Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಮಕೂರು ಜಿ.ಪಂ- ಅತೃಪ್ತರಲ್ಲೇ ಭಿನ್ನಮತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತುಮಕೂರು ಜಿ.ಪಂ- ಅತೃಪ್ತರಲ್ಲೇ ಭಿನ್ನಮತ

Districts

ತುಮಕೂರು ಜಿ.ಪಂ- ಅತೃಪ್ತರಲ್ಲೇ ಭಿನ್ನಮತ

Public TV
Last updated: January 26, 2020 4:47 pm
Public TV
Share
3 Min Read
tumakuru JDS HDK
SHARE

ತುಮಕೂರು: ತುಮಕೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ರಗಳೆ ಸದ್ಯಕ್ಕಂತೂ ಬಗೆ ಹರಿಯುವ ಲಕ್ಷಣ ಕಾಣುತ್ತಿಲ್ಲ. ಹಾಲಿ ಅಧ್ಯಕ್ಷರ ವಿರುದ್ಧ ಸಿಡಿದೆದ್ದಿರುವ ಸ್ವಪಕ್ಷ ಸದಸ್ಯರ ಭಿನ್ನಮತ ಶಮನಕ್ಕೆ ಮುಂದಾಗಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರವನ್ನ ಉಳಿಸಿಕೊಳ್ಳಲು ಜಾಣ ನಡೆ ಅನುಸರಿಸಿದ್ದಾರೆ. ಇತರೆ ಪಕ್ಷದ ಸದಸ್ಯರ ಬೆಂಬಲ ಪಡೆದು ಬಲ ಪ್ರದರ್ಶನ ಮಾಡಿದರೆ ಮಾತ್ರ ಹಾಲಿ ಅಧ್ಯಕ್ಷರ ರಾಜೀನಾಮೆಗೆ ಸೂಚಿಸುತ್ತೇನೆ ಎಂದು ಹೇಳುವ ಮೂಲಕ ಕುದುರೆ ವ್ಯಾಪಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

tumakuru zilla panchayat 1

ಹೌದು, ತುಮಕೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ, ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಗೊಂದಲದ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ನಿವಾಸದಲ್ಲಿಂದು ಪಕ್ಷದ ಜಿಲ್ಲಾ ಪಂಚಾಯ್ತಿ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್, ಮಾಜಿ ಶಾಸಕ ಸುಧಾಕರ್ ಲಾಲ್ ಸೇರಿದಂತೆ 14 ಮಂದಿ ಸದಸ್ಯರು ಪಾಲ್ಗೊಂಡಿದ್ರು. ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಎಲ್ಲಾ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದ್ದು ಹಾಲಿ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಅಸಮಾಧಾನ, ಆಕ್ರೋಶ ಹೊರ ಹಾಕಿ ಕೆಳಗಿಳಿಸಬೇಕು, ಬದಲಾಗಿ ಶೆಟ್ಟಿಕೆರೆ ಕ್ಷೇತ್ರದ ಸದಸ್ಯ ಕಲ್ಲೇಶ್‍ರವರನ್ನ ಅಧ್ಯಕ್ಷರನ್ನಾಗಿ ಮಾಡಿ ಎಂದು ಬೇಡಿಕೆ ಇರಿಸಲಾಗಿದೆ. ಇದೇ ವೇಳೆ ಅಮೃತೂರು ಸದಸ್ಯೆ ಮಂಜುಳಾ ಶೇಷಗಿರಿ ನನಗೂ ಉಪಾಧ್ಯಕ್ಷ ಸ್ಥಾನ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಈ ವೇಳೆ ಅಧ್ಯಕ್ಷರನ್ನ ನಾಳೆಯೇ ರಾಜೀನಾಮೆ ಕೊಡಲು ಹೇಳುತ್ತೇನೆ, ಆದರೆ ಎಲ್ಲರನ್ನ ವಿಶ್ವಾಸಕ್ಕೆ ಕೊಂಡೊಯ್ಯುವ ಸದಸ್ಯರು ಬೇಕಲ್ಲವೇ. ಇಬ್ಬರೂ ಅಧ್ಯಕ್ಷ, ಉಪಾಧ್ಯಕ್ಷರಾಗುವುದಾದರೆ ನಾಳೆಯೇ ಅಧ್ಯಕ್ಷರ ರಾಜೀನಾಮೆ ಕೊಡಿಸುತ್ತೇನೆ. ಅದಕ್ಕೂ ಮೊದಲು ಅವಿಶ್ವಾಸ ಗೊತ್ತುವಳಿಗೆ ಸಹಿ ಹಾಕಿದ್ದಾರೆ ಎನ್ನಲಾದ ಕಾಂಗ್ರೆಸ್, ಬಿಜೆಪಿ ಸದಸ್ಯರು ನಿಮ್ಮ ಆಯ್ಕೆಗೆ ಬೆಂಬಲ ನೀಡ್ತಾರಾ ಅನ್ನೋದನ್ನ ಕನ್‍ಫರ್ಮ್ ಮಾಡಬೇಕು, ಅದೇನ್ ಮಾಡ್ತೀರೋ ಮಾಡಿ, ವಿಪ್ ಉಲ್ಲಂಘಿಸಿ ಬರುವವರನ್ನೂ ಕರೆ ತನ್ನಿ, ಅಲ್ಲಿವರೆಗೂ ಅವಿಶ್ವಾಸ ನಿರ್ಣಯ ತರಬಾರದು ಎಂದು ಕಲ್ಲೇಶ್‍ಗೆ ಟಾಸ್ಕ್ ನೀಡಿದ್ದಾರೆ ಎನ್ನಲಾಗ್ತಿದೆ.

