ಚಿಕ್ಕಬಳ್ಳಾಪುರ: ಓವರ್ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ (Bus) ಮರಕ್ಕೆ ಡಿಕ್ಕಿಯಾಗಿ (Accident) ಇಬ್ಬರು ಸಾವಿಗೀಡಾದ ಘಟನೆ ಬಾಗೇಪಲ್ಲಿಯ (Bagepalli) ಪಾತಪಾಳ್ಯ ಬಳಿಯ ನಗರ್ಲು ಕ್ರಾಸ್ ಬಳಿ ನಡೆದಿದೆ.
ಬಸ್ ಚೇಳೂರು ಚಾಕವೇಲು ಪಾತಪಾಳ್ಯ ಮೂಲಕ ಬಾಗೇಪಲ್ಲಿಗೆ ಬರುತ್ತಿತ್ತು. ಈ ವೇಳೆ ಚಾಲಕ ಓವರ್ಟೇಕ್ ಮಾಡುವ ವೇಳೆ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ಹಲವು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಚಿಂತಾಮಣಿ ಹಾಗೂ ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಲಾರಿ, ಟಾಟಾ ಏಸ್ ನಡುವೆ ಡಿಕ್ಕಿ – ನಾಲ್ವರ ದುರ್ಮರಣ, ಓರ್ವನ ಸ್ಥಿತಿ ಗಂಭೀರ
ಅಪಘಾತಕ್ಕೊಳಗಾದ ಬಸ್ನ್ನು ಜೆಸಿಬಿ ಮೂಲಕ ತೆರವು ಮಾಡಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸುದ್ದಿಗೋಷ್ಠಿಗೆ ಮುನ್ನವೇ ಮಣಿಕಂಠ್ ರಾಠೋಡ್ನ ವಶಕ್ಕೆ ಪಡೆದ ಕಲಬುರಗಿ ಪೊಲೀಸರು