ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಗುತ್ತಿದೆ ಕಲ್ಪತರು ನಾಡು

Public TV
1 Min Read
pm modi 3

ತುಮಕೂರು: ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ಎರಡನೇ ಹಂತದ ಹಣ ಬಿಡುಗಡೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತುಮಕೂರು ನಗರಕ್ಕೆ ಆಗಮಿಸುತಿದ್ದಾರೆ. ಹಾಗಾಗಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ನಗರ ಸಜ್ಜಾಗುತ್ತಿದೆ.

ಪ್ರಧಾನಿ ಮೋದಿ ಅವರು ತುಮಕೂರು ವಿಶ್ವವಿದ್ಯಾನಿಲಯ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ತಾತ್ಕಾಲಿಕ ಹೆಲಿಪ್ಯಾಡ್‍ನಲ್ಲಿ ಜನವರಿ 2ರಂದು ಮಧ್ಯಾಹ್ನ 2:10ಕ್ಕೆ ಬಂದಿಳಿಯಲಿದ್ದಾರೆ. ಅಲ್ಲಿಂದ ಬಿ.ಎಚ್.ರಸ್ತೆ ಮೂಲಕ ಕಾರಿನಲ್ಲಿ 4ಕಿಮೀ ದೂರದ ಸಿದ್ಧಗಂಗಾ ಮಠಕ್ಕೆ ತೆರಳಲಿದ್ದಾರೆ. ಬಳಿಕ ಶಿವೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ಪೂಜೆ, ಗಿಡ ನೆಡುವ ಕಾರ್ಯಕ್ರಮ ಹಾಗೂ ಮಠದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

TMK A

ಪ್ರಧಾನಿ ಮೋದಿ ಅವರು ಸಿದ್ಧಗಂಗಾ ಮಠದಲ್ಲಿ ಕಾರ್ಯಕ್ರಮ ಮುಗಿಸಿ ಅಲ್ಲಿಂದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕೃಷಿ ಸಮ್ಮಾನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ಸುಮಾರು 60 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ವಿವಿಧ ರಾಜ್ಯಗಳ 21 ಪ್ರಗತಿಪರ ರೈತರಿಗೆ ವೇದಿಕೆ ಮೇಲೆ ಸನ್ಮಾನ ನಡೆಯಲಿದೆ. ಕಾರ್ಯಕ್ರಮ ಮುಗಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 2ರ ಸಂಜೆ 5 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹೊರಡಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *