ನಿಖಿಲ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ: ಶಾಸಕ ಗೌರಿಶಂಕರ್

1 Min Read

ತುಮಕೂರು: ಹೆಚ್ ಡಿ ಕುಮಾರಸ್ವಾಮಿ ಎವರ್ ಗ್ರೀನ್ ಮುಖ್ಯಮಂತ್ರಿ ಆದರೆ ನಿಖಿಲ್ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಅಭಿಪ್ರಾಯಪಟ್ಟಿದ್ದಾರೆ.

ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ಕನ್ನಡ ಸಂಘಟನೆಯವರು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರಿಶಂಕರ್ ಈ ಹೇಳಿಕೆ ನೀಡಿದ್ದಾರೆ. ಇಂದಿನ ರಾಜಕೀಯ ಪರಿಸ್ಥಿತಿಗಳನ್ನು ಗಮನಿಸಿದಾಗ ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ಮುಂದಿನ ಮುಖ್ಯಮಂತ್ರಿ ನಿಖಿಲ್ ಕುಮಾರಸ್ವಾಮಿ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನು ಓದಿ: ‘ಅಭಿಮನ್ಯು’ವಿಗೆ ಹಿಂದಿನಿಂದ ತಿವಿದರು – ಮಂಡ್ಯದಲ್ಲಿ ಸೋತ ಕಥೆಯನ್ನು ವಿವರಿಸಿದ ನಿಖಿಲ್

ಕುಮಾರಸ್ವಾಮಿ ಯಾವತ್ತೂ ಮುಖ್ಯಮಂತ್ರಿ ಆಗಿರುತ್ತಾರೆ. ಆದರೆ ನಿಖಿಲ್ ಮುಂದಿನ ಮುಖ್ಯಮಂತ್ರಿ ಅಂದರು. ಟೀ ಮಾರಿದವರು ಈ ದೇಶದ ಪ್ರಧಾನಿಯಾಗಬೇಕಾದರೆ ಸಾವಿರಾರು ರೈತರ ಸಾಲ ಮನ್ನಾ ಮಾಡಿದ ಕುಮಾರಣ್ಣನ ಏಕಚಕ್ರಾಧಿಪತಿ ಮಾಡಲು ಸಾಧ್ಯ ಇಲ್ವಾ ಎಂದು ಅವರು ಪ್ರಶ್ನಿಸಿದ್ದಾರೆ. ಕುಮಾರಣ್ಣನ ಒಳ್ಳೆತನ ಕರ್ನಾಟಕ ರಾಜ್ಯದಲ್ಲಿ ಒಂದು ದಿನ ಗೆದ್ದೆ ಗೆಲ್ಲುತ್ತದೆ ಎಂದು ಗೌರಿಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *