Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್

Cinema

ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್

Public TV
Last updated: September 20, 2025 7:16 pm
Public TV
Share
2 Min Read
Vijay
SHARE

– ಈಳಂ ತಮಿಳಿಗರ ಪರ ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದು ಕರೆ

ಚೆನ್ನೈ: ಶ್ರೀಲಂಕಾದ ತಮಿಳರ ಸಮಸ್ಯೆ ಬಗ್ಗೆ ಮಾತನಾಡುವ ವೇಳೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ವಿಜಯ್‌ ವಿವಾದಿತ ಹೇಳಿಕೆಯೊಂದನ್ನ ನೀಡಿದ್ದಾರೆ. ಮಾತನಾಡುವ ವೇಳೆ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ (Rajiv Gandhi) ಹತ್ಯೆಯ ಹಿಂದಿನ ಸೂತ್ರಧಾರಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (LTTE) ವೇಲುಪಿಳ್ಳೈ ಪ್ರಭಾಕರನ್‌ನನ್ನು (Velupillai Prabhakaran) ಹೊಗಳಿದ್ದಾರೆ.

2026ರ ವಿಧಾನಸಭಾ ಚುನಾವಣೆಗಾಗಿ ವಿಜಯ್‌ (Thalapathy Vijay) ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ. ಇದರ ಭಾಗವಾಗಿ ತಮಿಳುನಾಡಿನ ನಾಗಪಟ್ಟಣಂನಲ್ಲಿ ನಡೆದ ಸಮಾವೇಶದಲ್ಲಿ ಶ್ರೀಲಂಕಾದ ತಮಿಳರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ವೇಲುಪಿಳ್ಳೈ ಪ್ರಭಾಕರನ್‌ ʻಈಳಂʼ ತಮಿಳರ ಸಮುದಾಯಕ್ಕೆ ತಾಯಿಯಂತೆ. ಹಾಗಾಗಿ ಲಂಕಾ ತಮಿಳರ ಸಮಸ್ಯೆ ತಮಿಳುನಾಡಿನಲ್ಲಿ ಅದ್ರಲ್ಲೂ ನಾಗಪಟ್ಟಣಂನಂತಹ ಪ್ರದೇಶಗಳ ಮೀನುಗಾರರಲ್ಲಿ ಭಾವನಾತ್ಮಕವಾಗಿದೆ ಎಂದಿದ್ದಾರೆ. ʻಈಳಂʼ ಎನ್ನುವುದು ಶ್ರೀಲಂಕಾದ ಆ ಪ್ರದೇಶವನ್ನು ಸೂಚಿಸುವ ಹೆಸರು.

Velupillai Prabhakaran

ಅಲ್ಲದೇ, ಶ್ರೀಲಂಕಾ ಹಾಗೂ ವಿಶ್ವದ ವಿವಿಧೆಡೆ ಇರುವ ನಮ್ಮ ಈಳಂ ತಮಿಳರು ಇಂದು ಮಾತೃ ವಾತ್ಸಲ್ಯ ತೋರಿಸಿದ ನಾಯಕನನ್ನ ಕಳೆದುಕೊಂಡು ಬಳಲುತ್ತಿದ್ದಾರೆ. ಅವರಿಗಾಗಿ ನಾವಿಂದು ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದು ಕರೆ ನೀಡಿದ್ದಾರೆ.

1990ರ ದಶಕದಿಂದ ಭಾರತದಲ್ಲಿ ನಿಷೇಧಿಸಲ್ಪಟ್ಟ ಎಲ್‌ಟಿಟಿಇ ಶ್ರೀಲಂಕಾದ ಉತ್ತರ ಮತ್ತು ಪೂರ್ವ ಪ್ರಾಂತ್ಯಗಳಲ್ಲಿ ಆಳ್ವಿಕೆ ನಡೆಸುತ್ತಿದ್ದ ಸಶಸ್ತ್ರ ಪಡೆಯಾಗಿತ್ತು. ಆದ್ರೆ 2009ರಲ್ಲಿ ಶ್ರೀಲಂಕಾ ವಿರುದ್ಧ ಸೋಲು ಅನುಭವಿಸುವವರೆಗೂ ಅದು ದಶಕಗಳ ಕಾಲ ಸ್ವತಂತ್ರ ತಮಿಳು ರಾಜ್ಯ ಸ್ಥಾಪಿಸಲು ಹೋರಾಡಿತ್ತು. ಅದೇ ವರ್ಷ ವೇಲುಪಿಳ್ಳೈ ಪ್ರಭಾಕರನ್‌ ರನ್ನ ಶ್ರೀಲಂಕಾ ಸೇನೆ ಕೊಂದಿತು.

ರಾಜೀವ್‌ ಗಾಂಧಿ ಹತ್ಯೆ ಹಿಂದಿನ ಮಾಸ್ಟರ್‌?
1991 ರಲ್ಲಿ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ಹಿಂದೆ ಎಲ್‌ಟಿಟಿಇ ಇದೆ ಎಂದು ಆರೋಪಿಸಲಾಗಿದೆ. 1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಆಯೋಜಿಸಿದ್ದ ಬಹಿರಂಗ ಸಮಾವೇಶದಲ್ಲಿ ಎಲ್‌ಟಿಟಿಇ ಮಹಿಳಾ ಆತ್ಮಾಹುತಿ ಬಾಂಬರ್ ರಾಜೀವ್ ಗಾಂಧಿಯನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರಭಾಕರನ್‌ ಆದೇಶಿಸಿದ್ದಾರೆ ಎಂದು ಹೇಳಲಾಗಿತ್ತು. ಇನ್ನು, 2011ರ ಸಂದರ್ಶನವೊಂದರಲ್ಲಿ, ಎಲ್‌ಟಿಟಿಇಯ ಖಜಾಂಚಿ ಮತ್ತು ಅದರ ಮುಖ್ಯ ಶಸ್ತ್ರಾಸ್ತ್ರ ಸಂಪಾದನೆದಾರರಾಗಿದ್ದ ಕುಮಾರನ್ ಪತ್ಮನಾಥನ್ ಅವರು ರಾಜೀವ್ ಗಾಂಧಿಯನ್ನು ಹತ್ಯೆಗೈದ ವೇಲುಪಿಳ್ಳೈ ಪ್ರಭಾಕರನ್ ಅವರ ತಪ್ಪಿಗೆ ಭಾರತದ ಕ್ಷಮೆಯಾಚಿಸಿದ್ದರು.

Rajiv Gandhi

2009ರಲ್ಲಿಯೇ ಪ್ರಭಾಕರನ್‌ ಹತ್ಯೆ; ಶ್ರೀಲಂಕಾ
ಶ್ರೀಲಂಕಾ ಸರ್ಕಾರ ಮೇ 2009ರಲ್ಲಿಯೇ ಪ್ರಭಾಕರನ್ ಅವರನ್ನು ಹತ್ಯೆ ಮಾಡಿದ್ದೇವೆ ಎಂದು ಹೇಳಿಕೊಂಡಿತ್ತು. ಅದಲ್ಲದೇ ಪ್ರಭಾಕರನ್‌ ಹಾಗೂ ಅವರ ಮಗನ ಡಿಎನ್‌ಎ ಹೊಂದಾಣಿಕೆಯಾಗಿತ್ತು ಎಂದು ಶ್ರೀಲಂಕಾ ಸೇನೆ ಹೇಳಿಕೆ ನೀಡಿತ್ತು. ಮುಲ್ಲೈತೀವು ಪ್ರದೇಶದ ನಾಂತಿಕಡಲ್ ತೀರದಲ್ಲಿ ಎಲ್‌ಟಿಟಿಇ ಮುಖ್ಯಸ್ಥನ ಶವ ಪತ್ತೆಯಾಗಿತ್ತು ಎಂದು ವರದಿಗಳು ಹೇಳಿದ್ದವು. ಎಲ್‌ಟಿಟಿಇ ಮುಖ್ಯಸ್ಥ ಪ್ರಭಾಕರನ್‌ ದೇಹವನ್ನು ಆತನ ಇಬ್ಬರು ಮಾಜಿ ಸಹಚರರು ಗುರುತಿಸಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು.

ಆದ್ರೆ ಎಲ್‌ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್‌ ಇನ್ನೂ 2023ರಲ್ಲಿ ಆತ ಜೀವಂತವಾಗಿದ್ದು, ಅವರ ಕುಟುಂಬದ ಜೊತೆ ಜೀವಿಸುತ್ತಿದ್ದಾನೆ ಎಂದು ಕಾಂಗ್ರೆಸ್‌ನ ಮಾಜಿ ನಾಯಕ ಪಜಾ ನೆಡುಮಾರನ್‌ ಹೇಳಿದ್ದರು. ಆದ್ರೆ ಆತ ಜೀವಂತವಾಗಿರುವ ಸುಳಿವು ಎಲ್ಲಿಯೂ ಸಿಕ್ಕಿರಲಿಲ್ಲ.

ಇನ್ನೂ ವಿಜಯ್‌ ಲಂಕಾದ ತಮಿಳರಿಗೆ ಬೆಂಬಲ ನೀಡುತ್ತಿರುವುದು ಇದೇ ಮೊದಲೇನಲ್ಲ. 2008ರಲ್ಲೂ ಸಮುದಾಯದ ಸದಸ್ಯರನ್ನ ಹತ್ಯೆ ಖಂಡಿಸಿ ಚೆನ್ನೈನಲ್ಲಿ ನಡೆದ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

TAGGED:Eelam TamilsRajiv Gandhitamil naduThalapathy Vijaytvkಎಲ್‍ಟಿಟಿಇಟಿವಿಕೆತಮಿಳುನಾಡುದಳಪತಿ ವಿಜಯ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

UP Man Kills Twin Daughters In kanpur
Crime

ಉತ್ತರ ಪ್ರದೇಶದಲ್ಲಿ ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
26 seconds ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
19 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
24 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
51 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
2 hours ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?