ಕಲಬುರಗಿ: ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡು ವಾಹನಗಳ ಚಾಲಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಆಳಂದ ತಾಲೂಕಿನ ಚಿತಲಿ ಗ್ರಾಮದ ಬಳಿ ನಡೆದಿದೆ.
ಆಳಂದ ಪಟ್ಟಣದ ಬಾಳೇನಗಲ್ಲಿ ನಿವಾಸಿ, ಗೂಡ್ಸ್ ಚಾಲಕ ಜಾಫರ್ ಖಾಸೀಂ (27), ಗುಜರಾತ್ ಮೂಲದ ಉದ್ಯಮಿ ಕಾರು ಚಾಲಕ ಜೋಧಾರಾಮ ಜಸ್ವಂತ್ (40) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನೋರ್ವ ಹೀರಾರಾಮ ಎಂಬಾತ ಗಂಭೀರ ಗಾಯಗೊಂಡಿದ್ದು, ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ
ಜಾಫರ್ ಆಳಂದನಿಂದ ಮಹಾರಾಷ್ಟ್ರದ ಉಮರ್ಗಾಕ್ಕೆ ಗೂಡ್ಸ್ ವಾಹನದಲ್ಲಿ ಸಾಗುತ್ತಿದ್ದ. ಗುಜರಾತ್ ಮೂಲದ ವ್ಯಾಪಾರಿಗಳಾದ ಜೋಧಾರಾಮ, ಹೀರಾರಾಮ ಉಮರ್ಗಾದಿಂದ ಕಾರಿನಲ್ಲಿ ಆಳಂದಕ್ಕೆ ಬರುತ್ತಿರುವಾಗ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸಿಪಿಐ ಬಾಸು ಚವ್ಹಾಣ್, ಪಿಎಸ್ಐ ತಿರುಮಲೇಶ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಆಳಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸೆಪ್ಟೆಂಬರ್ವರೆಗೂ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ ದೆಹಲಿ ಸರ್ಕಾರ