Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ನೇರ ರೈಲ್ವೆ ಕಾಮಗಾರಿ ಆರಂಭಿಸಿ- ಅಧಿಕಾರಿಗಳಿಗೆ ಎ.ನಾರಾಯಣಸ್ವಾಮಿ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ನೇರ ರೈಲ್ವೆ ಕಾಮಗಾರಿ ಆರಂಭಿಸಿ- ಅಧಿಕಾರಿಗಳಿಗೆ ಎ.ನಾರಾಯಣಸ್ವಾಮಿ ಸೂಚನೆ

Chitradurga

ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ನೇರ ರೈಲ್ವೆ ಕಾಮಗಾರಿ ಆರಂಭಿಸಿ- ಅಧಿಕಾರಿಗಳಿಗೆ ಎ.ನಾರಾಯಣಸ್ವಾಮಿ ಸೂಚನೆ

Public TV
Last updated: September 8, 2021 9:31 pm
Public TV
Share
3 Min Read
chitradurga a narayanaswamy
SHARE

ಚಿತ್ರದುರ್ಗ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಕೆಲವು ಕಡೆ ಭೂಸ್ವಾಧೀನ ಪ್ರಕ್ರಿಯೆ ಭಾಗಶಃ ಮುಕ್ತಾಯವಾಗಿದೆ. ಇನ್ನೂ ಕೆಲವು ಕಡೆ ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಎರಡು ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಹಸ್ತಾಂತರಿಸಿ, ನೇರ ರೈಲ್ವೆ ಯೋಜನೆ ಕಾಮಗಾರಿ ಆರಂಭಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಾವಣಗೆರೆ, ಚಿತ್ರದುರ್ಗ, ತುಮಕೂರು ನೇರ ರೈಲ್ವೆ ಯೋಜನೆಗೆ 1,800 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ರೈಲ್ವೆ ಇಲಾಖೆ ರೈಟ್ಸ್ ಸಂಸ್ಥೆಗೆ ಅಧಿಕಾರ ನೀಡಿದೆ. ರೈಟ್ಸ್ ಅವರು ಕಾಮಗಾರಿ ಕೈಗೆತ್ತಿಕೊಳ್ಳಲು ಈಗಾಗಲೇ ಅವಶ್ಯಕ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ನೇರ ರೈಲ್ವೆ ಯೋಜನೆಗೆ ಸಂಬಂಧಪಟ್ಟಂತೆ ಕಚೇರಿ ಪ್ರಾರಂಭ ಮಾಡಲು ಸಿದ್ಧತೆ ಮಾಡಲಾಗಿದ್ದು, ನವೆಂಬರ್ ತಿಂಗಳಲ್ಲಿ ನೇರ ರೈಲ್ವೆ ಯೋಜನೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಉದ್ದೇಶಿಸಲಾಗಿದೆ ಎಂದರು. ಇದನ್ನೂ ಓದಿ: ಚಾರ್ಜ್ ಶೀಟ್‍ನಲ್ಲಿ ಅನುಶ್ರೀ ಆರೋಪಿಯೆಂದು ಉಲ್ಲೇಖವಾಗಿಲ್ಲ: ಮಂಗಳೂರು ಪೊಲೀಸ್ ಆಯುಕ್ತರ ಸ್ಪಷ್ಟನೆ 

ದಾವಣಗೆರೆಯಿಂದ ಚಿತ್ರದುರ್ಗದ ಗಡಿವರೆಗೆ 236 ಎಕರೆಯಲ್ಲಿ 209 ಎಕರೆ ಭೂಸ್ವಾಧೀನವಾಗಿದೆ. 27 ಎಕರೆ ಫೈನಲ್ ನೋಟಿಫಿಕೇಷನ್ ಆಗಿದ್ದು, ಆವಾರ್ಡ್ ಆಗಬೇಕಿದೆ. ಸರ್ಕಾರ 82 ಕೋಟಿ ರೂ. ಬಿಡುಗಡೆ ಮಾಡಿದ್ದು, ಈಗಾಗಲೇ 52 ಕೋಟಿ ರೂ. ಪಾವತಿಸಲಾಗಿದೆ. 32 ಎಕರೆಯನ್ನು ಸಂಪೂರ್ಣವಾಗಿ ಹಸ್ತಾಂತರ ಮಾಡಲಾಗಿದ್ದು, ಕಾಮಗಾರಿ ಪ್ರಾರಂಭ ಮಾಡಬೇಕಿದೆ ಎಂದರು.

ತುಮಕೂರಿನ ಊರುಕೇರಿಯಿಂದ ಶಿರಾ ಗಡಿಭಾಗದವರೆಗೆ 159 ಎಕರೆ ಭೂಸ್ವಾಧೀನವಾಗಲಿದೆ. 18 ಕಿ.ಮೀ. ಫೈನಲ್ ನೋಟಿಫಿಕೇಷನ್ ಆಗಿ ಆವಾರ್ಡ್ ಆಗಿ ಹಸ್ತಾಂತರ ಮಾಡಲು ಸಂಪೂರ್ಣ ಕ್ಲಿಯರೆನ್ಸ್ ಇದೆ. ಇದಕ್ಕಾಗಿ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಅವಶ್ಯಕತೆ ಇದೆ. ಶಿರಾದಿಂದ ಹಿರಿಯೂರುವರೆಗೆ 638 ಎಕರೆ ಭೂಸ್ವಾಧೀನ ಪ್ರಕ್ರಿಯೆ ಆಗಬೇಕಿದೆ. ಇದರಲ್ಲಿ 48 ಎಕರೆ ಭೂಸ್ವಾಧೀನವಾಗಿದೆ. ಉಳಿದ 202 ಎಕರೆ ಸರ್ಕಾರದಲ್ಲಿ ಆವಾರ್ಡ್‍ಗೆ ಬಾಕಿ ಇದೆ. 179 ಎಕೆರೆ 19 (1) ಆಗಿದೆ. 126 ಎಕರೆ ಆರ್ ಆರ್ ಸಭೆ ಆಗಿದೆ ಹಾಗೂ 91 ಎಕರೆ 11 (1) ಹಂತದಲ್ಲಿದೆ. ಒಟ್ಟು 59 ಕಿ.ಮೀ ಇದೆ. ಇದಕ್ಕೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದರೆ ಇನ್ನೂ ಮೂರು ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಶಿರಾ ಗಡಿಯಿಂದ ದಾವಣಗೆರೆವರೆಗೂ 105 ಕಿ.ಮೀ ಭೂಸ್ವಾಧೀನವಾಗಬೇಕಿದೆ. ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಎರಡು ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, 684 ಎಕರೆ ಬೇರೆ ಬೇರೆ ಹಂತದಲ್ಲಿ ಬಾಕಿ ಇದ್ದು, ಭೂಸ್ವಾಧೀನ ಆಗಬೇಕಿದೆ. ಇದಕ್ಕಾಗಿ ಸರ್ಕಾರ 57 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇನ್ನೂ ಬಾಕಿ 477 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ನೇರ ರೈಲ್ವೆ ಯೋಜನೆ ಕಾಮಗಾರಿ ಆರಂಭಕ್ಕೆ ತುರ್ತಾಗಿ ರಾಜ್ಯ ಸರ್ಕಾರದಿಂದ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಲು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು. ನೇರ ರೈಲ್ವೆ ಮಾರ್ಗದಿಂದಾಗಿ ಭವಿಷ್ಯದಲ್ಲಿ ಚಿತ್ರದುರ್ಗ ಸೇರಿದಂತೆ ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಅನೇಕ ಕೈಗಾರಿಕೀಕರಣ ಪ್ರದೇಶ ಸೇರಿದಂತೆ ಅನುಕೂಲಗಳು ಆಗಲಿವೆ ಎಂದು ತಿಳಿಸಿದರು. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.0.64ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,102 ಹೊಸ ಕೊರೊನಾ ಕೇಸ್, 17 ಸಾವು

ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲ್ವೆ ಮಾರ್ಗ ಯೋಜನೆಯ ಚಿತ್ರದುರ್ಗ ವಿಶೇಷ ಭೂಸ್ವಾಧೀನಾಧಿಕಾರಿ ಆರ್.ಚಂದ್ರಯ್ಯ, ತುಮಕೂರು ವಿಶೇಷ ಭೂಸ್ವಾಧೀನಾಧಿಕಾರಿ ಧರ್ಮಪಾಲ್, ದಾವಣಗೆರೆ ವಿಶೇಷ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

TAGGED:A NarayanaswamyChitradurgaPublic TVTumkur-Chitradurga-Davanagere Direct Railway Projectಎ ನಾರಾಯಣಸ್ವಾಮಿಚಿತ್ರದುರ್ಗತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

Ranebennur Stray Dog Attack
Districts

ಬೀದಿ ನಾಯಿಗಳ ಹಾವಳಿಗೆ ಬೆಚ್ಚಿದ ರಾಣೇಬೆನ್ನೂರು – 15ಕ್ಕೂ ಹೆಚ್ಚು ಜನರ ಮೇಲೆ ದಾಳಿ

Public TV
By Public TV
8 minutes ago
T20 World Cup 1
Cricket

T20 World Cup | 20 ತಂಡಗಳ ನಾಯಕರ ಬಲ ಹೇಗಿದೆ? ಆತಿಥ್ಯ ವಹಿಸಲಿರುವ ಕ್ರೀಡಾಂಗಣಗಳು ಯಾವುವು?

Public TV
By Public TV
39 minutes ago
team india t20 world Cup 1
Cricket

ಇಂಡೋ – ಪಾಕ್‌ ವಿವಾದದ ನಡುವೆ ಚುಟುಕು ಕ್ರಿಕೆಟ್‌ ಕದನ – ಇಂದಿನಿಂದ ವಿಶ್ವಕಪ್‌ ಹಬ್ಬ!

Public TV
By Public TV
1 hour ago
KSRTC BMTC Tobacco Advertisement
Bengaluru City

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Public TV
By Public TV
1 hour ago
delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
9 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?