tumakuru zilla panchayat 2

ಜೆಡಿಎಸ್ ವರಿಷ್ಠರು ಕಲ್ಲೇಶ್‍ಗೆ ಟಾಸ್ಕ್ ನೀಡಿರೋದು ಇದೀಗ ಅತೃಪ್ತ ಸದಸ್ಯರಲ್ಲೇ ಭಿನ್ನಮತ ಸೃಷ್ಟಿಸಿದೆ. ಜೆಡಿಎಸ್‍ನ ಭಿನ್ನಮತವನ್ನೇ ಲಾಭ ಮಾಡಿಕೊಂಡು ಅಧ್ಯಕ್ಷ ಗಾದಿಗೇರಬಹುದು ಎಂದುಕೊಂಡಿದ್ದ ಕಾಂಗ್ರೆಸ್‍ನ ವೈ.ಸಿ.ಸಿದ್ದರಾಮಣ್ಣ, ಜಿ.ಜೆ.ರಾಜಣ್ಣ ಸೇರಿದಂತೆ ಹಲವರು ಈಗ ಉಲ್ಟಾ ಹೊಡೆಯಲು ಆರಂಭಿಸಿದ್ದಾರೆ ಎನ್ನಲಾಗಿದೆ. ಹಾಲಿ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯದ ಸಹಿ ಸಂಗ್ರಹಕ್ಕೆ ಮುಂದಾಗಿದ್ದ ಕಾಂಗ್ರೆಸ್‍ನ ಹುಳಿಯಾರು ವೈ.ಸಿ.ಸಿದ್ದರಾಮಣ್ಣ, ಸಿದ್ದಾಪುರ ಜಿ.ಜೆ.ರಾಜಣ್ಣ, ಜೆಡಿಎಸ್‍ನ ಪುರವರ ತಿಮ್ಮಣ್ಣ ಸೇರಿದಂತೆ ಕೆಲ ಸದಸ್ಯರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಇದೀಗ ಜೆಡಿಎಸ್‍ನ ಕಲ್ಲೇಶ್‍ಗೆ ಟಾಸ್ಕ್ ನೀಡಿರೋದು ಸಹಜವಾಗಿ ಅತೃಪ್ತರಲ್ಲಿ ಅಸಮಾಧಾನ ಮೂಡಿಸಿದ್ದು ಕಾಂಗ್ರೆಸ್ ಸೇರಿದಂತೆ ಉಭಯ ಪಕ್ಷಗಳ ವಿಶ್ವಾಸಗಳಿಸಲು ಕಲ್ಲೇಶ್ ಹರಸಾಹಸ ಪಡುತ್ತಿದ್ದಾರೆ ಎಂದು ಹೇಳಲಾಗ್ತಿದೆ.

