ಗ್ರಾಮದೇವತೆ ಹಬ್ಬ ಮುಗಿಸಿ ವಾಪಸ್ಸಾಗುವಾಗ ಅಪಘಾತ- ಬೈಕ್ ಸವಾರರಿಬ್ಬರ ದುರ್ಮರಣ

Public TV
0 Min Read
MYS ACCIDENT

ಮೈಸೂರು: ಬೈಕ್ ಮತ್ತು ಗೂಡ್ಸ್ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.

ಈ ಘಟನೆ ಶನಿವಾರ ಸಂಜೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ನಾಗನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತ ದುರ್ದೈವಿಗಳನ್ನು ಮಹದೇವ್ (68) ಮಂಜು (30) ಎಂದು ಗುರುತಿಸಲಾಗಿದೆ.

ಮೃತರು ಚನ್ನಂಗೆರೆ ಗ್ರಾಮದವರು ಎನ್ನಲಾಗಿದ್ದು, ಇವರು ದೊಡ್ಡನೇರಳೆ ಗ್ರಾಮದಲ್ಲಿ ಗ್ರಾಮದೇವತೆ ಹಬ್ಬ ಮುಗಿಸಿ ವಾಪಸ್ಸು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *