Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಡಿಚ್ಚಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಡಿಚ್ಚಿ

Bengaluru City

ಮತ್ತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಡಿಚ್ಚಿ

Public TV
Last updated: February 7, 2018 8:13 pm
Public TV
Share
4 Min Read
MODI CM
SHARE

ಬೆಂಗಳೂರು: ಲೋಕಸಭೆಯಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೆ ಟ್ವಿಟ್ಟರ್ ನಲ್ಲಿ ಟಾಂಗ್ ಕೊಟ್ಟಿದ್ದಾರೆ.

ಪ್ರಧಾನಿ ಮೋದಿಯವರೇ, ನನ್ನನ್ನು ಸಂಸತ್ತಿನಲ್ಲಿ ನೆನಪಿಸಿಕೊಂಡಿರುವುದು ಒಳ್ಳೆಯ ಬೆಳವಣಿಗೆ. ಹಾಗೆಯೇ ಬಸವಣ್ಣನವರನ್ನು ನೆನಪಿಸಿಕೊಂಡಿದ್ದಕ್ಕೆ ನನಗೆ ಸಂತಸ ತಂದಿದೆ. ಬಸವಣ್ಣ ಹೇಳಿದಂತೆ ಉಳ್ಳವರು ಶಿವಾಲಯ ಮಾಡುವರಯ್ಯ ನಾನೇನು ಮಾಡಲಿ ಬಡವನಯ್ಯ ಬಸವಣ್ಣನ ವಚನಗಳನ್ನು ತಾವು ಪಾಲಿಸಿದರೆ ಕನ್ನಡಿಗರು ನಿಮಗೆ ಕೃತಜ್ಞರಾಗಿರುತ್ತಾರೆ ಎಂದು ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ.

ಪ್ರಧಾನಿ ಮೋದಿಯವರು ಕಲಬುರಗಿ ಬೀದರ್ ರೈಲ್ವೇ ಯೋಜನೆ ಬಿಜೆಪಿ ಸರ್ಕಾರದಿಂದ ಪೂರ್ಣಗೊಂಡಿದೆ ಎನ್ನುವ ಹೇಳಿಕೆಗೆ ಸಿಎಂ, ಇಡೀ ದೇಶದಲ್ಲಿ 50:50 ಅನುದಾನ ಹಂಚಿಕೆಯ ಮೂಲಕ ರೈಲ್ವೇ ಅಭಿವೃದ್ಧಿ ಯೋಜನೆ ಆರಂಭಿಸಿದ ಮೊದಲ ರಾಜ್ಯ ಕರ್ನಾಟಕ. ಬೀದರ್ ಕಲಬುರಗಿ ಹಳಿ ಕಾಮಗಾರಿ 1,542 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿದ್ದು, ಈ ಯೋಜನೆಗೆ 2007ರಿಂದ ಕರ್ನಾಟಕ ಸರ್ಕಾರ 691 ಕೋಟಿ ರೂ. ಅನುದಾನ ನೀಡಿದೆ. ಅದರಲ್ಲಿ ಶೇ.70ರಷ್ಟು ಹಣ(488 ಕೋಟಿ ರೂ.) ಹಣವನ್ನು 2013ಕ್ಕೆ ನಮ್ಮ ಸರ್ಕಾರ ಬಂದ ನಂತರ ಬಿಡುಗಡೆ ಮಾಡಲಾಗಿದೆ ಎಂದು  #JustFacts  ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ ತಿರುಗೇಟು ಕೊಟ್ಟಿದ್ದಾರೆ.

PM @narendramodi ರವರೆ
It was good of you to have remembered me in the Parliament today. I am glad you also remembered Basavanna.

Basava said “those with wealth will build temples; what do I do a poor man?”

Kannadigas will thank you sir if you could follow Basavanna’s teachings.

— Siddaramaiah (@siddaramaiah) February 7, 2018

ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯವನ್ನು ನಿರ್ಧರಿಸುವವರು ಜನತೆಯೇ ಹೊರತು ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಲ್ಲ. ಮೋದಿ ಅಥವಾ ಅಮಿತ್ ಶಾ ಅವರು ಹೇಳಿದಾಕ್ಷಣ ಕಾಂಗ್ರೆಸ್ ಭವಿಷ್ಯ ನಿರ್ಧಾರವಾಗುವುದಿಲ್ಲ. 2019ಕ್ಕೆ ಇವರು ಎಲ್ಲಿರುತ್ತಾರೆ ಅನ್ನೋದನ್ನ ಮೊದಲು ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.

