ಹೈದರಾಬಾದ್: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೆಲುಗು ಕಿರುತೆರೆಯ ನಟಿಯರಿಬ್ಬರು ಮೃತಪಟ್ಟಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಕಿರುತೆರೆ ನಟಿ ಭಾರ್ಗವಿ(20) ಮತ್ತು ಅನುಷಾ ರೆಡ್ಡಿ(21) ಮೃತ ದುರ್ದೈವಿಗಳು. ಚೆವೆಲ್ಲಾದಲ್ಲಿನ ಅಪ್ಪರೆಡ್ಡಿ ಬಸ್ ನಿಲ್ದಾಣದ ಬಳಿ ಈ ಅಪಘಾತ ನಡೆದಿದ್ದು, ಇಬ್ಬರು ನಟಿಯರು ಧಾರಾವಾಹಿಯ ಚಿತ್ರೀಕರಣ ಮುಗಿಸಿ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
- Advertisement 2
- Advertisement 3
ಧಾರಾವಾಹಿಯ ಮುಂದಿನ ದೃಶ್ಯಗಳನ್ನು ಶೂಟಿಂಗ್ ಮಾಡಲು ತಂಡದೊಂದಿಗೆ ಅನಂತಗಿರಿ ಅರಣ್ಯಕ್ಕೆ ಹೋಗಿದ್ದರು. ಅಲ್ಲಿ ಕೆಲವು ದೃಶ್ಯಗಳ ಶೂಟಿಂಗ್ ಮುಗಿಸಿ ಮಂಗಳವಾರ ರಾತ್ರಿ ಹೈದರಾಬಾದಿಗೆ ಹಿಂದಿರುಗುತ್ತಿದ್ದರು. ಚಾಲಕ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ.
- Advertisement 4
ಪರಿಣಾಮ ಅನುಷಾ ಮತ್ತು ಭಾರ್ಗವಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಭಾರ್ಗವಿ ತೆಲಂಗಾಣ ನಿವಾಸಿಯಾಗಿದ್ದು, ‘ಮುತ್ಯಾಲ ಮುಗ್ಗು’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದರು.