Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chamarajanagar

ರಸ್ತೆ ಮಧ್ಯೆ ಜೋತಾಡುತ್ತಿದ್ದ ವಿದ್ಯುತ್ ವೈರ್‌ಗೆ ಇಬ್ಬರು ರೈತರು ಬಲಿ

Public TV
Last updated: October 24, 2024 11:35 pm
Public TV
Share
1 Min Read
chamarajanagara farmers
SHARE

ಚಾಮರಾಜನಗರ: ರಸ್ತೆ ಮಧ್ಯೆ ಜೋತುಬಿದ್ದಿದ್ದ ವಿದ್ಯುತ್ ವೈರ್‌ಗೆ ಇಬ್ಬರು ರೈತರು ಬಲಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ನಾಗೇಂದ್ರ ಹಾಗೂ ಮಲ್ಲೇಶ್ ಮೃತ ದುರ್ದೈವಿಗಳು. ರಾತ್ರಿ ಊಟ ಮಾಡಿ ಬೈಕ್‌ನಲ್ಲಿ ಜಮೀನಿಗೆ ತೆರಳಿದ್ದರು. ಜಮೀನಿನಿಂದ ಬೈಕ್‌ನಲ್ಲಿ ವಾಪಸ್ ಬರುವಾಗ ರಸ್ತೆ ಮಧ್ಯೆ ಜೋತು ಬಿದ್ದಿದ್ದ ಹೈಟೆನ್ಷನ್ ವೈರ್‌ಗೆ ಅವರ ಕುತ್ತಿಗೆ ಸಿಲುಕಿ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾತ್ರಿಯೇ ಈ ಘಟನೆ ನಡೆದಿದ್ದು, ಯಾರ ಗಮನಕ್ಕೂ ಬಂದಿರಲಿಲ್ಲ. ಎಂದಿನಂತೆ ಬೆಳ್ಳಂಬೆಳಿಗ್ಗೆ ಹೊಲಗದ್ದೆಗಳಿಗೆ ತೆರಳಲು ಬಂದ ಗ್ರಾಮದ ರೈತರಿಗೆ ರಸ್ತೆ ಮಧ್ಯೆ ವಿದ್ಯುತ್ ತಂತಿಗೆ ಸಿಲುಕಿ ಇವರಿಬ್ಬರು ಸಿಲುಕಿ ಮೃತಪಟ್ಟಿರುವುದು ಗೊತ್ತಾಗಿದೆ.

ಹೊಲಗದ್ದೆಗಳಿಗೆ ತೆರಳುವ ಈ ರಸ್ತೆಯ ಎರಡು ಬದಿಗಳಲ್ಲಿ ವಿದ್ಯುತ್ ಕಂಬಗಳಿದ್ದು, ವಿದ್ಯುತ್ ತಂತಿಗಳು ಸಡಿಲಗೊಂಡಿದ್ದವು. ನಿನ್ನೆ ರಾತ್ರಿ ಗಾಳಿ ಮಳೆಯ ಪರಿಣಾಮ ವಿದ್ಯುತ್ ತಂತಿ ರಸ್ತೆ ಮಧ್ಯದಲ್ಲಿಯೇ ಜೋತು ಬಿದ್ದಿತ್ತು. ಜಮೀನಿನಿಂದ ಬೈಕ್‌ನಲ್ಲಿ ವಾಪಸ್ ಬರುತ್ತಿದ್ದಾಗ ಜೋತು ಬಿದ್ದ ವಿದ್ಯುತ್ ತಂತಿಗೆ ರೈತರ ಕುತ್ತಿಗೆ ಸಿಲುಕಿ ಮೃತಪಟ್ಟಿದ್ದಾರೆ. ವಿಷಯ ತಿಳಿದ ಅಕ್ಕಪಕ್ಕದ ಗ್ರಾಮಗಳ ರೈತರು, ರೈತ ಸಂಘದ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಚೆಸ್ಕಾಂ ವಿರುದ್ಧ ಪ್ರತಿಭಟನೆ ನಡೆಸಿದರು. ಸರಿಯಾಗಿ ವಿದ್ಯುತ್ ತಂತಿಗಳ ನಿರ್ವಹಣೆ ಮಾಡದೇ ಇರುವುದು ಈ ದುರಂತಕ್ಕೆ ಕಾರಣವಾಗಿದೆ ಎಂದು ಹರಿಹಾಯ್ದಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಬರಲೇಬೇಕು ಅಲ್ಲಿಯವರೆಗೂ ಮೃತ ರೈತರ ಶವಗಳನ್ನು ಮುಟ್ಟಲು ಬಿಡುವು ಎಂದು ಪಟ್ಟು ಹಿಡಿದಿದ್ದರು. ಎಸ್ಪಿ ಕವಿತಾ ಹಾಗೂ ಉಪವಿಭಾಗಾಧಿಕಾರಿ ಮಹೇಶ್ ಎಷ್ಟೇ ಮನವೊಲಿಸಿದರು ರೈತರು ಮಾತ್ರ ಜಗ್ಗಲಿಲ್ಲ.

ಕೊನೆಗೆ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮೃತ ರೈತ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಎರಡೂ ಕುಟುಂಬದ ತಲಾ ಒಬ್ಬರಿಗೆ ಚೆಸ್ಕಾಂನಲ್ಲೇ ಉದ್ಯೋಗ ಹಾಗೂ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಿಸುವ ಭರವಸೆ ನೀಡಿದರು. ಕೊನೆಗೂ ಜಿಲ್ಲಾಧಿಕಾರಿ ಮಾತಿಗೆ ಮಣಿದ ಗ್ರಾಮಸ್ಥರು, ಮೃತ ರೈತರ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲು ಅವಕಾಶ ನೀಡಿದರು.

TAGGED:Chamarajanagarafarmersಚಾಮರಾಜನಗರರೈತರು
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
10 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
10 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
11 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
13 hours ago

You Might Also Like

HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
2 minutes ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
4 minutes ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
20 minutes ago
Nganthoi Sharma
Latest

ವಿಮಾನ ಪತನ – ಗಗನ ಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
2 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
53 minutes ago
rabindranath tagore
Crime

ಸೇಡಿಗಾಗಿ ಠಾಗೂರ್ ಮನೆ ಮೇಲೆ ದಾಳಿ – 50ಕ್ಕೂ ಹೆಚ್ಚು ಜನರ ಮೇಲೆ ಕೇಸ್ 

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?