ವಿಜಯಪುರ: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ಮುದ್ದೇಬಿಹಾಳ (Muddebihal) ತಾಲೂಕಿನಲ್ಲಿ ನಡೆದಿದೆ.
ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಬಳಿ ಕೆ.ಬಿ.ಜೆ.ಎನ್.ಎಲ್ ಕಾಲುವೆಯಲ್ಲಿ ಘಟನೆ ನಡೆದಿದೆ. ರಸೂಲ್ ಮಾಲದಾರ (25) ಹಾಗೂ ಸಮಿವುಲ್ಲಾ ಗೊಳಸಂಗಿ (10) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಬಾಗಲಕೋಟೆ (Bagalakote) ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದವರಾಗಿದ್ದಾರೆ. ಇದನ್ನೂ ಓದಿ: ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಬಿಎಸ್ವೈ
ಮೃತರು ಕೂಲಿ ಕಾರ್ಮಿಕರಾಗಿದ್ದು, ಮುದ್ದೇಬಿಹಾಳದ ಚಿಕನ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು (Police) ಹಾಗೂ ಸ್ಥಳೀಯರು ಕಾಲುವೆಯಿಂದ ಶವ ಹೊರಕ್ಕೆ ತೆಗೆದಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ. ಇದನ್ನೂ ಓದಿ: ಟಿಕೆಟ್ ಗೊಂದಲ ನಿವಾರಣೆಗೆ ಅಖಾಡಕ್ಕಿಳಿದ ಕುಮಾರಸ್ವಾಮಿ – ತಿಂಗಳಾಂತ್ಯಕ್ಕೆ ಹಾಸನದಲ್ಲಿ ಸಭೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k