ತುಮಕೂರು: ಇಂದು ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 113ನೇ ಹುಟ್ಟುಹಬ್ಬವಾಗಿದ್ದು, ಮಠದ ಆಡಳಿತ ಮಂಡಳಿ ಜಯಂತಿ ಆಚರಣೆ ರದ್ದು ಮಾಡಿದ್ದಾರೆ.
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಹಿನ್ನೆಲೆಯಲ್ಲಿ ರದ್ದು ಮಾಡಿದ್ದಾರೆ. ಪ್ರತಿವರ್ಷ ಏಪ್ರಿಲ್ 1 ರಂದು ಶ್ರೀಗಳ ಜನ್ಮ ದಿನವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತಿತ್ತು.
ಎಂದಿನಂತೆ ಶ್ರೀಗಳ ಗದ್ದುಗೆಗೆ ರುದ್ರಾಭಿಷೇಕ ಹಾಗೂ ಪೂಜೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ ಮಠದ ವಿದ್ಯಾರ್ಥಿಗಳಿಗೆ ಸಿಹಿ ಊಟ ವಿತರಿಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಕಾಯಕ ಯೋಗಿ, ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹದ ಮೂಲಕ ಬದುಕು ಕೊಟ್ಟ ಮಹಾ ಪುರುಷ
ಸಿದ್ದಗಂಗೆಯ ಸಿದ್ಧಿಪುರುಷ, ಲಿಂಗೈಕ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರ ಚರಣಗಳಿಗೆ ಕೋಟಿ ನಮನಗಳು. pic.twitter.com/0hrzcqAN9x
— B.S.Yediyurappa (@BSYBJP) April 1, 2020