Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರಾಹಕರ ಮೊಬೈಲ್‍ಗೆ ಒಟಿಪಿ ಬಂದ್ರೂ ಬ್ಯಾಂಕ್ ಖಾತೆಗೆ ಕನ್ನ: ಖದೀಮರ ತಂತ್ರ ಏನು? ಈ ಸುದ್ದಿ ನೀವ್ ಓದ್ಲೇಬೇಕು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ರಾಹಕರ ಮೊಬೈಲ್‍ಗೆ ಒಟಿಪಿ ಬಂದ್ರೂ ಬ್ಯಾಂಕ್ ಖಾತೆಗೆ ಕನ್ನ: ಖದೀಮರ ತಂತ್ರ ಏನು? ಈ ಸುದ್ದಿ ನೀವ್ ಓದ್ಲೇಬೇಕು

Bengaluru City

ಗ್ರಾಹಕರ ಮೊಬೈಲ್‍ಗೆ ಒಟಿಪಿ ಬಂದ್ರೂ ಬ್ಯಾಂಕ್ ಖಾತೆಗೆ ಕನ್ನ: ಖದೀಮರ ತಂತ್ರ ಏನು? ಈ ಸುದ್ದಿ ನೀವ್ ಓದ್ಲೇಬೇಕು

Public TV
Last updated: October 16, 2018 5:22 pm
Public TV
Share
3 Min Read
OTP number
SHARE

ಬೆಂಗಳೂರು: ಸ್ಪಾಮ್ ಮೇಲ್ ಕಳುಹಿಸಿ ಜನರ ಮಾಹಿತಿ ಕದ್ದು ಬ್ಯಾಂಕ್ ಖಾತೆಗೆ ಕನ್ನ ಹಾವುದು ಹಳೆಯ ಸಂಗತಿ. ಈಗ ಸೈಬರ್ ಕಳ್ಳರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಗ್ರಾಹಕರ ಮೊಬೈಲ್‍ಗೆ ಒಟಿಪಿ ಬಂದರೂ ದೂರದಲ್ಲಿದ್ದುಕೊಂಡೇ ಬ್ಯಾಂಕ್ ಖಾತೆಗೆ ಕನ್ನ ಹಾಕುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಹೌದು, ಬ್ಯಾಂಕ್ ಖಾತೆಯಿಂದಲೇ ಹಣ ಎಗರಿಸುತ್ತಿದ್ದ ಖತರ್ನಾಕ್ ಇಬ್ಬರು ಕಳ್ಳರನ್ನು ಬೆಂಗಳೂರಿನ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ರಾಘವೇಂದ್ರ (24) ಹಾಗೂ ರಾಕೇಶ್ ಕುಮಾರ್ (24) ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಸ್ವೈಪಿಂಗ್ ಯಂತ್ರ, 5 ಎಟಿಎಂ ಕಾರ್ಡ್, ಒಂದು ಕಾರು, 7 ಮೊಬೈಲ್, ಎರಡು ಹೆಚ್ಚುವರಿ ಸಿಮ್ ಕಾರ್ಡ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Credit Card

ನಕಲಿ ಕಂಪನಿ ಓಪನ್ ಮಾಡಿದ್ರು:
ರಾಘವೇಂದ್ರ ಬಿಕಾಂ ಪದವೀಧರನಾಗಿದ್ದು, ಈ ಹಿಂದೆ ಹಣಕಾಸು ವಹಿವಾಟು ಸಂಬಂಧಿಸಿದ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದರಿಂದಾಗಿ ಆನ್‍ಲೈನ್ ಮೂಲಕ ಹಣ ವರ್ಗಾವಣೆ ಬಗ್ಗೆ ಹೆಚ್ಚಿ ಜ್ಞಾನ ಪಡೆದುಕೊಂಡಿದ್ದ. ಆರ್ಥಿಕವಾಗಿ ಬೇಗ ಅಭಿವೃದ್ಧಿ ಹೊಂದಬೇಕು, ಬೇಗನೇ ಹಣಗಳಿಸಬೇಕು ಎನ್ನುವ ಉದ್ದೇಶದಿಂದ ‘ಲೀಡ್ ಮ್ಯಾನೇಜ್ ಮೆಂಟ್’ ಹೆಸರಿನಲ್ಲಿ ನಕಲಿ ಕಂಪೆನಿ ಪ್ರಾರಂಭಿಸಿದ್ದಾನೆ. ಹಣ ವರ್ಗಾವಣೆ ಮಾಡಿಕೊಳ್ಳಲು 2017ರಂದು ಹೊಸೂರು ರಸ್ತೆಯ ಎಸ್‍ಬಿಐ ನಲ್ಲಿ ಲೀಡ್ ಮ್ಯಾನೇಜ್‍ಮೆಂಟ್ ಕಂಪೆನಿ ಹೆಸರಿನಲ್ಲಿ ಖಾತೆ ತೆರೆದಿದ್ದಾನೆ. ಈ ಕೃತ್ಯಕ್ಕೆ ತನ್ನ ಸ್ನೇಹಿತ ರಾಕೇಶ್‍ನನ್ನು ರಾಘವೇಂದ್ರ ಸೇರಿಸಿಕೊಂಡಿದ್ದಾನೆ.

ಗ್ರಾಹಕರಿಗೆ ಕರೆ:
ಇಬ್ಬರು ಸೇರಿದ ನಂತರ ಜಸ್ಟ್ ಡಯಲ್ ಮೂಲಕ ಲಾಜೆಸ್ಟಿಕ್ ಡೀಲರ್ಸ್, ಅರ್ಥ್ ಮೂವರ್ಸ್, ಸೋಲಾರ್ ಡೀಲರ್ಸ್ ಸೇರಿದಂತೆ ಕೆಲವು ವ್ಯಾಪಾರಿಗಳ ದೂರವಾಣಿ ಸಂಖ್ಯೆ ಕಲೆಹಾಕಿದ್ದಾರೆ. ವ್ಯಾಪಾರಿಗಳಿಗೆ ಕರೆ ಮಾಡಿ, ನಾವು ಕಸ್ಟಮರ್ ಲೀಡ್ ಕಂಪನಿ ನಡೆಸುತ್ತಿದ್ದು, ಕಮಿಷನ್ ಆಧಾರದಲ್ಲಿ ಗ್ರಾಹಕರನ್ನು ಹುಡುಕಿಕೊಡುತ್ತೇವೆ ಅಂತಾ ಹೇಳಿಕೊಂಡು, ನಿಮ್ಮನ್ನು ಭೇಟಿಯಾಗಬೇಕು ಅಂತಾ ಕೇಳುತ್ತಿದ್ದರು.

Credit Card 2

ಷರತ್ತು ಹೇಳಿ ಫೋಟೋ ತೆಗೆದ್ರು:
ಆರೋಪಿಗಳ ಕರೆಗೆ ಪ್ರತಿಕ್ರಿಯಿಸಿದ್ದ ವ್ಯಾಪಾರಿಗಳು ಭೇಟಿಗೆ ಸಮಯ ನೀಡುತ್ತಿದ್ದರು. ವ್ಯಾಪಾರಿಗಳ ಬಳಿಗೆ ಹೋಗುತ್ತಿದ್ದ ರಾಘವೇಂದ್ರ ಹಾಗೂ ರಾಕೇಶ್ ಆತ್ಮೀಯವಾಗಿ ಮಾತುಕತೆ ನಡೆಸುತ್ತಿದ್ದರು. ನಮ್ಮ ಕಂಪನಿಯಿಂದ ನಿಮಗೆ ಸೇವೆ ಒದಗಿಸಲು ಕೆಲವು ಷರತ್ತುಗಳಿವೆ. ನಿಮ್ಮ ಬಳಿ ಇರುವ ಎಟಿಎಂ ಕಾರ್ಡ್ ನಿಂದ 200 ರೂ. ಪಾವತಿ ಮಾಡಬೇಕು. ಕಂಪನಿಯ ಫಾರ್ಮ್ ನಲ್ಲಿ ತುಂಬಿ, ಸಹಿ ಮಾಡಬೇಕು ಅಂತಾ ಹೇಳುತ್ತಿದ್ದರು.

ಇಬ್ಬರ ಮಾತಿಗೆ ಮರುಳಾಗುವ ವ್ಯಾಪಾರಿಗಳು ತಮ್ಮ ಎಟಿಎಂ/ ಕ್ರೆಡಿಟ್ ಕಾರ್ಡ್ ಇವರಿಗೆ ನೀಡುತ್ತಿದ್ದರು. ಕಾರ್ಡ್ ಸಿಕ್ಕಿದ ಕೂಡಲೇ ತಮ್ಮ ಸ್ವೈಪಿಂಗ್ ಯಂತ್ರದಿಂದ ಹಣವನ್ನು ಖಾತೆಗೆ ಜಮ ಮಾಡುತ್ತಾರೆ. ಈ ವೇಳೆ ಫಾರ್ಮ್ ಭರ್ತಿ ಮಾಡುವಂತೆ ಹೇಳಿ ವ್ಯಾಪಾರಿಗಳ ಗಮನವನ್ನು ಬೇರೆ ಕಡೆಗೆ ಸೆಳೆದು ಕಾರ್ಡ್ ನ ಎರಡೂ ಬದಿಯ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಅಷ್ಟಕ್ಕೆ ಬಿಡದೇ ಅವರ ಬಳಿ ಮೊಬೈಲ್ ಪಡೆದು, ಲೀಡ್ ಮ್ಯಾನೇಜ್ ಮೆಂಟ್ ಆ್ಯಪ್ ಡೌನ್‍ಲೋಡ್ ಹಾಗೂ ‘ಮೈ ಎಸ್‍ಎಂಎಸ್ ಆ್ಯಪ್’ ಗಳನ್ನು ಕೂಡ ಡೌನ್‍ಲೋಡ್ ಮಾಡಿ ಮಸೇಜ್‍ಗಳನ್ನು ಸಿಂಕ್ ಮಾಡಿ ಪಾಸ್‍ವರ್ಡ್ ಪಡೆದು ಅಲ್ಲಿಂದ ಹೊರಡುತ್ತಿದ್ದರು.

debit card

ಅಸಲಿ ಆಟ ಆರಂಭ:
ಆನ್‍ಲೈನ್ ವ್ಯವಹಾರ ಗಳನ್ನು ಡೆಬಿಟ್/ ಕ್ರೆಡಿಟ್ ಕಾರ್ಡ್ ಗಳಿಂದ ಅಥವಾ ಆನ್‍ಲೈನ್ ಖಾತೆಗಳಿಂದ ಮಾಡಬಹುದು. ಹೀಗಾಗಿ ಇವರು ತಮ್ಮ ವ್ಯವಹಾರಗಳನ್ನು ಕಾರ್ಡ್ ಮೂಲಕವೇ ಮಾಡುತ್ತಿದ್ದರು. ಫೋಟೋ ಕ್ಲಿಕ್ಕಿಸಿದ್ದರಿಂದ ಕಾರ್ಡ್ ನ 16 ಸಂಖ್ಯೆ ಜೊತೆಗೆ ವಿವರ ಸಹ ಲಭ್ಯವಾಗುತ್ತದೆ. ಹಿಂದುಗಡೆ ಫೋಟೋ ಕ್ಲಿಕ್ ಮಾಡಿದ್ದರಿಂದ ಸಿವಿವಿ ನಂಬರ್ ಸಹ ಸಿಕ್ಕಿರುತ್ತದೆ. ಈ ನಂಬರ್ ಗಳನ್ನು ಹಾಕಿ ವ್ಯವಹಾರ ಆರಂಭಿಸಿದ ಒಂದನೇ ಸ್ಟೆಪ್ ಮುಗಿದ ಕೂಡಲೇ ಗ್ರಾಹಕರ ಮೊಬೈಲಿಗೆ ಒಟಿಪಿ ಸಂಖ್ಯೆ ಬರುತ್ತದೆ. ಕೂಡಲೇ ಆರೋಪಿ ರಾಘವೇಂದ್ರ ಗ್ರಾಹಕರ ‘ಮೈ ಎಸ್‍ಎಂಎಸ್ ಆ್ಯಪ್’ ಖಾತೆ ಲಾಗಿನ್ ಆಗಿ ಆ ಒಟಿಪಿಯನ್ನು ಪಡೆದು ಪಡೆದು ಖಾತೆಯಿಂದಲೇ ಹಣವನ್ನು ಎಗರಿಸುತ್ತಿದ್ದ.

ಸಿಕ್ಕಿಬಿದ್ದಿದ್ದು ಹೇಗೆ?:
ನಾಗರಬಾವಿ ವ್ಯಕ್ತಿಯೊಬ್ಬರಿಂದ ರಾಘವೇಂದ್ರ ಹಾಗೂ ರಾಕೇಶ್ ಮಾಹಿತಿ ಪಡೆದಿದ್ದರು. ಕೆಲ ದಿನಗಳ ನಂತರ ಮಾಹಿತಿ ನೀಡಿದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ 75 ಸಾವಿರ ರೂ. ವರ್ಗಾವಣೆ ಆಗಿದೆ. ಯಾವುದೇ ವ್ಯವಹಾರ ನಡೆಸದೇ ಹಣ ಡ್ರಾ ಆಗಿದ್ದನ್ನು ನೋಡಿ ಅವರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ಬೆನ್ನತ್ತಿದ್ದ ಸಿಸಿಬಿ ಪೊಲೀಸರಿಗೆ ವಂಚಕರ ಈ ಕೃತ್ಯ ಬೆಳಕಿಗೆ ಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

debit card

TAGGED:atmB.Com studentcyber crimeMy SMS appPublic TVshivamoggaಎಟಿಎಂಪಬ್ಲಿಕ್ ಟಿವಿಬಿಕಾಂ ವಿದ್ಯಾರ್ಥಿಮೈ ಎಸ್‍ಎಂಎಸ್ ಆ್ಯಪ್ಶಿವಮೊಗ್ಗಸೈಬರ್ ಅಪರಾಧ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
16 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
32 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
40 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?