Karnataka was the 1st State to develop railways thro’ 50:50 cost sharing. The Bidar-Kalburgi line was developed at a cost of Rs 1542 cr. Karnataka Govt has released Rs 691 crores for this project since 2007. 70% of this (Rs 488 cr) was released by our Govt since 2013 #JustFacts https://t.co/5Uvjvs8Gl5

— Siddaramaiah (@siddaramaiah) February 7, 2018

ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬುದು ಬಿಜೆಪಿಯವರ ಭ್ರಮೆಯಷ್ಟೇ. ರಾಜಕೀಯ ಮಾಡುವುದಕ್ಕೆ ಬೇರೆ ಬೇರೆ ವೇದಿಕೆಗಳಿವೆ ಎಂಬುದನ್ನು ಬಿಜೆಪಿಯವರು ತಿಳಿದುಕೊಳ್ಳಬೇಕು. ಬೆಂಗಳೂರಿಗೆ ಪ್ರಧಾನಿಯವರು ಬಂದಾಗ ಬರ ಮಾಡಿಕೊಳ್ಳಲಿಲ್ಲ ಎನ್ನುತ್ತಾರೆ. ಅವರು ಬಂದಿದ್ದು ಪಕ್ಷದ ಕಾರ್ಯಕ್ರಮಕ್ಕೆ. ಈ ಹಿಂದೆ ಹಲವು ಬಾರಿ ಪ್ರಧಾನಿಯವರು ಬೆಂಗಳೂರಿಗೆ ಬಂದಾಗ ನಾನು ಬರಮಾಡಿಕೊಂಡಿರಲಿಲ್ಲವೇ ಎಂದು ಪ್ರಶ್ನಿಸಿ ಬಿಜೆಪಿ ನಾಯಕರ ಟೀಕೆಗೆ ಉತ್ತರಿಸಿದರು.

pm modi in lok sabha 3

ಮೋದಿ ಹೇಳಿದ್ದು ಏನು?
ಸಿಎಂ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಕರ್ನಾಟಕದಲ್ಲಿ ಅಶಾಂತಿ ಮೂಡಲು ಕಾರಣವಾಗಿದೆ. ಕಾಂಗ್ರೆಸ್ ಮೂಲವೇ ವಿಭಜನೆ. ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಪ್ರಯಾಸ ಪಡುತ್ತಿದ್ದಾರೆ ಅಂತಾ ಸರ್ಕಾರದ ಕಾರ್ಯವೈಖರಿ ವಿರುದ್ಧ ಟೀಕೆಗಳ ಸುರಿಮಳೆಗೈದರು.

ಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷ ಅಂದು ದೇಶ ವಿಭಜನೆ ಮಾಡಿದ್ದು, ಅದರ ನೋವು 70 ವರ್ಷವಾದರೂ ದೇಶದ ಜನರು ಅನುಭವಿಸುತ್ತಿದ್ದಾರೆ. ಅಂದು ದೇಶದ ಮೊದಲ ಪ್ರಧಾನಿ ಸರ್ದಾರ್ ವಲ್ಲಭಭಾಯ್ ಪಟೇಲ್ ಆಗಿದ್ದರೆ ನಮ್ಮ ಪೂರ್ಣ ಕಾಶ್ಮೀರ ನಮಲ್ಲಿಯೇ ಇರುತ್ತಿತ್ತು. ಕಾಂಗ್ರೆಸ್ ಸರ್ಕಾರದಿಂದ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರಿಗೆ ಅನ್ಯಾಯವಾಗಿದೆ. ನಿನ್ನೆ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಶತ್ರುತ್ವ ಆ ಮಟ್ಟಿಗೆ ಮಾಡಿ, ಅದು ಎಂದಾದರೂ ಒಂದು ದಿನ ಸ್ನೇಹಕ್ಕೆ ತಿರುಗಬೇಕು ಎಂದು ಬಶೀರ್ ಭದ್ರಿ ಅವರ ಕವಿತೆ ಓದಿದ್ದರು. ಈ ಸಾಲುಗಳನ್ನು ಖರ್ಗೆ ತಮ್ಮದೇ ಸರ್ಕಾರವಿರುವ ಮುಖ್ಯಮಂತ್ರಿಗಳಿಗೆ ಹೇಳಿದಂತಿದೆ. ಈ ಶಾಯರಿಯನ್ನು ಕರ್ನಾಟಕದ ಸಿಎಂ ಕೇಳಲೇ ಬೇಕು. ಈ ಶಾಯರಿಯನ್ನು ಖರ್ಗೆಯವರು ಓದಿದ ಸ್ವಲ್ಪ ಹಿಂದಿನಿಂದ ಓದಬೇಕಿತ್ತು ಎಂದು ಹೇಳಿ ಟಾಂಗ್ ಕೊಟ್ಟರು.

ಸಿಎಂ ಸಿದ್ದರಾಮಯ್ಯ ಅವರು ಶಾಂತಿಯ ಸಂದೇಶ ಸಾರುವ ಬದಲು ಶತ್ರುತ್ವದ ಸಂದೇಶ ಸಾರುತ್ತಿದ್ದಾರೆ. ಮುಂದಿನ ಕರ್ನಾಟಕ ಚುನಾವಣೆ ಬಳಿಕ ನೀವು ಲೋಕಸಭೆಯಲ್ಲಿ ಇರುತ್ತೀರೋ ಇಲ್ಲವೋ ಗೊತ್ತಿಲ್ಲ. ನಮಗೆ ಸಲಹೆ ನೀಡುವ ಬದಲು ನಿಮ್ಮದೇ ಸರ್ಕಾರವಿರುವ ಸಿಎಂಗೆ ಬುದ್ಧಿ ಮಾತುಗಳನ್ನು ಹೇಳಿ ಅಂತಾ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಇದುವರೆಗೂ ಹೇಳದ ಮಾತನ್ನು ನಾನಿಂದು ಹೇಳುತ್ತಿದ್ದೇನೆ. ಕಲಬುರಗಿ – ಬೀದರ್ ರೈಲ್ವೇ ಯೋಜನೆಗಳಿಗೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಚಾಲನೆ ನೀಡಿತ್ತು. ಎನ್‍ಡಿಎ ಆಡಳಿತದ ಬಳಿಕ ಬಂದ ಯುಪಿಎ ಸರ್ಕಾರ ರೈಲ್ವೇ ಯೋಜನೆಯನ್ನು ಪೂರ್ಣ ಮಾಡಲು ಮನಸ್ಸು ಮಾಡಲಿಲ್ಲ. ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ಸರ್ಕಾರ ಬಂದಾಗ ಕೇಂದ್ರದಿಂದ ಅನುದಾನ ಪಡೆದು ಕಾಮಗಾರಿಯನ್ನು ಆರಂಭಿಸಿದರು. 110 ಕಿಮೀ. ಉದ್ದದ ಕಾಮಗಾರಿಯಲ್ಲಿ ಯುಪಿಎ ಸರ್ಕಾರ ಕೇವಲ 37 ಕಿ.ಮೀ. ರೈಲ್ವೇ ಕಾಮಗಾರಿ ಪೂರ್ಣ ಮಾಡಿದೆ ಎಂದು ಹೇಳಿ ಖರ್ಗೆಗೆ ತಿರುಗೇಟು ನೀಡಿದ್ದರು.

The approvals by the @BSYBJP Government in Karnataka made it possible to work quickly on the rail line. We do not bother who is the local MP or MLA, which party they belong to. We serve the nation and care for 125 crore Indians: PM @narendramodi

— PMO India (@PMOIndia) February 7, 2018

ನಮ್ಮಲ್ಲಿ ಭೇದ ಭಾವವಿಲ್ಲ: ಮಲ್ಲಿಕಾರ್ಜುನ್ ಖರ್ಗೆ ತಾವೇ ರೈಲ್ವೇ ಮಂತ್ರಿಯಾಗಿದ್ದರೂ, ತಮ್ಮ ಸ್ವಕ್ಷೇತ್ರದ ಅಭಿವೃದ್ಧಿಗೆ ಮುಂದಾಗಲಿಲ್ಲ. 2014ರಲ್ಲಿ ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಬಂದ ಬಳಿಕ ಕಲಬುರಗಿ ಮತ್ತು ಬೀದರ್ ರೈಲ್ವೇ ಯೋಜನೆಯನ್ನು ಕೈಗೆತ್ತಿಕೊಂಡು ಪೂರ್ಣ ಮಾಡಿದ್ದೇವೆ. ನಾವು ಎಲ್ಲಿಯೂ ಕಲಬುರಗಿ ಮತ್ತು ಬೀದರ್ ನಮ್ಮ ವಿರೋಧ ಪಕ್ಷದ ನಾಯಕರ ಕ್ಷೇತ್ರ ಎಂದು ಭೇದ ಭಾವ ಮಾಡಿಲ್ಲ. ಕಲಬುರಗಿ ಮತ್ತು ಬೀದರ್ ವಿರೋಧ ಪಕ್ಷದ ನಾಯಕರ ಕ್ಷೇತ್ರವಾದ್ರೂ, ದೇಶ ನಮ್ಮದು ಅಂತಾ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ. 2017 ಡಿಸೆಂಬರ್ ನಲ್ಲಿ ಬೀದರ್ ರೈಲ್ವೆ ಯೋಜನೆಯನ್ನು ಉದ್ಘಾಟನೆ ಮಾಡಿದ ಖುಷಿ ನನಗಿದೆ ಎಂದು ಹೇಳಿದ್ದರು.

 

TAGGED:bjpcm siddaramaiahcongresskarnatakanarendra moditwitterನರೇಂದ್ರ ಮೋದಿಬೆಂಗಳೂರುಮಲ್ಲಿಕಾರ್ಜುನ ಖರ್ಗೆರೈಲ್ವೇ ಯೋಜನೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
13 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
20 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
41 minutes ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
47 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
48 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
56 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?