ತುಮಕೂರು: ಒಂದು ರೂಪಾಯಿ ಚಿಲ್ಲರೆಗಾಗಿ ಬಸ್ ಕಂಡಕ್ಟರ್ ಪ್ರಯಾಣಿಕನ ತಲೆ ಒಡೆದಿದ್ದಾನೆ. ಬೆಂಗಳೂರು-ಕೊರಟಗೆರೆ ಹೆದ್ದಾರಿಯ ಚಿಕ್ಕಪಾಲನಹಳ್ಳಿ ಬಳಿ ಈ ಘಟನೆ ನಡೆದಿದೆ.
ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕ ಕಂಬಯ್ಯ ಎಂಬವರಿಗೆ ಬಸ್ ಕಂಡಕ್ಟರ್ ಟಿಕೆಟ್ ಕೊಡುವ ಮೆಷಿನ್ಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಹಲ್ಲೆಯ ತೀವ್ರತೆಗೆ ಪ್ರಯಾಣಿಕ ತಲೆ ಒಡೆದು ರಕ್ತ ಬಂದಿದೆ.
ಪಾವಗಡದಿಂದ ಬರುತ್ತಿದ್ದ ಬಸ್ಗೆ ನಾಗೇನಹಳ್ಳಿ ನಿಲ್ದಾಣದಲ್ಲಿ ಹತ್ತಿದ್ದ ಕಂಬಯ್ಯ ಮಾಕಳಿಗೆ ಟಿಕೆಟ್ ಪಡೆಯಲು ಹಣ ನೀಡಿದ್ದಾರೆ. ಈ ವೇಳೆ ಒಂದು ರೂಪಾಯಿ ಚಿಲ್ಲರೆ ಕಡಿಮೆ ಇದೇ ಎಂಬ ವಿಚಾರಕ್ಕೆ ಕಂಡಕ್ಟರ್ ಮತ್ತು ಕಂಬ್ಬಯ್ಯನ ನಡುವೆ ಜಗಳವಾಗಿದೆ. ಈ ಕಾರಣಕ್ಕೆ ಕೋಪಗೊಂಡ ಕಂಡಕ್ಟರ್ ಟಿಕೆಟ್ ಮೆಷಿನ್ ನಿಂದ ಕಂಬಯ್ಯನ ತಲೆ ಭಾಗಕ್ಕೆ ತೀವ್ರವಾಗಿ ಹಲ್ಲೆ ಮಾಡಿದ್ದಾನೆ. ಪರಿಣಾಮ ಕಂಬ್ಬಯ್ಯನ ತಲೆ ಒಡೆದು ಹೋಗಿ ಬಟ್ಟೆಯೆಲ್ಲಾ ರಕ್ತಸಿಕ್ತವಾಗಿದೆ.
KSRTC apologize for the sad incident that occurred. The said conductor suspended from duty.
— KSRTC (@KSRTC_Journeys) December 3, 2019
ಒಂದು ರೂ. ಚಿಲ್ಲರೆಗಾಗಿ ಪ್ರಯಾಣಿಕ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಬಸ್ ಕಂಡಕ್ಟರ್ ಮೇಲೆ ಸಾರ್ವಜನಿಕರು ಮತ್ತು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಕಂಬ್ಬಯ್ಯನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