ರೌಡಿ ಲಕ್ಷ್ಮಣನ ಕೊಲೆ ಪ್ರಕರಣ – ಆರೋಪಿ ಕ್ಯಾಟ್‍ರಾಜನ ಕಾಲಿಗೆ ಪೊಲೀಸ್ ಗುಂಡು

Public TV
1 Min Read
Rowdy sheeter lakshmana 4 copy

ಬೆಂಗಳೂರು: ಕುಖ್ಯಾತ ಪಾತಕಿ ರೌಡಿ ಲಕ್ಷ್ಮಣ ಕೊಲೆ ಪ್ರಕರಣ ಸಂಬಂಧ ಆರೋಪಿ ಕ್ಯಾಟ್ ರಾಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಪ್ರಕರಣದಲ್ಲಿ ರೌಡಿ ಲಕ್ಷ್ಮಣ ಕೊಲೆ ಮಾಡಲು ಬಳಸಿದ್ದ ಮಚ್ಚನ್ನು ರಿಕವರಿ ಮಾಡಲು ಕರೀಂ ಸಾಬ್ ಪಾಳ್ಯಕ್ಕೆ ಹೋದಾಗ ಕ್ಯಾಟ್ ರಾಜ ತಿರುಗಿಬಿದ್ದಿದ್ದ. ಈ ವೇಳೆ ಪೊಲೀಸರ ಮೇಲೆ ಕಲ್ಲು ಎಸೆದಿದ್ದ. ಈ ಮೂಲಕ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಎಸ್ಕೇಪ್ ಆಗಲು ಮುಂದಾಗಿದ್ದನು.

ಕ್ಯಾಟ್‍ರಾಜ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗುತ್ತಿದಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಎರಡೂ ಕಾಲುಗಳಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಕ್ಯಾಟ್ ರಾಜನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಕ್ಯಾಟ್‍ರಾಜ ಕೊಲೆ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬ ಮಾಹಿತಿ ಲಭಿಸಿದೆ.

vlcsnap 2019 03 09 18h45m02s112

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಸಿಸಿಬಿ ವಶಕ್ಕೆ ನೀಡಿದ್ದು, ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಇಬ್ಬರ ಬಂಧನ ಮಾಡಲಾಗಿದೆ. ಉಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಕ್ಯಾಟ್ ರಾಜ ಬಿಟ್ಟರೆ ಸದ್ಯ ಶ್ರೀಕಂಠ ಎಂಬವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂದಹಾಗೇ ಲಕ್ಷ್ಮಣ ಹತ್ಯೆಯಲ್ಲಿ 6 ಜನರ ಆರೋಪಿಗಳು ಭಾಗಿಯಾಗಿದ್ದರು. ಹತ್ಯೆ ನಡೆದ ದಿನವೇ ಎಲ್ಲಾ ಆರೋಪಿಗಳು ಪೊಲೀಸರ ಮುಂದೇ ಶರಣಾಗಬೇಕೆಂದು ತೀರ್ಮಾನಿಸಿದ್ದರು. ಆದರೆ ಗ್ಯಾಂಗ್‍ನಲ್ಲಿ ಒಬ್ಬನ ಬರ್ತ್ ಡೇ ಇದ್ದ ಕಾರಣ ಪಾರ್ಟಿ ಮಾಡಲು ಸ್ಥಳದಿಂದ ಪರಾರಿಯಾಗಿದ್ದರು.

ಲಕ್ಷ್ಮಣನನ್ನು ಹತ್ಯೆ ಮಾಡಲು ಆರೋಪಿಗಳು ಮಹಿಳೆಯ ಸಹಾಯ ಪಡೆದಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿದ್ದು, ಲಕ್ಷ್ಮಣ ಅಂದು ಎಷ್ಟೊತ್ತಿಗೆ ಆಗಮಿಸುತ್ತಾನೆ ಎಂಬುವುದು ಆಕೆಗೆ ಮಾತ್ರ ತಿಳಿದಿತ್ತು ಎನ್ನಲಾಗಿದೆ. ಈ ಸಂಬಂಧ ಲಕ್ಷ್ಮಣ ಬಳಿ ಲಾಡ್ಜ್ ರೂಮ್ ಒಂದರ ಕೀ ಪತ್ತೆಯಾಗಿದೆ ಎನ್ನಲಾಗಿದೆ.

Rowdy sheeter lakshmana 3

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *