ತುಮಕೂರು: ಲಾರಿಗೆ ಹಿಂಬದಿಯಿಂದ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ತಾಲೂಕಿನ ಸೋರೆಕುಂಟೆ ಬಳಿ ನಡೆದಿದೆ.
ಮೃತರ ಪೈಕಿ ಓರ್ವನನ್ನು ಷಣ್ಮುಗ (50) ಎಂದು ಗುರುತಿಸಲಾಗಿದ್ದು, ಆತನ ಜೊತೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.
ಬೆಂಗಳೂರಿನಿಂದ(Bengaluru) ಚಿತ್ರದುರ್ಗದತ್ತ ಟ್ರ್ಯಾಕ್ಟರ್ಗಳನ್ನು ಹೇರಿಕೊಂಡು ಲಾರಿಯೊಂದು ತೆರಳುತ್ತಿತ್ತು. ಈ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನವು ಸೋರೆಕುಂಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಕರ್ನಾಟಕ ಬಂದ್ ಗೊಂದಲದ ಗೂಡು – ಕನ್ನಡ ಸಂಘಟನೆಗಳ ಮಧ್ಯೆ ಮೂಡಿದ ಭಿನ್ನಮತ, ವಾಟಾಳ್ ಬಿಗಿಪಟ್ಟು

ಡಿಕ್ಕಿಯ ರಭಸಕ್ಕೆ ಬೊಲೇರೊ ಗೂಡ್ಸ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಇಬ್ಬರೂ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಉಸಿರುಚೆಲ್ಲಿದ್ದಾರೆ. ಇದನ್ನೂ ಓದಿ: ಅಕ್ರಮ ಬಾಂಗ್ಲ ವಲಿಸಿಗರೆಂಬ ಶಂಕೆ – KSRTC ಬಸ್ ತಡೆದ ಹಿಂದೂ ಕಾರ್ಯಕರ್ತರು
ಈ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತೊಬ್ಬ ಮೃತನ ಗುರುತು ಪತ್ತೆ ಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
