ಜೈಪುರ್: ಕಾರಿನಲ್ಲಿ ಇಬ್ಬರ ಮೃತ ದೇಹ ಸುಟ್ಟ ಸ್ಥಿತಿಯಲ್ಲಿ (Burnt Bodies) ಪತ್ತೆಯಾದ ಒಂದು ದಿನದ ನಂತರ ಐವರು ಗೋರಕ್ಷಕರ ಮೇಲೆ ಅಪಹರಣ ಪ್ರಕರಣ ದಾಖಲಾದ ಘಟನೆ ರಾಜಸ್ಥಾನದ (Rajasthan) ಭರತ್ಪುರ್ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭರತ್ಪುರನ ನಾಸಿರ್ (25) ಹಾಗೂ ಜುನೈದ್ (35) ಎಂಬ ಇಬ್ಬರು ಬುಧವಾರದಿಂದ ನಾಪತ್ತೆಯಾಗಿದ್ದರು. ಇಬ್ಬರನ್ನು ಅಪಹರಿಸಲಾಗಿದೆ ಎಂದು ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಕಿವಿಯಿಂದ ಹೂ ತೆಗೆದ ಯಡಿಯೂರಪ್ಪ
ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ಬೊಲೆರೋ (Bolero) ವಾಹನದಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತ ದೇಹ ಪತ್ತೆಯಾಗಿತ್ತು. ಮೃತ ದೇಹಗಳು ನಾಸಿರ್ ಮತ್ತು ಜುನೈದ್ ಅವರದ್ದೇ ಎಂಬುದನ್ನು ಖಚಿತ ಪಡಿಸಲು ಕುಟುಂಬಸ್ಥರನ್ನು ಸ್ಥಳಕ್ಕೆ ಕರೆದೊಯ್ಯಲಾಗುವುದು. ಮರಣೋತ್ತರ ಪರೀಕ್ಷೆ ಹಾಗೂ ಡಿಎನ್ಎ ವರದಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರತ್ಪುರದ ಇನ್ಸ್ಪೆಕ್ಟರ್ ಜನರಲ್ ಗೌರವ್ ಶ್ರೀವಾಸ್ತವ ತಿಳಿಸಿದ್ದಾರೆ.
ಮೃತ ದೇಹಗಳು ಪತ್ತೆಯಾದ ಕಾರನ್ನು ಕುಟುಂಬಸ್ಥರು ಪತ್ತೆಹಚ್ಚಿದ್ದಾರೆ. ನಾಸಿರ್ ಹಾಗೂ ಜುನೈದ್ ಅವರ ಪರಿಚಿತರ ಕಾರು ಎಂದು ಅವರು ಹೇಳಿದ್ದಾರೆ.
ಜುನೈದ್ ವಿರುದ್ಧ ಗೋವು ಕಳ್ಳಸಾಗಾಣಿಕೆಯ ಐದು ಪ್ರಕರಣಗಳಿದ್ದವು. ಆದರೆ ನಾಸಿರ್ ಯಾವುದೇ ಕ್ರಿಮಿನಲ್ ಹಿನ್ನಲೆ ಹೊಂದಿರಲಿಲ್ಲ. ಈ ಪ್ರಕರಣದಲ್ಲಿ ಗೋ ರಕ್ಷಕರ ಪಾತ್ರವಿರುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಶ್ರೀವಾಸ್ತವ ತಿಳಿಸಿದ್ದಾರೆ.
ಮೋನು ಮನೆಸರ್, ಲೋಕೇಶ್ ಸಿಂಘಿಯಾ, ರಿಂಕು ಸೈನಿ, ಅನಿಲ್ ಮತ್ತು ಶ್ರೀಕಾಂತ್ ಅಪಹರಿಸಿದ್ದಾರೆ. ಆರೋಪಿಗಳೆಲ್ಲ ಬಲಪಂಥೀಯ ಬಜರಂಗದಳದ ಕಾರ್ಯಕರ್ತರು ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಗುಂಡಿಟ್ಟು ಕೊಲ್ತೀನಿ, ಕಸ ಗುಡಿಸ್ತೀನಿ ಎಂದವನು ಎಲ್ಲಿ ಹೋದ?- ಅಶ್ವಥ್ ವಿರುದ್ಧ ಡಿಕೆಶಿ ವಾಗ್ದಾಳಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k