ಚಿಕ್ಕಮಗಳೂರು: ಬೈಕಿನಲ್ಲಿ (Bike) ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ (Shoot Out) ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನ ಪ್ರಕಾಶ್ (30) ಹಾಗೂ ಪ್ರವೀಣ್ (33) ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ರಮೇಶ್, ಪ್ರಕಾಶ್, ಪ್ರವೀಣ್ ಮೂವರು ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಆದರೆ, ಗುಂಡಿನ ದಾಳಿ ನಡೆಸಿದ ರಮೇಶ್ಗೆ ಬಂದೂಕು ಎಲ್ಲಿಂದ ಸಿಕ್ತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣ ರಕ್ಷಣೆಗೆ ಬೆಳೆಗಾರರು ಗನ್ ಇಟ್ಟುಕೊಂಡಿರುತ್ತಾರೆ. ಅದೇ ಬಂದೂಕು ಅಥವಾ ಯಾವ ಬಂದೂಕು ಪರವಾನಗಿ ಇದೆಯಾ ಈ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ ಹಾಡಹಗಲೇ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಜನ ಕೂಡ ಕಂಗಾಲಾಗಿದ್ದಾರೆ. ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಮಗ ಸಾವು
ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿರುವ ಬಾಳೆಹೊನ್ನೂರು ಪೊಲೀಸರು ಆತ ನಿಜಕ್ಕೂ ಮಾನಸಿಕ ಅಸ್ವಸ್ಥನಾ, ಗುಂಡಿನ ದಾಳಿ ಹಿಂದೆ ಬೇರೆ ಕಾರಣ ಇದ್ಯಾ, ಸಂಬಂಧಿಕರ ಮಧ್ಯೆ ಬೇರ್ಯಾವುದಾದರೂ ಕಾರಣಕ್ಕೆ ಮನಸ್ತಾಪ ಇತ್ತಾ ಎಂಬೆಲ್ಲಾ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದರೆ, ವಯಸ್ಸಿಗೆ ಬಂದ ಇಬ್ಬರು ಮಕ್ಕಳನ್ನು ಕಳೆದುಕೊಂಡವರ ಹೆತ್ತವರ ನೋವಿನ ಆಕ್ರಂದನ ಮುಗಿಲು ಮುಟ್ಟಿದೆ. ಗುಂಡಿನ ದಾಳಿ ನಡೆಸಿದ ರಮೇಶ್ನನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಶಪಥ ಹೆದ್ದಾರಿ ತಡೆದು ಪ್ರತಿಭಟನೆ – ಲಾಠಿ ಬೀಸಿದ ಪೊಲೀಸರು
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k