Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ನೇರ ರೈಲ್ವೆ ಕಾಮಗಾರಿ ಆರಂಭಿಸಿ- ಅಧಿಕಾರಿಗಳಿಗೆ ಎ.ನಾರಾಯಣಸ್ವಾಮಿ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ನೇರ ರೈಲ್ವೆ ಕಾಮಗಾರಿ ಆರಂಭಿಸಿ- ಅಧಿಕಾರಿಗಳಿಗೆ ಎ.ನಾರಾಯಣಸ್ವಾಮಿ ಸೂಚನೆ

Chitradurga

ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ನೇರ ರೈಲ್ವೆ ಕಾಮಗಾರಿ ಆರಂಭಿಸಿ- ಅಧಿಕಾರಿಗಳಿಗೆ ಎ.ನಾರಾಯಣಸ್ವಾಮಿ ಸೂಚನೆ

Public TV
Last updated: September 8, 2021 9:31 pm
Public TV
Share
3 Min Read
chitradurga a narayanaswamy
SHARE

ಚಿತ್ರದುರ್ಗ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಕೆಲವು ಕಡೆ ಭೂಸ್ವಾಧೀನ ಪ್ರಕ್ರಿಯೆ ಭಾಗಶಃ ಮುಕ್ತಾಯವಾಗಿದೆ. ಇನ್ನೂ ಕೆಲವು ಕಡೆ ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಎರಡು ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಹಸ್ತಾಂತರಿಸಿ, ನೇರ ರೈಲ್ವೆ ಯೋಜನೆ ಕಾಮಗಾರಿ ಆರಂಭಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಾವಣಗೆರೆ, ಚಿತ್ರದುರ್ಗ, ತುಮಕೂರು ನೇರ ರೈಲ್ವೆ ಯೋಜನೆಗೆ 1,800 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ರೈಲ್ವೆ ಇಲಾಖೆ ರೈಟ್ಸ್ ಸಂಸ್ಥೆಗೆ ಅಧಿಕಾರ ನೀಡಿದೆ. ರೈಟ್ಸ್ ಅವರು ಕಾಮಗಾರಿ ಕೈಗೆತ್ತಿಕೊಳ್ಳಲು ಈಗಾಗಲೇ ಅವಶ್ಯಕ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ನೇರ ರೈಲ್ವೆ ಯೋಜನೆಗೆ ಸಂಬಂಧಪಟ್ಟಂತೆ ಕಚೇರಿ ಪ್ರಾರಂಭ ಮಾಡಲು ಸಿದ್ಧತೆ ಮಾಡಲಾಗಿದ್ದು, ನವೆಂಬರ್ ತಿಂಗಳಲ್ಲಿ ನೇರ ರೈಲ್ವೆ ಯೋಜನೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಉದ್ದೇಶಿಸಲಾಗಿದೆ ಎಂದರು. ಇದನ್ನೂ ಓದಿ: ಚಾರ್ಜ್ ಶೀಟ್‍ನಲ್ಲಿ ಅನುಶ್ರೀ ಆರೋಪಿಯೆಂದು ಉಲ್ಲೇಖವಾಗಿಲ್ಲ: ಮಂಗಳೂರು ಪೊಲೀಸ್ ಆಯುಕ್ತರ ಸ್ಪಷ್ಟನೆ 

ದಾವಣಗೆರೆಯಿಂದ ಚಿತ್ರದುರ್ಗದ ಗಡಿವರೆಗೆ 236 ಎಕರೆಯಲ್ಲಿ 209 ಎಕರೆ ಭೂಸ್ವಾಧೀನವಾಗಿದೆ. 27 ಎಕರೆ ಫೈನಲ್ ನೋಟಿಫಿಕೇಷನ್ ಆಗಿದ್ದು, ಆವಾರ್ಡ್ ಆಗಬೇಕಿದೆ. ಸರ್ಕಾರ 82 ಕೋಟಿ ರೂ. ಬಿಡುಗಡೆ ಮಾಡಿದ್ದು, ಈಗಾಗಲೇ 52 ಕೋಟಿ ರೂ. ಪಾವತಿಸಲಾಗಿದೆ. 32 ಎಕರೆಯನ್ನು ಸಂಪೂರ್ಣವಾಗಿ ಹಸ್ತಾಂತರ ಮಾಡಲಾಗಿದ್ದು, ಕಾಮಗಾರಿ ಪ್ರಾರಂಭ ಮಾಡಬೇಕಿದೆ ಎಂದರು.

ತುಮಕೂರಿನ ಊರುಕೇರಿಯಿಂದ ಶಿರಾ ಗಡಿಭಾಗದವರೆಗೆ 159 ಎಕರೆ ಭೂಸ್ವಾಧೀನವಾಗಲಿದೆ. 18 ಕಿ.ಮೀ. ಫೈನಲ್ ನೋಟಿಫಿಕೇಷನ್ ಆಗಿ ಆವಾರ್ಡ್ ಆಗಿ ಹಸ್ತಾಂತರ ಮಾಡಲು ಸಂಪೂರ್ಣ ಕ್ಲಿಯರೆನ್ಸ್ ಇದೆ. ಇದಕ್ಕಾಗಿ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಅವಶ್ಯಕತೆ ಇದೆ. ಶಿರಾದಿಂದ ಹಿರಿಯೂರುವರೆಗೆ 638 ಎಕರೆ ಭೂಸ್ವಾಧೀನ ಪ್ರಕ್ರಿಯೆ ಆಗಬೇಕಿದೆ. ಇದರಲ್ಲಿ 48 ಎಕರೆ ಭೂಸ್ವಾಧೀನವಾಗಿದೆ. ಉಳಿದ 202 ಎಕರೆ ಸರ್ಕಾರದಲ್ಲಿ ಆವಾರ್ಡ್‍ಗೆ ಬಾಕಿ ಇದೆ. 179 ಎಕೆರೆ 19 (1) ಆಗಿದೆ. 126 ಎಕರೆ ಆರ್ ಆರ್ ಸಭೆ ಆಗಿದೆ ಹಾಗೂ 91 ಎಕರೆ 11 (1) ಹಂತದಲ್ಲಿದೆ. ಒಟ್ಟು 59 ಕಿ.ಮೀ ಇದೆ. ಇದಕ್ಕೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದರೆ ಇನ್ನೂ ಮೂರು ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಶಿರಾ ಗಡಿಯಿಂದ ದಾವಣಗೆರೆವರೆಗೂ 105 ಕಿ.ಮೀ ಭೂಸ್ವಾಧೀನವಾಗಬೇಕಿದೆ. ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಎರಡು ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, 684 ಎಕರೆ ಬೇರೆ ಬೇರೆ ಹಂತದಲ್ಲಿ ಬಾಕಿ ಇದ್ದು, ಭೂಸ್ವಾಧೀನ ಆಗಬೇಕಿದೆ. ಇದಕ್ಕಾಗಿ ಸರ್ಕಾರ 57 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇನ್ನೂ ಬಾಕಿ 477 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ನೇರ ರೈಲ್ವೆ ಯೋಜನೆ ಕಾಮಗಾರಿ ಆರಂಭಕ್ಕೆ ತುರ್ತಾಗಿ ರಾಜ್ಯ ಸರ್ಕಾರದಿಂದ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಲು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು. ನೇರ ರೈಲ್ವೆ ಮಾರ್ಗದಿಂದಾಗಿ ಭವಿಷ್ಯದಲ್ಲಿ ಚಿತ್ರದುರ್ಗ ಸೇರಿದಂತೆ ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಅನೇಕ ಕೈಗಾರಿಕೀಕರಣ ಪ್ರದೇಶ ಸೇರಿದಂತೆ ಅನುಕೂಲಗಳು ಆಗಲಿವೆ ಎಂದು ತಿಳಿಸಿದರು. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.0.64ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,102 ಹೊಸ ಕೊರೊನಾ ಕೇಸ್, 17 ಸಾವು

ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲ್ವೆ ಮಾರ್ಗ ಯೋಜನೆಯ ಚಿತ್ರದುರ್ಗ ವಿಶೇಷ ಭೂಸ್ವಾಧೀನಾಧಿಕಾರಿ ಆರ್.ಚಂದ್ರಯ್ಯ, ತುಮಕೂರು ವಿಶೇಷ ಭೂಸ್ವಾಧೀನಾಧಿಕಾರಿ ಧರ್ಮಪಾಲ್, ದಾವಣಗೆರೆ ವಿಶೇಷ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

TAGGED:A NarayanaswamyChitradurgaPublic TVTumkur-Chitradurga-Davanagere Direct Railway Projectಎ ನಾರಾಯಣಸ್ವಾಮಿಚಿತ್ರದುರ್ಗತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

siddaramaiah 2
Bengaluru City

ಮುಡಾ ಹಗರಣ ಕೇಸ್‌ – ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

Public TV
By Public TV
4 minutes ago
hyderabad Murder
Crime

ಪ್ರೀತಿಗೆ ಅಡ್ಡಿಯಾಗಿದ್ದಕ್ಕೆ ಅಪ್ರಾಪ್ತೆ, ಲವ್ವರ್ ಸೇರಿ ಹೆತ್ತಮ್ಮನ ಹತ್ಯೆ – ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
6 minutes ago
Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
19 minutes ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
1 hour ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
2 hours ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?