ಬೆಂಗ್ಳೂರಲ್ಲಿ ಪಟಾಕಿ ಸಿಡಿತಕ್ಕೆ ಇಬ್ಬರ ಬಾಳಲ್ಲಿ ಅಂಧಾಕಾರ..!

Public TV
1 Min Read
MINTO

– 10ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಂಗಳೂರು: ಕತ್ತಲೆಯಿಂದ ಬೆಳಕಿನೆಡೆಗೆ ದೀಪಾವಳಿ. ಆದ್ರೆ ಈ ದೀಪಾವಳಿ ಬೆಳಕಿನ ಹಬ್ಬದ ಸಮಯದಲ್ಲಿ ಮೊದಲನೇ ದಿನವೇ ನಗರದಲ್ಲಿ ಇಬ್ಬರು ಮಕ್ಕಳ ಪಾಲಿಗೆ ಶಾಶ್ವತ ಅಂಧಕಾರವನ್ನ ತಂದೊಡ್ಡಿದೆ.

vlcsnap 2018 11 07 07h03m34s152

ದೀಪಾವಳಿ ಹಬ್ಬದ ಖಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಮಂಗಳವಾರ ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಡಿಜೆ ಹಳ್ಳಿಯ 13 ವರ್ಷದ ಸಹೀದಾ ಬಾನು ಎಂಬ ಏಳನೇ ತರಗತಿ ವಿದ್ಯಾರ್ಥಿನಿಗೆ ಪಟಾಕಿ ತಗಲಿ ಒಂದು ಕಣ್ಣಿಗೆ ತೀವ್ರಪೆಟ್ಟಾಗಿ ದೃಷ್ಟಿ ಕಳೆದುಕೊಂಡಿದೆ. ಬೊಮ್ಮನಹಳ್ಳಿಯಲ್ಲಿ ಮನೆಯ ಮುಂದೆ ಪಟಾಕಿ ಸಿಡಿಸೋದನ್ನ ನೋಡುತ್ತ ನಿಂತಿದ್ದ ಆರು ವರ್ಷದ ಬಾಲಕಿ ದಿವ್ಯಾಗೆ ರಸ್ತೆಯಲ್ಲಿಟ್ಟಿದ್ದ ಪಟಾಕಿ ಸಿಡಿದು ಎಡಕಣ್ಣಿನ ರೆಟಿನಾಗೆ ತೀವ್ರ ಪೆಟ್ಟಾಗಿದೆ.

vlcsnap 2018 11 07 07h03m17s242

ಇಬ್ಬರು ಬಾಲಕಿಯರನ್ನು ಮಿಂಟೊ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ವೈದ್ಯರು ಗಾಯಗೊಂಡ ಮಕ್ಕಳಿಗೆ ರಾತ್ರಿಯೇ ಆಪರೇಷನ್ ನಡೆಸಿ ಹೆಚ್ಚಿನ ಚಿಕಿತ್ಸೆ ನೀಡ್ತಿದ್ದಾರೆ. ನೆನ್ನೆ ಒಂದೇ ದಿನ ಪಟಾಕಿ ಸಿಡಿದು ಗಾಯಗೊಂಡವರ ಪೈಕಿ ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ 7 ಹಾಗೂ ನಾರಾಯಣ ನೇತ್ರಾಲಯದಲ್ಲಿ ಮೂವರು ಚಿಕಿತ್ಸೆ ಪಡೆದಿದ್ದಾರೆ.

vlcsnap 2018 11 07 07h03m48s25

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *