Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 700 ವರ್ಷದ ಹಿಂದೆ ತುಘಲಕ್ ಸಹ ನೋಟ್ ಬ್ಯಾನ್ ಮಾಡಿದ್ದ: ಪ್ರಧಾನಿ ಮೋದಿಗೆ ಯಶವಂತ್ ಸಿನ್ಹಾ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 700 ವರ್ಷದ ಹಿಂದೆ ತುಘಲಕ್ ಸಹ ನೋಟ್ ಬ್ಯಾನ್ ಮಾಡಿದ್ದ: ಪ್ರಧಾನಿ ಮೋದಿಗೆ ಯಶವಂತ್ ಸಿನ್ಹಾ ಟಾಂಗ್

Latest

700 ವರ್ಷದ ಹಿಂದೆ ತುಘಲಕ್ ಸಹ ನೋಟ್ ಬ್ಯಾನ್ ಮಾಡಿದ್ದ: ಪ್ರಧಾನಿ ಮೋದಿಗೆ ಯಶವಂತ್ ಸಿನ್ಹಾ ಟಾಂಗ್

Public TV
Last updated: November 15, 2017 5:39 pm
Public TV
Share
2 Min Read
Yashwant Sinha modhi
SHARE

ಅಹಮಾದಾಬಾದ್: 700 ವರ್ಷಗಳ ಹಿಂದೆ ರಾಜ ಮಹಮ್ಮದ್ ಬಿನ್ ತುಘಲಕ್ ಸಹ ಹಳೆಯ ಕರೆನ್ಸಿಗಳನ್ನು ಅಮಾನ್ಯಗೊಳಿಸಿದ್ದ ಎಂದು ಹೇಳುವ ಮೂಲಕ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿಯವರ ನೋಟ್ ಬ್ಯಾನ್ ನಿಂದಾಗಿ ಭಾರತದ ಅರ್ಥ ವ್ಯವಸ್ಥೆಗೆ ಸುಮಾರು 3.75 ಲಕ್ಷ ಕೋಟಿ ರೂ. ನಷ್ಟವಾಗಿದೆ. ಈ ಹಿಂದೆ ರಾಜರ ಆಡಳಿತಾವಧಿಯಲ್ಲಿ ಹಲವು ಶೇನ್ ಶಾಗಳು ಕರೆನ್ಸಿಗಳನ್ನು ಅಮಾನ್ಯಗೊಳಿಸಿದ್ದರು. ಮಹಮ್ಮದ್ ಬಿನ್ ತುಘಲಕ್ ಚಾಲ್ತಿಯಲ್ಲಿದ್ದ ನಾಣ್ಯಗಳನ್ನು ರದ್ದುಗೊಳಿಸಿ, ಹೊಸ ನಾಣ್ಯಗಳನ್ನು ಚಲಾವಣೆಗೆ ತಂದಿದ್ದ ಎಂದು ಹೇಳಿದರು.

yashwant sinha

ಇದೇ ತುಘಲಕ್ ತನ್ನ ರಾಜಧಾನಿಯನ್ನು ದೆಹಲಿಯಿಂದ ದೌಲತಾಬಾದ್‍ಗೆ ವರ್ಗಾಯಿಸಿದ್ದ. ಮತ್ತೆ ರಾಜಧಾನಿಯನ್ನು ದೌಲತಾಬಾದ್ ನಿಂದ ಪುನಃ ದೆಹಲಿಗೆ ಸ್ಥಳಾಂತರಿಸಿ ಪ್ರಜೆಗಳ ಕೋಪಕ್ಕೆ ಕಾರಣನಾಗಿದ್ದನು.

ಪ್ರಜಾಪ್ರಭುತ್ವ ಉಳಿಸಿ ಆಂದೋಲನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿನ್ಹಾ, ದೇಶದ ಆರ್ಥಿಕ ಪರಿಸ್ಥಿತಿಯನ್ನು ಬದಲಾಯಿಸಲು ಇದು ಸೂಕ್ತ ಸಮಯವಾಗಿದೆ. ಆದರೆ ನೋಟ್ ಬ್ಯಾನ್ ನಿಂದಾಗಿ ದೇಶಕ್ಕೆ ಆರ್ಥಿಕ ಹೊರೆ ಉಂಟಾಗಿದೆ. ನೋಟು ನಿಷೇಧದ ಬಳಿಕ ಹೊಸ ನೋಟುಗಳ ಮುದ್ರಣಕ್ಕಾಗಿ 1,28,000 ಕೋಟಿ ರೂ. ವ್ಯಯವಾಗಿದೆ. ದೇಶದ ಅರ್ಥವ್ಯವಸ್ಥೆಯಲ್ಲಿ ಆರ್ಥಿಕ ಚಟುವಟಿಕೆಗಳು ನಿಧಾನಗೊಂಡಿದ್ದರಿಂದ ಅಂದಾಜು 2,25,000 ಕೋಟಿ ರೂ. ನಷ್ಟವಾಗಿದೆ. ಒಟ್ಟಾರೆಯಾಗಿ ದೇಶಕ್ಕೆ 3.75 ಲಕ್ಷ ಕೋಟಿ ರೂ. ನಷ್ಟವಾಗಿದೆ ಎಂದರು.

ನೋಟ್ ಬ್ಯಾನ್ ಹಾಗೂ ಜಿಎಸ್‍ಟಿ ಪ್ರಕ್ರಿಯೆಗಳು ಮಾಧ್ಯಮ ಸಮಾರಂಭಗಳಾಗಿ ಬದಲಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಕೆಲಸಗಳನ್ನು ಮರೆಯಬಾರದು. ಈ ಹಿಂದೆ ಈ ರೀತಿಯ ಕೆಲಸಗಳನ್ನು ಮಾಡದೇ ಇದ್ದರೆ ಅವರಿಗೆ ಭಾರತ ರತ್ನ ಗೌರವವನ್ನು ನಾವು ಕೊಟ್ಟಿದ್ದು ಯಾಕೆ ಎಂದು ಅವರು ಪ್ರಶ್ನಿಸಿದರು.

ಸಿನ್ಹಾ ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ARUN JAITLY

ಯಶವಂತ್ ಸಿನ್ಹಾ ಅವರು ಮೋದಿ ಸೇರಿದಂತೆ ಪಕ್ಷದ ನಾಯಕರನ್ನು ಟೀಕಿಸುವುದು ಇದೆ ಮೊದಲಲ್ಲ. ಸೆಪ್ಟೆಂಬರ್ ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿಯಿಂದ ದೇಶದ ಅರ್ಥವ್ಯವಸ್ಥೆ ಹಾಳಾಗಿದೆ ಎಂದು ಟೀಕಿಸಿದ್ದರು. 2014ರ ಲೋಕಸಭಾ ಚುನಾವಣೆಗಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಲಾದ ಬಳಿಕ ಹಿರಿಯ ಬಿಜೆಪಿ ನಾಯಕರಾದ ಎಲ್ ಕೆ ಆಡ್ವಾಣಿ, ಯಶವಂತ್ ಸಿನ್ಹಾ ಮತ್ತು ಮುರಳಿ ಮನೋಹರ ಜೋಷಿ ಅವರು ಪಕ್ಷದ ನಾಯಕತ್ವವನ್ನು ಹಲವು ಸಂದರ್ಭಗಳಲ್ಲಿ ಟೀಕಿಸಿದ್ದರು.

ತಮ್ಮ ಸಚಿವ ಸಂಪುಟ ಸೇರ್ಪಡೆಗೆ ಸಚಿವರ ಗರಿಷ್ಠ ವಯೋಮಿತಿಯನ್ನು 75ಕ್ಕೆ ಸೀಮಿತಗೊಳಿಸಿದ್ದಕ್ಕೆ ಯಶವಂತ್ ಸಿನ್ಹಾ, ಈಗಿನ ಸರ್ಕಾರ 75 ದಾಟಿದವರನ್ನು “ಬ್ರೇನ್ ಡೆಡ್ ಎಂದು ಡಿಕ್ಲೇರ್ ಮಾಡಿದೆ”ಎಂದು ಲೇವಡಿ ಮಾಡಿದ್ದರು.

ಯಶವಂತ್ ಸಿನ್ಹಾ ಸಹಿತ ಹಲವು ಹಿರಿಯ ಬಿಜೆಪಿ ನಾಯಕರನ್ನು ಮೂಲೆ ಗುಂಪು ಮಾಡಿ `ಮಾರ್ಗದರ್ಶಕ ಮಂಡಳಿ’ಯ ಸದಸ್ಯರನ್ನಾಗಿ ನೇಮಿಸಿದ್ದಾರೆ ಎನ್ನುವ ಆರೋಪ ಮೋದಿ ಮೇಲಿದೆ. ಸಿನ್ಹಾ ಅವರು ಮಾರ್ಗದರ್ಶಕ ಮಂಡಳಿಯನ್ನು ಆನೇಕ ಬಾರಿ ಲೇವಡಿ ಮಾಡಿ ಮಾತನಾಡಿದ್ದರು.

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು 1 ವರ್ಷದ ಹಿಂದೆಯೇ ನಾನು ಸಮಯವನ್ನು ಕೇಳಿದ್ದೆ, ಆದರೆ ಇದೂವರೆಗೂ ನನಗೆ ಭೇಟಿಯಾಗಲು ಸಮಯವನ್ನು ನೀಡಿಲ್ಲ ಎಂದು ಯಶವಂತ್ ಸಿನ್ಹಾ ವಾಗ್ದಾಳಿ ನಡೆಸಿದ್ದರು.

 

TAGGED:bjpNew Delhiprime minister narendra modiPublic TVTughlaqYashwant Sinhaತುಘಲಕ್ನವದೆಹಲಿಪಬ್ಲಿಕ್ ಟಿವಿಪ್ರಧಾನಿ ಪ್ರಧಾನಿ ಮೋದಿಬಿಜೆಪಿಯಶವಂತ್ ಸಿನ್ಹಾ
Share This Article
Facebook Whatsapp Whatsapp Telegram

Cinema news

Kavya 1
BBK Season 12 | ಟೈಟಲ್‌ ಸನಿಹದಲ್ಲಿ ತಪ್ಪಿದ ಲಕ್‌ – 3ನೇ ರನ್ನರ್‌ಅಪ್‌ ಕಾವ್ಯ ಶೈವ ಔಟ್‌!
Bengaluru City Cinema Latest Main Post TV Shows
Raghu
BBK Season 12 | ಗ್ರ್ಯಾಂಡ್‌ ಫಿನಾಲೆಯಿಂದ ರಗಡ್‌ ರಘು ಔಟ್‌
Cinema Latest Main Post TV Shows
AR Rahman 2
ಭಾರತ ನನ್ನ ಸ್ಫೂರ್ತಿ, ತವರು – ಕೆಲವೊಮ್ಮೆ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಲ್ಪಡಬಹುದು: ರೆಹಮಾನ್ ಸ್ಪಷ್ಟನೆ
Bollywood Cinema Latest National
Dhanush Gowda
BBK 12 | Top-5 ಪಟ್ಟದಿಂದ ಔಟ್‌ – ಗ್ರ್ಯಾಂಡ್‌ ಫಿನಾಲೆಯಿಂದ ಹೊರಬಂದ ಧನುಷ್‌
Cinema Latest Main Post TV Shows

You Might Also Like

Narendra Modi
Latest

ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಶಿಕ್ಷೆಯಾಗಲೇಬೇಕು, ‘ಮಹಾ ಜಂಗಲ್ ರಾಜ್’ ಯುಗ ಕೊನೆಗೊಳಿಸಬೇಕು: ಮೋದಿ ಕರೆ

Public TV
By Public TV
2 hours ago
Haveri Sadhana Samavesha Shivananda Patil
Districts

ಫೆ. 13ರಂದು ಹಾವೇರಿಯಲ್ಲಿ ಬೃಹತ್ ಸಾಧನಾ ಸಮಾವೇಶ – ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

Public TV
By Public TV
3 hours ago
Road Accident
Latest

ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Public TV
By Public TV
3 hours ago
Agriculture Award For Karnataka PM Fasal Bima Yojana
Bengaluru City

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

Public TV
By Public TV
4 hours ago
HT Manju
Bengaluru City

ಅಬಕಾರಿ ಇಲಾಖೆ ಕರ್ಮಕಾಂಡ | ಸನ್ನದು ಪಡೆಯಲು 2.30 ಕೋಟಿ ಬೇಡಿಕೆ ಆರೋಪದ ಆಡಿಯೋ ವೈರಲ್ – ಹೆಚ್‌ಟಿ ಮಂಜು ದೂರು

Public TV
By Public TV
4 hours ago
Sara Mahesh
Bengaluru City

ಜೆಡಿಎಸ್‌ ಪಾಳಯದಲ್ಲಿ ಕ್ಷಿಪ್ರ ಕ್ರಾಂತಿ – ಜಿಟಿಡಿ ಕ್ಷೇತ್ರದಿಂದ ಸಾರಾ ಮಹೇಶ್‌ ಕಣಕ್ಕಿಳಿಸಲು ಪ್ಲ್ಯಾನ್‌!

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?