ಇನ್ನು ಜೆಡಿಎಸ್‍ಗೆ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನ ನೀಡಲು ಟಾಸ್ಕ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಜೆಪಿ ಸದಸ್ಯರ ಕಣ್ಣು ಕೆಂಪಾಗಿಸಿದೆ. ಬದಲಾಗಿ ತಮ್ಮದೇ ಸಮುದಾಯದ ಅಧ್ಯಕ್ಷರ ವಿರುದ್ಧ ಸಿಡಿದೆದ್ದಿದ್ದ ವೈ.ಸಿ.ಸಿದ್ದರಾಮಣ್ಣ, ಪುರವರ ತಿಮ್ಮಣ್ಣ, ಚೆನ್ನಮಲ್ಲಪ್ಪ , ಹೊನ್ನವಳ್ಳಿ ನಾರಾಯಣ್, ನೊಣವಿನಕೆರೆ ಮೈಲಾರಪ್ಪ ಲತಾ ರವಿಕುಮಾರ್ ಪರ ನಿಲ್ಲಲು ಕುರುಬ ಸಮಾಜದ ಮುಖಂಡರು ಒತ್ತಡ ಹೇರುತ್ತಿದ್ದಾರೆ, ಯಾಕಂದ್ರೆ ಇನ್ನೊಂದು ವರ್ಷ ಕಳೆದರೆ ಲತಾ ರವಿಕುಮಾರ್ ಐದು ವರ್ಷ ಸಂಪೂರ್ಣ ಅಧಿಕಾರ ಅನುಭವಿಸಿದ ಏಕೈಕ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಹೀಗಾಗಿ ಕ್ಯಾಸ್ಟ್ ಕಾರ್ಡ್ ಕೂಡ ಇಲ್ಲಿ ಪ್ಲೇ ಆಗುತ್ತಿದೆ.

tumakuru zilla panchayat 3

ಮೂಲಗಳ ಪ್ರಕಾರ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಲತಾ ರವಿಕುಮಾರ್ ಬೆನ್ನಿಗೆ ನಿಂತಿದ್ದು ಬದಲಾವಣೆ ಮಾಡದಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ. ಹೀಗಾಗಿಯೇ ತಮ್ಮ ಮೂಲಗಳಿಂದ ತರಿಸಿಕೊಂಡ ವರದಿ ಪಡೆದ ಕುಮಾರಸ್ವಾಮಿ ಅತೃಪ್ತರ ನಡುವೆಯೇ ಭಿನ್ನಮತ ಸೃಷ್ಠಿಸುವ ಮೂಲಕ ಹಾಲಿ ಅಧ್ಯಕ್ಷರನ್ನ ಮುಂದುವರೆಸಲು ಜಾಣ ನಡೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಕಾಂಗ್ರೆಸ್‍ನಲ್ಲಿ ಪರಮೇಶ್ವರ್ ಮತ್ತು ಕೆ.ಎನ್.ರಾಜಣ್ಣ ಬೆಂಬಲಿಗ ಸದಸ್ಯರ ನಡುವೆಯೇ ಕೋಲ್ಡ್ ವಾರ್ ನಡೆಯುತ್ತಿದ್ದು, ಪರಂ ಬೆಂಬಲಿಗ ಸದಸ್ಯರು ಮಾತ್ರ ಅವಿಶ್ವಾಸ ನಿರ್ಣಯಕ್ಕೆ ಸಹಿ ಮಾಡಿದ್ದಾರೆ. ಬಿಜೆಪಿಯಲ್ಲೂ ಅಧ್ಯಕ್ಷರನ್ನ ಬದಲಾವಣೆ ಮಾಡಿದರೆ ಉಪಾಧ್ಯಕ್ಷರನ್ನೂ ಬದಲಾವಣೆ ಮಾಡಬೇಕಾಗುತ್ತೆ ಎನ್ನುವ ಕಾರಣಕ್ಕೆ ಜೆಡಿಎಸ್ ಜೊತೆಗಿನ ಮೈತ್ರಿ ಮುಂದುವರೆಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಅತೃಪ್ತ ಆಟ ಅಂತ್ಯವಾಗುತ್ತಾ ಅಥವ ಕುದುರೆ ವ್ಯಾಪಾರದ ಮೂಲಕ ಸಕ್ಸಸ್ ಆಗುತ್ತಾ ಅನ್ನೋದೆ ಕುತೂಹಲ.

TAGGED:jdsPublic TVtumkurzilla panchayatಜಿಲ್ಲಾ ಪಂಚಾಯ್ತಿಜೆಡಿಎಸ್ತುಮಕೂರುಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
9 minutes ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
10 minutes ago
Flights
Latest

ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ

Public TV
By Public TV
23 minutes ago
Indian Origin Men Fined Rs 1.7 Lakh Each In for Spitting Paan On Streets
Latest

ಲಂಡನ್‌ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ

Public TV
By Public TV
31 minutes ago
Pralhad Joshi 1
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Public TV
By Public TV
1 hour ago
Droupadi Murmu Ram Temple
Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?