ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

Public TV
1 Min Read
FotoJet 5 1

ಚಿಕ್ಕಬಳ್ಳಾಪುರ: ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿಯ ಹಳೆ ಊರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಲಿಖಿತ್(14) ಹಾಗೂ ಹರಿ ಚರಣ್(13) ಮೃತರು. ಮೃತ ಬಾಲಕರು ನಿನ್ನೆ ಮಧ್ಯಾಹ್ನ 3 ಗಂಟೆ ವೇಳೆ ಈಜಾಡಲು ಗ್ರಾಮದ ಹೊರವಲಯದ ಜಯಣ್ಣ ಎಂಬುವವರಿಗೆ ಸೇರಿದ ಕೃಷಿಹೊಂಡದ ಬಳಿ ತೆರಳಿದ್ದಾರೆ. ಆದರೆ ಇಬ್ಬರು ಬಾಲಕರಿಗೂ ಈಜು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬದಲ್ಲಿ ನಿರಾಶ್ರಿತರೊಂದಿಗೆ ಕುಣಿದು ಕುಪ್ಪಳಿಸಿದ ತಹಶೀಲ್ದಾರ್

FotoJet 4 3

ಸಂಜೆಯಾದರೂ ಬಾಲಕರು ಮನೆಗೆ ಬಾರದ ಕಾರಣ ಪೋಷಕರು ಹುಡುಕಾಡಿದಾಗ ಕೃಷಿಹೊಂಡದಲ್ಲಿ ಬಾಲಕರ ಮೃತ ದೇಹಗಳು ಪತ್ತೆಯಾಗಿದೆ. ಇನ್ನೂ ಗ್ರಾಮಸ್ಥರೇ ಮೃತದೇಹಗಳನ್ನು ಹೊರತೆಗೆದು ಮೃತರ ಮನೆ ಬಳಿ ತೆಗೆದುಕೊಂಡು ಹೋಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ:  ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭ- ಕಾಂಗ್ರೆಸ್, ಬಿಜೆಪಿ ಮಧ್ಯೆ ಗದ್ದುಗೆ ಗುದ್ದಾಟ

FotoJet 24

ವಿಷಯ ತಿಳಿದ ಗೌರಿಬಿದನೂರು ಸಿಪಿಐ ಶಶಿಧರ್ ಹಾಗೂ ಗ್ರಾಮಾಂತರ ಠಾಣಾ ಪಿಎಸ್‍ಐ ವಿಜಯ್ ಮೃತ ಕುಟುಂಬಸ್ಥರ ಮನವೊಲಿಸಿ ಮೃತದೇಹಗಳನ್ನು ತಡರಾತ್ರಿ ಗೌರಿಬಿದನೂರು ಸರ್ಕಾರಿ ಆಸ್ಪತ್ರೆ ಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ನಂತರ ಮರಣೋತ್ತರ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ:  ನಾನು ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್

ಇಬ್ಬರು ಬಾಲಕರು ಅಕ್ಕಪಕ್ಕದ ಮನೆಯವರಾಗಿದ್ದು, ಸ್ನೇಹಿತರಾಗಿದ್ದರು. ಸಾವಿನಲ್ಲೂ ಸಹ ಇಬ್ಬರು ಒಂದಾಗಿ ಜೀವ ಬಿಟ್ಟಿದ್ದಾರೆ. ಸದ್ಯ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *