ಹಾಸನ: ಮಲ್ಲಿಕಾರ್ಜುನ ಖರ್ಗೆಯವರು ಚುನಾವಣೆ ನಂತರ ಎರಡೂವರೆ ವರ್ಷಗಳ ಕಾಲ ತಮ್ಮ ಕ್ಷೇತ್ರಕ್ಕೆ ಹೋಗಿರಲಿಲ್ಲ. ಯಾರು ಉತ್ತಮವಾಗಿ ಕೆಲಸ ಮಾಡುತ್ತಾರೆ ಜನರು ಚುನಾವಣೆಯಲ್ಲಿ ಅವರ ಕೈ ಹಿಡಿಯುತ್ತಾರೆ ಎಂದು ಸಚಿವ ಗೋಪಾಲಯ್ಯ, ಜೆಡಿಎಸ್ ಮತ್ತು ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಹಾಸನ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನೂತನ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಖರ್ಗೆಯವರು ಎರಡೂವರೆ ವರ್ಷಗಳ ಕಾಲ ತಮ್ಮ ಕ್ಷೇತ್ರಕ್ಕೆ ಹೋಗಿರಲಿಲ್ಲ. ಯಾರು ಉತ್ತಮವಾಗಿ ಕೆಲಸ ಮಾಡ್ತಾರೆ ಜನರು ಚುನಾವಣೆಯಲ್ಲಿ ಅವರ ಕೈ ಹಿಡಿಯುತ್ತಾರೆ. ಇಲ್ಲದಿದ್ದರೆ ಜನರು ಅವರನ್ನು ಆಯ್ಕೆ ಮಾಡುವುದಿಲ್ಲ ಇದನ್ನು ಜನರು ಈಗಾಗಲೇ ತೋರಿಸಿಕೊಟ್ಟಿದ್ದಾರೆ ಎಂದರು. ಇದೇ ವೇಳೆ ಆರ್ಎಸ್ಎಸ್ ಬಗ್ಗೆ ಕಾಂಗ್ರೆಸ್ ನಾಯಕರ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆರ್ಎಸ್ಎಸ್ ಇರುವ ಕಾರಣ ಇಂದು ದೇಶ ಉಳಿದಿದೆ ಎಂದು ಅಭಿಪ್ರಯಾಪಟ್ಟರು. ಇದನ್ನೂ ಓದಿ: ನನ್ನನ್ನು ಸೋಲಿಸಿದ್ದು ಮೋದಿ, ಶಾ, ಆರ್ಎಸ್ಎಸ್: ಖರ್ಗೆ
ಪ್ರಧಾನಮಂತ್ರಿ ಮೋದಿಜೀ ಉತ್ತಮ ಆಡಳಿತ ನಡೆಸಿದ ಹಿನ್ನೆಲೆಯಲ್ಲಿ, ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ಮಾಡಿದ್ದೇವೆ. ರಾಜ್ಯದಾದ್ಯಂತ ವಾಕ್ಸಿನೇಷನ್ ಕಾರ್ಯ ನಡೆಯುತ್ತಿದೆ. ಕೋವಿಡ್ ಲಸಿಕೆ ಕೊರತೆ ಇಲ್ಲ ಎಂದು ಮಾಹಿತಿ ಹಂಚಿಕೊಂಡರು. ಯಡಿಯೂರಪ್ಪ ಆಪ್ತ ಸಹಾಯಕನ ಮೇಲೆ ಐಟಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಐಟಿ ದಾಳಿ ಬಗ್ಗೆ ನನಗೆ ಗೊತ್ತಿಲ್ಲ. ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ಕೊಡುತ್ತೇನೆ ಎಂದರು. ಇದನ್ನೂ ಓದಿ: ಜೆಡಿಎಸ್ ಅನ್ನು ರಾಜಕೀಯವಾಗಿ 1 ಕಿ.ಮೀ, 1 ಮೀಟರ್ ದೂರ ಇಡಬೇಕು: ಪ್ರೀತಂಗೌಡ