Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರ್ಧಕ್ಕೆ ನಿಂತಿದೆ ವಿಸರ್ಜನೆಗೆಂದು ಹೊರಟ ಇತಿಹಾಸ ಪ್ರಸಿದ್ಧ ಗೂಳೂರು ಗಣಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅರ್ಧಕ್ಕೆ ನಿಂತಿದೆ ವಿಸರ್ಜನೆಗೆಂದು ಹೊರಟ ಇತಿಹಾಸ ಪ್ರಸಿದ್ಧ ಗೂಳೂರು ಗಣಪ

Districts

ಅರ್ಧಕ್ಕೆ ನಿಂತಿದೆ ವಿಸರ್ಜನೆಗೆಂದು ಹೊರಟ ಇತಿಹಾಸ ಪ್ರಸಿದ್ಧ ಗೂಳೂರು ಗಣಪ

Public TV
Last updated: December 10, 2019 9:46 am
Public TV
Share
3 Min Read
tmk ganapati
SHARE

– 9 ದಿನಗಳಿಂದ ನಿಂತಲ್ಲೆ ಗಣಪನಿಗೆ ಪೂಜೆ
– 500 ವರ್ಷದ ಇತಿಹಾಸದಲ್ಲೇ ಮೊದಲ ಬಾರಿ ಅರ್ಧಕ್ಕೆ ನಿಂತ ಮೆರವಣಿಗೆ

ತುಮಕೂರು: ಇತಿಹಾಸ ಪ್ರಸಿದ್ಧ ಗೂಳೂರು ಗಣಪತಿಯ ವಿಸರ್ಜನಾ ಮೂರ್ತಿ ಅರ್ಧಕ್ಕೆ ನಿಲ್ಲುವ ಮೂಲಕ ಅಚ್ಚರಿ ಹಾಗೂ ಆತಂಕ ಸೃಷ್ಟಿಸಿದೆ. ಸುಮಾರು ಐನೂರು ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿ ವಿಸರ್ಜನೆಗೆಂದು ಹೊರಟ ಗಣೇಶ ಉತ್ಸವ ಮಳೆಯ ಕಾರಣಕ್ಕೆ ಅರ್ಧಕ್ಕೆ ಮೊಟಕುಗೊಂಡಿದೆ.

tmk ganapati 1

ಕಳೆದ 9 ದಿನಗಳಿಂದ ಗಣೇಶ ಮೂರ್ತಿಗೆ ನಿಂತಲ್ಲೆ ಪೂಜೆ ಪುನಸ್ಕಾರ ನಡೆಯುತ್ತಿದೆ. ಗಣಪತಿ ಮೆರವಣಿಗೆ ಅರ್ಧಕ್ಕೆ ಮೊಟಕುಗೊಂಡಿದ್ದರಿಂದ ಭಕ್ತಾಧಿಗಳಲ್ಲಿ ಮುಂದೇನಾಗಲಿದೆಯೋ ಎಂಬ ಆತಂಕ ಕಾಡುತ್ತಿದೆ. ದೀಪಾವಳಿ ಹಬ್ಬದಿಂದ ಕಾರ್ತಿಕ ಮಾಸದ ಅಂತ್ಯದವರೆಗೂ ನೆರವೇರುವ ಐತಿಹಾಸಿಕ ಪ್ರಸಿದ್ಧ ತುಮಕೂರಿನ ಗೂಳೂರು ಗಣಪತಿ ದೇವರ ಮೆರವಣಿಗೆ ಅರ್ಧಕ್ಕೆ ಮೊಟಕುಗೊಂಡಿದೆ. ನವೆಂಬರ್ 30 ರಂದು ಮೆರವಣಿಗೆಗೆಂದು ಹೊರಟು ನಿಂತಾಗ ಮಳೆ ಬಂದ ಕಾರಣಕ್ಕೆ ಮೆರವಣಿಗೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಆದರೆ ಇದೇ ಮೊದಲ ಬಾರಿಗೆ ವಿಸರ್ಜನೆಗೆಂದು ಮೆರವಣಿಗೆ ಹೊರಟ ಗೂಳೂರು ಗಣೇಶ ಮೂರ್ತಿ ಅರ್ಧದಲ್ಲೆ ನಿಂತಿದೆ. ಮೂಲ ಪೀಠದಿಂದ ಗಣೇಶ ಮೂರ್ತಿಯನ್ನು ಕೆಳಗಿಳಿಸಿ ಮುಖ್ಯದ್ವಾರಕ್ಕೆ ತರುತಿದ್ದಂತೆ ಮಳೆಯ ಕಾರಣಕ್ಕೆ ಮೆರವಣಿಗೆ ಸ್ಥಗಿತಗೊಂಡಿದೆ.

tmk ganapati 2

ಸಂಪ್ರದಾಯದ ಪ್ರಕಾರ ಪೀಠದಿಂದ ಒಮ್ಮೆ ಮೂರ್ತಿಯನ್ನು ಎತ್ತಿದ ಮೇಲೆ ಪುನಃ ಪೀಠಕ್ಕೆ ತರುವುದಾಗಲಿ, ವಿಸರ್ಜನೆ ಮಾಡದೇ ಇರುವುದಾಗಲಿ ಮಾಡಬಾರದು ಎಂಬ ಸಂಪ್ರದಾಯ ಇದೆ. ಆದರೆ ನವೆಂಬರ್ 30ರಂದು ಗಣೆಶೋತ್ಸವ ಮೆರವಣಿಗೆ ಹೋಗುತ್ತಿದ್ದಂತೆ ಮಳೆ ಜೋರಾಗಿ ಬರತೊಡಗಿತು. ಹೀಗಾಗಿ ಮೆರವಣಿಗೆ ಅರ್ಧಕ್ಕೆ ಮೊಟಕುಗೊಳಿಸಲಾಯಿತು. ಆದ್ದರಿಂದ ಮೂಲ ಪೀಠದಿಂದ ಹೊರತಂದಂತಹ ಗಣೇಶ ಮೂರ್ತಿಯನ್ನು ಅರ್ಧದಲ್ಲೆ ನಿಲ್ಲಿಸಿ ಪೂಜೆ ಮಾಡಲಾಗುತ್ತಿದೆ. ಕಳೆದ 9 ದಿನಗಳಿಂದ ದೇವಸ್ಥಾನದ ಮುಖ್ಯದ್ವಾರದ ಬಾಗಿಲಿನಲ್ಲಿ ಗಣೇಶನ ಮೂರ್ತಿ ಇರಿಸಿ ಪೂಜೆ ಸಲ್ಲಿಸಲಾಗುತ್ತಿದೆ.

tmk ganapati 3

ಗೂಳೂರು ಗಣಪತಿಯ ಇತಿಹಾಸದಲ್ಲೇ ವಿಸರ್ಜನಾ ಮೆರವಣಿಗೆ ಅರ್ಧಕ್ಕೆ ನಿಂತಿಲ್ಲ. ಕೆಲವೊಮ್ಮೆ ಮಳೆಯ ಕಾರಣಕ್ಕೆ ಕೆಲ ಗಂಟೆಗಳ ಕಾಲ ಮೆರವಣಿಗೆ ಸ್ಥಗಿತಗೊಂಡಿದ್ದರೂ ಅಂದೇ ಗೂಳೂರು ಕೆರೆಯಲ್ಲಿ ವಿಸರ್ಜನೆ ಮಾಡಲಾಗುತಿತ್ತು. ಆದರೆ ಈ ಬಾರಿ ಮಾತ್ರ ಮೆರವಣಿಗೆ ಹೊರಟು 9 ದಿನ ಕಳೆದರೂ ಗಣಪನಿಗೆ ವಿಸರ್ಜನೆ ಭಾಗ್ಯ ಕೂಡಿ ಬಂದಿಲ್ಲ. ಹಲವು ಪವಾಡ ಹೊಂದಿರುವ ಗೂಳೂರು ಗಣಪತಿಯ ವಿಸರ್ಜನೆಗೆ ಇಷ್ಟೊಂದು ವಿಳಂಬವಾಗಿರುವುದಕ್ಕೆ ಭಕ್ತಾಧಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ದೇವರಾದನೆಯಲ್ಲಿ ಏನಾದರೂ ವ್ಯತ್ಯಾಸ ಆಗಿದೆಯಾ? ಮುಂದೆನಾಗಲಿದೆಯೋ? ಒಳ್ಳೆಯೋದೋ? ಕೆಟ್ಟದೋ ಎಂಬ ಆತಂಕ ಸ್ಥಳೀಯರಲ್ಲಿ ಹಾಗೂ ಭಕ್ತಾಧಿಗಳಲ್ಲಿ ಮನೆಮಾಡಿದೆ.

tmk ganapati 4

ಹಿನ್ನೆಲೆ ಏನು?
ಈ ಗಣಪತಿಗೆ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸ ಹಾಗೂ ಅದರದ್ದೆ ಆದ ವಿಶೇಷತೆ ಇದೆ. ಬಾದ್ರಪದ ಶುಕ್ಲಪಕ್ಷದ ಚತುರ್ಥಿಯಂದು ಸಾಮಾನ್ಯವಾಗಿ ಗಣಪತಿ ಹಬ್ಬ ಆಚರಿಸುತ್ತಾರೆ. ಆದರೆ ಗೂಳೂರಿನಲ್ಲಿ ಮಾತ್ರ ಗಣಪತಿ ಹಬ್ಬದಂದು ಗಣೇಶ ಮೂರ್ತಿ ತಯಾರಿಕೆ ಆರಂಭವಾಗಿ ದೀಪಾವಳಿ ದಿನದಂದು ಪ್ರತಿಷ್ಠಾಪನೆ ಆಗುತ್ತದೆ. ಅಲ್ಲಿಂದ ಒಂದು ತಿಂಗಳ ಕಾಲ ಪೂಜೆ ಪುನಸ್ಕಾರ ನಡೆದು ವಿಸರ್ಜನೆ ಮಾಡಲಾಗುತ್ತದೆ.

tmk ganapati 5

ಭೃಗಮಹರ್ಷಿಗಳು ಕಾಶಿಯಾತ್ರೆ ಹೊರಟಾಗ ಗಣೇಶ ಚತುರ್ಥಿ ದಿನದಂದು ಗೂಳೂರಿಗೆ ಬಂದು ತಂಗಿದ್ದರಂತೆ. ಅಲ್ಲಿಯೇ ಮಣ್ಣಿನಿಂದ ಗಣೇಶ್ ಮೂರ್ತಿ ತಯಾರಿಸಿ ಪೂಜೆ ಮಾಡಿದ್ದರು ಎಂಬ ಪ್ರತೀತಿ ಇದೆ. ಆಗನಿಂದ ದೀಪಾವಳಿಗೆ ಪ್ರತಿಷ್ಠಾಪನೆ ಮಾಡಿ ಕಾರ್ತಿಕ ಮಾಸ ಕಳೆದ ಮೇಲೆ ಬೃಹತ್ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವ ಸಂಪ್ರದಾಯ ಬೆಳೆದುಕೊಂಡು ಬಂದಿದೆ. ಆದರೆ ಈ ಬಾರಿ ಗಣೇಶ ಮೆರವಣಿಗೆ ಅರ್ಧಕ್ಕೆ ನಿಂತಿದ್ದು ಭಕ್ತಾಧಿಗಳಲ್ಲಿ ಕಸಿವಿಸಿ ಉಂಟಾಗಿದೆ.

ಸದ್ಯ ಡಿಸೆಂಬರ್ 14-15ರಂದು ವಿಸರ್ಜನಾ ಕಾರ್ಯಕ್ರಮ ನಿಗದಿ ಮಾಡಲಾಗಿದೆ. ಆದರೆ ಹವಾಮಾನ ಇಲಾಖೆ ಮಾಹಿತಿಯಂತೆ ಡಿಸೆಂಬರ್ 14-15 ರಂದು ಮಳೆ ಸಾಧ್ಯತೆ ಕಡಿಮೆ ಇದ್ದು, ಅಂದು ವಿಸರ್ಜನೆ ಮಾಡಲು ಸಮಿತಿ ತೀರ್ಮಾನಿಸಿದೆ.

TAGGED:devoteesGulur GanapaPublic TVraintumakuruvisarjaneಗೂಳೂರು ಗಣಪತುಮಕೂರುಪಬ್ಲಿಕ್ ಟಿವಿಭಕ್ತರುಮಳೆವಿಸರ್ಜನೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
6 minutes ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
34 minutes ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
37 minutes ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
53 minutes ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
59 minutes ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ವಿಸ್ತರಣೆ ಇಲ್ಲ: ಅಮೆರಿಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?