ಬೆಂಗಳೂರು: ಸಿಲಿಕಾನ್ ಸಿಟಿಯ ನೈಸ್ ರಸ್ತೆಯಲ್ಲಿ ಭೀಕರ ಕಾರು ಅಪಘಾತಕ್ಕೆ ಸ್ಥಳದಲ್ಲೇ ಇಬ್ಬರು ದಾರುಣವಾಗಿ ಸಾವಪ್ಪಿರುವ ಘಟನೆ ಕಳೆದ ರಾತ್ರಿ ಸಂಭವಿಸಿದೆ.
ಹೊಸಕೆರೆಹಳ್ಳಿ ಹಾಗೂ ನೈಸ್ ರೋಡ್ ಜಂಕ್ಷನ್ ಬಳಿ ರಾಗಿ ಕಣ ಮಾಡುತ್ತಿದ್ದ ಬಿಂದು ಹಾಗೂ ಹೊನ್ನಮ್ಮ ಮೃತಪಟ್ಟಿದ್ದಾರೆ. ರಾತ್ರಿ ಬೈಕ್ ಅಡ್ಡ ನಿಲ್ಲಿಸಿ ಊಟ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದುಕೊಂಡು ಊಟ ಮಾಡುತ್ತಿದ್ದವರ ಮೈಮೇಲೆ ಹರಿದಿದೆ.
ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಡಿಸಿಪಿ ಕುಲ್ದೀಪ್ ಕುಮಾರ್ ಜೈನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪತ್ನಿಯ ಕೊಂದು ಜನರಿಗೆ ಲಾಂಗ್ ಬೀಸಿದ ಪತಿ- ಇಬ್ಬರ ಸ್ಥಿತಿ ಗಂಭೀರ