ತುಮಕೂರು: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ನಿರಿಕ್ಷೀತ ಸಾಧನೆ ಮಾಡದ ಹಿನ್ನೆಲೆಯಲ್ಲಿ ಕಾರ್ಯಕರ್ತರ ಎದುರು ಮಾಜಿ ಸಚಿವ ಹಾಗೂ ಜಿಲ್ಲಾಧ್ಯಕ್ಷ ಸಿ ಚನ್ನಿಗಪ್ಪ ಗಳಗಳನೇ ಕಣ್ಣೀರಿಟ್ಟಿದ್ದಾರೆ.
ಇಂದು ನಗರದಲ್ಲಿ ನೂತನ ಶಾಸಕ, ಸಚಿವರಿಗಾಗಿ ಏರ್ಪಡಿಸಿದ್ದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ತುಮಕೂರು ಜೆಡಿಎಸ್ ಭದ್ರಕೋಟೆಯಾಗಿತ್ತು, ಜಿಲ್ಲೆಯಲ್ಲಿರುವ 11 ಸ್ಥಾನದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇತ್ತು. ಆದರೆ ಕೇವಲ 4 ಸ್ಥಾನ ಮಾತ್ರ ಗೆಲ್ಲುವಂತಾಯಿತು ಎಂದು ಕಾರ್ಯಕರ್ತರ ಎದುರು ಕಳಪೆ ಸಾಧನೆಗೆ ಆತ್ಮಾವಲೋಕನ ಮಾಡಿಕೊಡು ಕಣ್ಣೀರಿಟ್ಟರು.
ಇದೇ ವೇಳೆ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಲ್ಲೂ ಅನ್ಯಾಯ ಆಗಿದೆ ಎಂದು ಆರೋಪಿಸಿರುವ ಅವರು, ನಾಯಕರಿಗೆ ಎರಡು ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೆ. ಮೊದಲ ಆದ್ಯತೆ ಶಿರಾ ಶಾಸಕ ಬಿ.ಸತ್ಯನಾರಾಯಣ ಗೆ ನೀಡಿದ್ದೇವು. ಆದರೆ ಅವವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ನೋವಾಗಿದೆ ಎಂದರು. ಅಲ್ಲದೇ ತಮ್ಮ ಭಾಷಣ ವೇಳೆ ಕೊರಟಗೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಸುಧಾಕರ್ ಲಾಲ್ ಅವರ ಸೋಲನ್ನ ಪ್ರಸ್ತಾಪಿಸಿದ ಅವರು, ಸುಧಾಕರ ಲಾಲ್ ಸೋಲಬಾರದಿತ್ತು. ಅವರು ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡಿದ್ದರು ಎಂದು ಬೇಸರ ವ್ಯಕ್ತಪಡಿಸಿದರು.
ಕೊರಟಗೆರೆ ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಚನ್ನಿಗಪ್ಪ ಅವರೇ ಕಾರಣ ಎಂಬ ಆರೋಪವಿದ್ದು, ಅಂದು ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿಸಿಎಂ ಜಿ ಪರಮೇಶ್ವರ್ ಅವರೊಂದಿಗೆ ಸೇರಿ ಸುಧಾಕರ್ ಲಾಲ್ ರನ್ನು ಸೋಲಿಸಿದ್ದಾರೆ ಎಂಬ ಆರೋಪ ಅಂದು ಕೇಳಿ ಬಂದಿತ್ತು.