ದಾವಣಗೆರೆ: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಸಚಿವ ಆಂಜನೇಯ ಘಟನೆಗೆ ಇದೀಗ ಟ್ವಿಸ್ಟ್ ದೊರೆತಿದೆ.
ಹೌದು. ತಮ್ಮ ಕ್ಷೇತ್ರದ ಮತದಾರರ ಸಿಟ್ಟಿನಿಂದ ತಪ್ಪಿಸಿಕೊಳ್ಳಲು ಸಚಿವರು ಹೀಗೆ ಮಾಡಿದ್ದಾರೆ ಅನ್ನೋ ಮಾತುಗಳು ಇದೀಗ ಕೇಳಿಬರುತ್ತಿದೆ. ಸಚಿವರು ಶನಿವಾರ ಹೊಳಲ್ಕೆರೆಯಲ್ಲಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಭರಮಸಾಗರ ಹೋಬಳಿ ವ್ಯಾಪ್ತಿಯ ಇಸಾಮುದ್ರ, ಅರಬಗಟ್ಟ, ಹೆಗ್ಗೆರೆಯಲ್ಲಿ ಜನ ತಮ್ಮ ಸಿಟ್ಟು ಹೊರಹಾಕಿದ್ದರು.
ಗೆದ್ದು ಸಚಿವರಾಗಿ ಹೋದ್ಮೆಲೆ ಈಗ ಬಂದಿದ್ದೀರಿ ಮತ ಕೇಳೋಕೆ?. ನಿಮಗೇಕೆ ಮತ ಹಾಕಬೇಕು?. ಅರಬಗಟ್ಟಿಯಲ್ಲಿ ಸದಾಶಿವ ಆಯೋಗದ ವರದಿ ಯಾಕ್ ಜಾರಿ ಮಾಡಿಲ್ಲ ಅಂತ ಪ್ರಶ್ನಿಸಿದ್ದರು. ಸದಾಶಿವ ಆಯೋಗದ ವರದಿ ವಿಚಾರದಲ್ಲಿ ಸ್ಪಷ್ಟ ನಿಲುವು ತೋರುತ್ತಿಲ್ಲ ಅಂತ ತರಾಟೆಗೆ ತೆಗೆದುಕೊಂಡ್ರು. ಈ ವೇಳೆ ವಾಗ್ವಾದ ನಡೆದಿದ್ದು, ಪರಿಣಾಮ ಸಚಿವರಿಗೆ ಎದೆನೋವು ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದುಬಿದ್ದಿದ್ದರು.
ತಕ್ಷಣವೇ ಅವ್ರನ್ನು ಇಸಾಮುದ್ರದ ಕಾಂಗ್ರೆಸ್ ಮುಖಂಡನ ಮನೆಗೆ ಕರೆದುಕೊಂಡು ಹೋಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತ್ರ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.