನ್ ಅವರಿಗೆ ಮನವಿ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಕೆಸಿಆರ್ಗೆ ಬೆಂಬಲ ನೀಡೋದಾಗಿ ಎಂಐಎಂನ ಓವೈಸಿ ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv