ಕಾರವಾರ: ಧಾರಾಕಾರವಾಗಿ ಸುರಿದ ಮಳೆಗೆ 2 ಮನೆಗಳು ಧರೆಗುರುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಕನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಘು ಇಡುಕಪ್ಪ ನಾಯ್ಕ ಮತ್ತು ದಾಕ್ಷಾಯಿಣಿ ಇಡುಕಪ್ಪ ನಾಯ್ಕ ಎಂಬವರಿಗೆ ಸೇರಿದ ಮನೆ ಅಬ್ಬರದ ಗಾಳಿಮಳೆಗೆ ಕುಸಿದು ಬಿದ್ದು ಸಾಕಷ್ಟು ಹಾನಿಯುಂಟಾಗಿದೆ. ಇದನ್ನೂ ಓದಿ: ಕುಡಿತದ ಚಟ ಬಿಡಿಸೋ ನಾಟಿ ಔಷಧಿ ಸೇವಿಸಿ ನಾಲ್ವರು ಸಾವು – ನಕಲಿ ವೈದ್ಯ ಅರೆಸ್ಟ್
ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿದ್ದ ವಸ್ತುಗಳು ನಾಶವಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಇಲ್ಲದೇ ಆ ಬಡ ಕುಟುಂಬ ಇದೀಗ ಬೀದಿಪಾಲಾಗಿದೆ.
ಸಂತ್ರಸ್ಥರಿಗೆ ವಾಸ ಮಾಡಲು ಸೂರಿಲ್ಲದೇ ಪರದಾಡುವ ಸ್ಥಿತಿ ಎದುರಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಆ ಕುಟುಂಬದವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ಗೊತ್ತಿಲ್ಲ: ಡಾ.ಸುಧಾಕರ್ ರಿಯಾಕ್ಷನ್