ಬೀದರ್ : ಬೈಕ್ಗಳ (Bike) ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೀದರ್ (Bidar) ಮೂಲದ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ (Maharashtra) ಬೀದರ್ ಗಡಿ ಭಾಗದ ಶಾಹಜನಿ ಔರಾದ (Aurad Shahajani) ಬಳಿ ನಡೆದಿದೆ.
ಮೃತರನ್ನು ಅಶೋಕ್ ಕೋಲೇಕರ್ (52) ಹಾಗೂ ಸೂರ್ಯಕಾಂತ್ ಖಂಡೇಕರ (65) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ತುಳಜಾಪುರ ಅಂಬಾ ಭವಾನಿ ದೇವಿಯ ದರ್ಶನಕ್ಕೆ ಹೋದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೇಸರ ಜವಳಗಾ ಗ್ರಾಮದ ಇಬ್ಬರು ಬೈಕ್ ಸವಾರರು ಮಸಣ ಸೇರಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಶುರುವಾಯ್ತು ಮತ್ತೊಂದು ಧರ್ಮ ದಂಗಲ್ – ಮದರಸಾ ಬ್ಯಾನ್ಗೆ ಹಿಂದೂ ಸಂಘಟನೆಗಳಿಂದ ಒತ್ತಾಯ
ಘಟನೆಯಲ್ಲಿ ಗಾಯಗೊಂಡ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಗಾಯಾಳುಗಳನ್ನು ಮಹಾರಾಷ್ಟ್ರದ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಮಹಾರಾಷ್ಟ್ರದ ಶಾಹಜನಿ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಹುಲ್, ಸೋನಿಯಾ ಗಾಂಧಿ ಅವರ ತ್ಯಾಗ ಬಹಳಷ್ಟಿದೆ: ಮಲ್ಲಿಕಾರ್ಜುನ ಖರ್ಗೆ