ಕಲಬುರಗಿ: ನದಿಯ ನೀರು (River Water) ಕುಡಿಯಲು ಹೋಗಿದ್ದ ಬಾಲಕರಿಬ್ಬರು ದಾರುಣ ಸಾವಿಗೀಡಾದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋನಾಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ.
ರಾಮು ತಂದೆ ಅನಿಲಕುಮಾರ ದೊಡ್ಡಮನಿ (12) ಹಾಗೂ ದೇವು ತಂದೆ ಜೆಟ್ಟೆಪ್ಪ ಹೊಸಮನಿ (17) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇದನ್ನೂ ಓದಿ: ಸಾಲ ಕೊಡಿಸುವುದಾಗಿ ನಂಬಿಸಿ ಜನರಿಂದ ಹಣ ಪಡೆದು ವಂಚನೆ – ಗ್ಯಾಂಗ್ ಅರೆಸ್ಟ್
ಬಾಲಕರು ನೀರು ಕುಡಿಯುವ ಸಂದರ್ಭದಲ್ಲಿ ರಾಮು ಪಾಚಿ ಮೇಲೆ ಕಾಲಿಟ್ಟು ನದಿಗೆ ಜಾರಿಗೆ ಬಿದ್ದಿದ್ದಾನೆ. ರಾಮುನನ್ನು ರಕ್ಷಿಸಲು ಹೋದ ದೇವು ಸಹ ನದಿಯಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ. ಇಬ್ಬರು ಜೇವರ್ಗಿ ತಾಲೂಕಿನ ಕೋನಾಹಿಪ್ಪರಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಬ್ಲಾಸ್ಟ್ ಕೇಸ್ – ರೊಬೊಟ್ ಬಳಸಿ ಭಾರತದಲ್ಲಿ ದಾಳಿಗೆ ಮುಂದಾಗಿದ್ದ ಐಸಿಸ್
ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಜೇವರ್ಗಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಹುಡುಕಾಟ ನಡೆಸಿ ಶವವನ್ನು ಹೊರತೆಗೆದಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ (Jewargi Police Station) ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Web Stories